ಕಟ್ಟಡ ನಕ್ಷೆಗೆ ಹಳೇ ವ್ಯವಸ್ಥೆಯೇ ಗತಿ!


Team Udayavani, Aug 11, 2018, 11:30 AM IST

kattada.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಯಲ್ಲಿ ಪಾರದರ್ಶಕತೆ ತರಲು ಜಾರಿಗೊಳಿಸಿದ್ದ “ಆನ್‌ಲೈನ್‌ ನಕ್ಷೆ ಮಂಜೂರಾತಿ ತಂತ್ರಾಂಶ’ ಕೈಕೊಟ್ಟಿದೆ. 

ಪಾಲಿಕೆಯ ಅಧಿಕಾರಿಗಳು ನಕ್ಷೆ ನೀಡದೆ ಅನಗತ್ಯವಾಗಿ ಕಚೇರಿಗಳಿಗೆ ಅಲೆಸುತ್ತಾರೆ, ಲಂಚ ನೀಡದಿದ್ದರೆ ನಕ್ಷೆ ನೀಡುವುದಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದರಿಂದ ಆನ್‌ಲೈನ್‌ ವ್ಯವಸ್ಥೆಗೆ ಚಾಲನೆ ನೀಡಲಾಗಿತ್ತಾದರೂ ಕೇವಲ ಮೂರು ತಿಂಗಳ ಅವಧಿಯಲ್ಲಿ ತಂತ್ರಾಂಶದಲ್ಲಿ ದೋಷಗಳು ಕಂಡುಬಂದಿದ್ದು, ನಕ್ಷೆ ಪಡೆಯಲಾಗದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. 

ಪಾಲಿಕೆಯಿಂದ ಜಾರಿಗೊಳಿಸಿದ ಆನ್‌ಲೈನ್‌ ನಕ್ಷೆ ಮಂಜೂರಾತಿ ವ್ಯವಸ್ಥೆಯಲ್ಲಿ ಕಳೆದ ಎರಡು ತಿಂಗಳಿಂದ ಉಂಟಾದ ತಾಂತ್ರಿಕ ದೋಷದಿಂದಾಗಿ ಪಾಲಿಕೆಗೆ ಶುಲ್ಕದ ರೂಪದಲ್ಲಿ ಬರಬೇಕಿದ್ದ ಕೋಟ್ಯಂತರ ರೂ. ಸಹ ನಷ್ಟವಾಗಿದೆ.  ಜತೆಗೆ ನಕ್ಷೆ ಮಂಜೂರಾತಿ ವ್ಯವಸ್ಥೆ ಆಗ್ಗಾಗ್ಗೆ ಬದಲಾವಣೆಯಿಂದ ಸಾರ್ವಜನಿಕರಲ್ಲೂ ಗೊಂದಲ ಮೂಡಿದೆ. 

ಆನ್‌ಲೈನ್‌ ನಕ್ಷೆ ಮಂಜೂರಾತಿ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಬಿಬಿಎಂಪಿ, ಸಾಫ್ಟ್ಟೆಕ್‌ ಇಂಜಿನಿಯರ್ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಗೆ ನೀಡಿದೆ. ಅದರಂತೆ ಸಂಸ್ಥೆ ತಂತ್ರಾಂಶವನ್ನು ಹಲವು ತಿಂಗಳು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿ ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಿರುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಪಾಲಿಕೆ ಆನ್‌ಲೈನ್‌ ವ್ಯವಸ್ಥೆಗೆ ಚಾಲನೆ ನೀಡಿತ್ತು. ಆದರೆ, ತಂತ್ರಾಂಶ ಜಾರಿಯಾದ ಕೆಲವೇ ದಿನಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದೆ.  

ಶೀಘ್ರ ನಕ್ಷೆ ಮಂಜೂರು ಮಾಡುವ ಉದ್ದೇಶದಿಂದ ಆನ್‌ಲೈನ್‌ ವ್ಯವಸ್ಥೆ  ಜಾರಿಗೊಳಿಸಿರುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಆದರೆ, ತಂತ್ರಾಂಶದಲ್ಲಿನ ವೈಫ‌ಲ್ಯದಿಂದಾಗಿ ನಿಗದಿತ ಅವಧಿಯಲ್ಲಿ ನಕ್ಷೆ ದೊರೆಯದೆ ನಾವು ಸಮಸ್ಯೆ ಅನುಭವಿಸುತ್ತಿದ್ದೇವೆ. ಈಗಾಗಲೇ ಮನೆ ನಿರ್ಮಿಸಲು ಬ್ಯಾಂಕ್‌ನಿಂದ ಸಾಲ ಪಡೆದಿದ್ದೇವೆ. ಆದರೆ, ನಕ್ಷೆ ದೊರೆಯುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳೇ ವ್ಯವಸ್ಥೆಗೆ ಮೊರೆ: ಆನ್‌ಲೈನ್‌ ನಕ್ಷೆ ಮಂಜೂರಾತಿ ವಿಚಾರದಲ್ಲಿ ಪಾಲಿಕೆಯ ನೂತನ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಬಗ್ಗೆ  ಸಾರ್ವಜನಿಕರಿಂದ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಹಳೆಯ ವ್ಯವಸ್ಥೆಯಂತೆ ನಕ್ಷೆ ಮಂಜೂರು ಮಾಡಲು ಆಯುಕ್ತರು ಆದೇಶಿಸಿದ್ದಾರೆ. ಮಂಜೂರಾತಿ ಶುಲ್ಕವನ್ನು ಡಿಡಿ ಮೂಲಕ ಪಾಲಿಕೆಯ ಬ್ಯಾಂಕ್‌ ಖಾತೆಗೆ ಸಂದಾಯ ಮಾಡಿದರೆ, ಕಟ್ಟಡ ಪರವಾನಗಿ ಹಾಗೂ ನಕ್ಷೆಗಳಿಗೆ ಅನುಮೋದನೆ ನೀಡುವಂತೆಯೂ ಸೂಚಿಸಿದ್ದಾರೆ.

ಸಾರ್ವಜನಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆಯುವುದು ಹಾಗೂ ಕಟ್ಟಡ ನಕ್ಷೆ ಮಂಜೂರಾತಿಯಲ್ಲಿ ಪಾರದರ್ಶಕತೆ ತರಲು ಆನ್‌ಲೈನ್‌ ವ್ಯವಸ್ಥೆ ಜಾರಿಗೆ ತರಲಾಗಿತ್ತು. ಅದರಂತೆ ನಕ್ಷೆ ಮಂಜೂರಾತಿಯನ್ನು ಕಡ್ಡಾಯವಾಗಿ ಆನ್‌ಲೈನ್‌ ಮೂಲಕವೇ ಮಾಡಬೇಕೆಂದು ಆಯುಕ್ತರು ತಿಳಿಸಿದ್ದರು. ಆದರೆ, ತಂತ್ರಾಂಶ ದೋಷದಿಂದ ಪಾಲಿಕೆ ರೂಪಿಸಿದ್ದ ವ್ಯವಸ್ಥೆ  ವಿಫ‌ಲವಾದಂತಾಗಿದೆ.

ಈ ಮಧ್ಯೆ, ಆನ್‌ಲೈನ್‌ ನಕ್ಷೆ ಮಾದರಿಯಲ್ಲಿ ಜಾರಿಗೊಳಿಸಿದ್ದ ಆನ್‌ಲೈನ್‌ ಖಾತಾ ವ್ಯವಸ್ಥೆಯಲ್ಲಿಯೂ ಹಲವು ತಾಂತ್ರಿಕ ದೋಷಗಳು ಕಂಡುಬಂದಿದ್ದು, ಜನರು ಖಾತಾ ಪಡೆಯಲು ತೊಂದರೆಯಾಗುತ್ತಿದೆ. ಪಾಲಿಕೆಯ ಕಚೇರಿಗಳು ಹಾಗೂ ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸರ್ವರ್‌ ಡೌನ್‌ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದೆ. 

ಬೆಂಗಳೂರು ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿಯಾಗಿದ್ದು, ಪಾಲಿಕೆಗೆ ಒಂದು ತಂತ್ರಾಂಶದಲ್ಲಿ ಉಂಟಾಗಿರುವ ದೋಷಗಳನ್ನು ನಾಲ್ಕೈದು ತಿಂಗಳಿನಿಂದ ಸರಿಪಡಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ಆನ್‌ಲೈನ್‌ ವ್ಯವಸ್ಥೆಯನ್ನು ಮೂಲೆಗುಂಪು ಮಾಡಿ ಮತ್ತೆ ಹಳೆಯ ವ್ಯವಸ್ಥೆ ಜಾರಿಗೊಳಿಸುವ ಮೂಲಕ ಭ್ರಷ್ಟಾಚಾರ ನಡೆಸಲು ಕಾಂಗ್ರೆಸ್‌-ಜೆಡಿಎಸ್‌ ಆಡಳಿತ ಮುಂದಾಗಿದೆಯೇ ಎಂಬ ಅನುಮಾನ ಬರುತ್ತಿದೆ. 
-ಪದ್ಮನಾಭರೆಡ್ಡಿ, ಪ್ರತಿಪಕ್ಷ ನಾಯಕ

ತಂತ್ರಾಂಶದಲ್ಲಿ ಸಣ್ಣ-ಪುಟ್ಟ ದೋಷಗಳು ಕಂಡುಬಂದಿದ್ದು, ಅವುಗಳನ್ನು ಸರಿಪಡಿಸಲು ಸಂಸ್ಥೆಯವರು ಎರಡು ಮೂರು ದಿನಗಳ ಕಾಲಾವಕಾಶವನ್ನು ಕೋರಿದ್ದಾರೆ. ಉಳಿದಂತೆ ಆನ್‌ಲೈನ್‌ನಲ್ಲಿ ತೊಂದರೆಯಾದರೆ ಸಾರ್ವಜನಿಕರಿಗೆ ವಿಳಂಬವಾಗದಂತೆ ಹಳೆಯ ವ್ಯವಸ್ಥೆಯಂತೆ ನಕ್ಷೆ ಮಂಜೂರು ಮಾಡುವಂತೆ ಆಯುಕ್ತರು ಆದೇಶಿದ್ದು, ಆನ್‌ಲೈನ್‌ ವ್ಯವಸ್ಥೆ ರದ್ದಾಗಿಲ್ಲ. 
-ಎಂ.ಶಿವರಾಜು, ಆಡಳಿತ ಪಕ್ಷ

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.