ಸರ್ಕಾರದ ಭ್ರಷ್ಟಾಚಾರವನ್ನು ಜನ ಮರೆತಿಲ್ಲ
Team Udayavani, Apr 21, 2018, 11:56 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದು ಕಮಿಷನ್ ಪಡೆಯುವ ಸರ್ಕಾರವಲ್ಲ ಎನ್ನುತ್ತಿದ್ದಾರೆ. ಆದರೆ ದುಬಾರಿ ವಾಚ್ನಿಂದ ಹಿಡಿದು ಇತ್ತೀಚಿನ ಭ್ರಷ್ಟಾಚಾರಗಳ ಬಗ್ಗೆ ಒಂದು ಕೊಠಡಿ ಭರ್ತಿಯಾಗುವಷ್ಟು ದಾಖಲೆಗಳನ್ನು ಬಿಜೆಪಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮದು 10 ಪರ್ಸೆಂಟ್ ಸರ್ಕಾರ ಎನ್ನಲು ಪುರಾವೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಅರ್ಕಾವತಿ ಬಡಾವಣೆ ಅಕ್ರಮ, ಮರಳು ದಂಧೆ, ಉಕ್ಕಿನ ಸೇತುವೆ, ಕಲ್ಲಿದ್ದಲು ಪೂರೈಕೆ ಒಪ್ಪಂದ, ಗೋವಿಂದರಾಜು ಡೈರಿ, ವೈಟ್ ಟಾಪಿಂಗ್ ಯೋಜನೆ ಅಕ್ರಮವನ್ನು ಸಿದ್ದರಾಮಯ್ಯ ಮರೆತಿರಬಹುದು. ಆದರೆ ಜನತೆ ಮರೆತಿಲ್ಲ ಎಂದು ಹೇಳಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಿಂದು ಅಲ್ಲ, ಜೈನರೆಂದು ಸಿದ್ದರಾಮಯ್ಯ ಅವರು ಟೀಕಿಸಿರುವುದು ದುರದೃಷ್ಟಕರ. ಅಮಿತ್ ಶಾ ಅವರು ಸನಾತನ ಹಿಂದು. ಸಿದ್ದರಾಮಯ್ಯ ಅವರ ಹೇಳಿಕೆಯು ಅವರ ಒಡೆದು ಆಳುವ ನೀತಿಯನ್ನು ತೋರಿಸುತ್ತದೆ.
ಅಮಿತ್ ಶಾ ಅವರು ತಮ್ಮ ಪ್ರವಾಸದ ವೇಳೆ ಕೃಷಿಕರು ಸೇರಿದಂತೆ ನಾನಾ ಸಮುದಾಯಗಳೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಹೆದರಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಯಾತ್ರೆ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಮುಂದಾಗಿರುವ ಸಿದ್ದರಾಮಯ್ಯ ಅವರಿಗೆ ಮೊದಲೇ ಫಲಿತಾಂಶ ಗೊತ್ತದಂತಾಗಿದೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಷಡ್ಯಂತ್ರ ನಡೆಸಿ ಸೋಲಿಸಿದ್ದರು. ಸಿದ್ದರಾಮಯ್ಯನವರಿಗೆ ಈಗ ಅದೇ ಚಿಂತೆ ಕಾಡುತ್ತಿದೆ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ ಮೂಲೆಗುಂಪಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.