ಮೆಟ್ರೋ ಜತೆ ಮಾರ್ಗವೂ ಹಸಿರು!


Team Udayavani, Jul 4, 2018, 12:41 PM IST

metro.jpg

ಬೆಂಗಳೂರು: “ನಮ್ಮ ಮೆಟ್ರೋ’ ರೈಲಿನ ಬಣ್ಣ ಮಾತ್ರ ಹಸಿರಲ್ಲ; ಇಡೀ ಮಾರ್ಗವೇ ಹಸಿರಿನಿಂದ ಕಂಗೊಳಿಸಲಿದೆ. ಹೌದು, ಮೆಟ್ರೋ ಹಸಿರು ಮಾರ್ಗದುದ್ದಕ್ಕೂ ಬರುವ ಕಂಬಗಳ ಮೇಲೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ)ವು “ವರ್ಟಿಕಲ್‌ ಗಾರ್ಡನ್‌’ ನಿರ್ಮಿಸಲು ಮುಂದಾಗಿದ್ದು, ಪ್ರತಿ ನಾಲ್ಕು ಕಂಬಗಳಿಗೊಂದು ಈ ಮಾದರಿಯ ಉದ್ಯಾನ ತಲೆಯೆತ್ತಲಿದೆ.

ಉದ್ಯಾನ ನಿರ್ಮಿಸದಿದ್ದರೆ ಜಾಹೀರಾತಿಗೆ ತಡೆ: ಈಗಿರುವ ಪೂರ್ವ-ಪಶ್ಚಿಮ ಕಾರಿಡಾರ್‌ನ ಮೆಟ್ರೋ ಕಂಬಗಳ ಮೇಲೆ ಬರೀ ಜಾಹೀರಾತುಗಳು ರಾರಾಜಿಸುತ್ತಿವೆ. ಆದರೆ, ಉತ್ತರ-ದಕ್ಷಿಣ ಕಾರಿಡಾರ್‌ನ ಕಂಬಗಳ ಮೇಲೆ ಜಾಹೀರಾತುಗಳ ಜತೆಗೆ ವರ್ಟಿಕಲ್‌ ಉದ್ಯಾನ ಬೆಳೆಸಲಾಗುವುದು. ಉದ್ದೇಶಿತ ಮಾರ್ಗಕ್ಕೆ ಸಂಬಂಧಿಸಿದ ಜಾಹೀರಾತುಗಳ ಟೆಂಡರ್‌ ದಾಖಲೆಗಳಲ್ಲೂ ಇದನ್ನು ಉಲ್ಲೇಖೀಸಿದ್ದು, ಗುತ್ತಿಗೆ ಪಡೆದವರಿಗೆ ಆರು ತಿಂಗಳ ಕಾಲಾವಕಾಶ ನೀಡಲಾಗಿದೆ. ಹಾಗೊಂದು ವೇಳೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿದ್ದರೆ, ಜಾಹೀರಾತು ಅಳವಡಿಕೆ ಅನುಮತಿ ತಡೆಹಿಡಿಯಲಿಕ್ಕೂ ಅವಕಾಶ ಕಲ್ಪಿಸಲಾಗಿದೆ. 

ರೀಚ್‌-3 ಮತ್ತು 3ಎ (ಸಂಪಿಗೆರಸ್ತೆ-ಪೀಣ್ಯ ಕೈಗಾರಿಕಾ ಪ್ರದೇಶ) ಹಾಗೂ ರೀಚ್‌-4 (ನ್ಯಾಷನಲ್‌ ಕಾಲೇಜು-ರಾಷ್ಟ್ರೀಯ ವಿದ್ಯಾಪೀಠ)ರಲ್ಲಿ ಬರುವ ಪ್ರತಿ ನಾಲ್ಕು ಕಂಬಗಳ ಪೈಕಿ ಒಂದು ಕಂಬದಲ್ಲಿ ವರ್ಟಿಕಲ್‌ ಉದ್ಯಾನ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಕಂಬಗಳ ಮೇಲೆ ಜಾಹೀರಾತು ಅಳವಡಿಕೆಗೆ ಗುತ್ತಿಗೆ ಪಡೆಯುವವರು ಇದನ್ನು ನಿರ್ಮಿಸಲಿದ್ದಾರೆ. 

96 ಕಂಬಗಳ ಮೇಲೆ ಗಾರ್ಡನ್‌: ಅದರಂತೆ ರೀಚ್‌-3 ಮತ್ತು 3ಎನಲ್ಲಿ ಒಟ್ಟು 357 ಕಂಬಗಳು ಬರಲಿದ್ದು, ಅದರಲ್ಲಿ 62 ಕಂಬಗಳು ಮತ್ತು ರೀಚ್‌-4ರಲ್ಲಿ 192 ಕಂಬಗಳಿದ್ದು, ಆ ಪೈಕಿ 34 ಕಂಬಗಳ ಮೇಲೆ ವರ್ಟಿಕಲ್‌ ಗಾರ್ಡನ್‌ ಗಮನಸೆಳೆಯಲಿದೆ. ಇದರಿಂದ ಕಾಂಕ್ರೀಟ್‌ ಪಿಯರ್‌ (ಕಂಬ)ಗಳು ಮರೆಮಾಚುವುದರ ಜತೆಗೆ ಆಕರ್ಷಕವೂ ಆಗಲಿವೆ. ಉದ್ಯಾನ ಕಲೆಯನ್ನು ಅಭಿವೃದ್ಧಿಪಡಿಸುವುದು ಕೂಡ ಇದರ ಉದ್ದೇಶವಾಗಿದೆ. ಗುತ್ತಿಗೆ ಪಡೆದ ಪರವಾನಗಿದಾರರು ನುರಿತ ವೃತ್ತಿಗಾರರಿಂದ ಇದನ್ನು ಅಭಿವೃದ್ಧಿಪಡಿಸತಕ್ಕದ್ದು ಎಂದು ಬಿಎಂಆರ್‌ಸಿ ಸ್ಪಷ್ಟಪಡಿಸಿದೆ. 

ವರ್ಟಿಕಲ್‌ ಉದ್ಯಾನ ಬೆಳೆಸುವ ಬಗ್ಗೆ ಅಂತರ್ಜಾಲದಲ್ಲಿ ಸಾಕಷ್ಟು ಮಾಹಿತಿ ಲಭ್ಯವಿದ್ದು, ಈ ಬಗ್ಗೆ ಪರವಾನಗಿದಾರರ ಗಮನಕ್ಕೆ ತರಲಾಗಿದೆ. ಈ ಕ್ರಮದಿಂದ ನಾಗರಿಕರಲ್ಲಿ ಹಸಿರೀಕರಣದ ಬಗ್ಗೆ ಒಲವು ಮೂಡಲಿದೆ. ವರ್ಟಿಕಲ್‌ ವಿನ್ಯಾಸ ಅಭಿವೃದ್ಧಿ ಮತ್ತು ನಿರ್ವಹಣೆಯಿಂದ ಪರವಾನಗಿದಾರರಿಗೆ ತಗಲುವ ವೆಚ್ಚವನ್ನು ಸಿಎಸ್‌ಆರ್‌ (ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿ) ನಿಧಿಯಿಂದ ಒದಗಿಸಲಾಗುವುದು.

ಗುತ್ತಿಗೆದಾರರು ವರ್ಟಿಕಲ್‌ ಉದ್ಯಾನಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ತಮ್ಮ ಪ್ರಸ್ತಾವಿತ ವಿನ್ಯಾಸ ಹಾಗೂ ವೃತ್ತಿಪರರ ನೆರವಿನ ವಿವರಗಳನ್ನು ಸಲ್ಲಿಸಬೇಕು. ಅವರ ಉದ್ದೇಶಿತ ವಿನ್ಯಾಸವು ತಾಂತ್ರಿಕ ಮೌಲ್ಯಮಾಪನದ ಭಾಗವಾಗಿಲ್ಲದಿದ್ದರೂ, ಉದ್ಯಾನದ ಅಂತಿಮ ನಿರ್ಮಾಣದ ಮಾದರಿಯನ್ನು ಪರಿಗಣಿಸಲಾಗುವುದು ಎಂದೂ ಬಿಎಂಆರ್‌ಸಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.  

ನೂತನ ಎಂಡಿ ಅಧಿಕಾರ ಸ್ವೀಕಾರ: ಬಿಎಂಆರ್‌ಸಿ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್‌ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಶಾಂತಿನಗರದಲ್ಲಿರುವ ನಿಗಮದ ಕಚೇರಿಗೆ ಆಗಮಿಸಿದ ನೂತನ ವ್ಯವಸ್ಥಾಪಕ ನಿರ್ದೇಶಕರಿಗೆ ಅಧಿಕಾರಿಗಳು ಅಭಿನಂದಿಸಿದರು. ನಿರ್ದೇಶಕರಾದ ಢೋಕೆ, ವಿಜಯಕುಮಾರ್‌ ಧೀರ್‌, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯು.ಎ. ವಸಂತರಾವ್‌ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಯಾಮರಾ ಬಳಸಲು ಆಧಾರ್‌ ಅಗತ್ಯ: ಕ್ಯಾಮರಾದೊಂದಿಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ದಾಖಲಿಸುವುದು ಕಡ್ಡಾಯ. ಪೂರ್ವಾನುಮತಿ ಇಲ್ಲದೆ, ಕ್ಯಾಮರಾ ತೆಗೆದುಕೊಂಡು ಹೋಗುವಂತಿಲ್ಲ. ಹಾಗೊಂದು ವೇಳೆ ಕ್ಯಾಮರಾದೊಂದಿಗೆ ಪ್ರಯಾಣಿಸಬೇಕಾದರೆ, ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರದಲ್ಲಿರುವ ಭದ್ರತಾ ಸಿಬ್ಬಂದಿ ಬಳಿ ಇರುವ ಪುಸ್ತಕದಲ್ಲಿ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನಮೂದಿಸುವುದು ಅತ್ಯಗತ್ಯ. 

ವಿಜಯನಗರ, ವಿಧಾನಸೌಧ, ಬೈಯಪ್ಪನಹಳ್ಳಿ, ಮಲ್ಲೇಶ್ವರ, ಯಶವಂತಪುರ ನಿಲ್ದಾಣಗಳಲ್ಲಿ ಇದನ್ನು ಆದೇಶದಂತೆ ಪಾಲಿಸಲಾಗುತ್ತಿದೆ. ಬ್ಯಾಗ್‌ ತಪಾಸಣಾ ಯಂತ್ರದಲ್ಲಿ ಕ್ಯಾಮರಾ ಕಂಡುಬಂದರೆ, ಪ್ರಯಾಣಿಕರಿಂದ ಅಗತ್ಯ ಮಾಹಿತಿಯನ್ನು ನಮೂದಿಸಿಕೊಂಡು, ಯಾವುದೇ ಕಾರಣಕ್ಕೂ ಫೋಟೋ ಕ್ಲಿಕ್ಕಿಸುವಂತಿಲ್ಲ ಎಂದು ತಾಕೀತು ಮಾಡಿ ಕಳುಹಿಸಲಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.