ಹಸುವಿಗೆ ಚಿತ್ರಹಿಂಸೆ ನೀಡಿ ಕೊಂದ ದುಷ್ಕರ್ಮಿಗಳು
Team Udayavani, Jul 29, 2018, 12:02 PM IST
ಕೆ.ಆರ್.ಪುರ: ಮದ್ಯದ ಅಮಲಿನಲ್ಲಿ ಕೆಲ ದುಷ್ಕರ್ಮಿಗಳು ಹಸುವೊಂದಕ್ಕೆ ಚಿತ್ರಹಿಂಸೆ ನೀಡಿ ಕೊಂದಿರುವ ಘಟನೆ ಸಮೀಪದ ಭಟ್ಟರಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಭಟ್ಟರಹಳ್ಳಿ ನಿವಾಸಿ ನಾರಾಯಣಪ್ಪ ಎಂಬುವವರ ಮನೆ ಎದುರು ಕಟ್ಟಿಹಾಕಿದ್ದ ಹಸುವನ್ನು ಶುಕ್ರವಾರ ರಾತ್ರಿ ಬಿಚ್ಚಿಕೊಂಡು ಹೋದ ದುಷ್ಕರ್ಮಿಗಳು, ಆಂಜನೇಯಸ್ವಾಮಿ ಬಡಾವಣೆಯ ನಿರ್ಜನ ಪ್ರದೇಶದಲ್ಲಿನ ನಿರ್ಮಾಣ ಹಂತದ ಮನೆಗೆ ಅದನ್ನು ಎಳೆದೊದ್ದಿದ್ದಾರೆ. ನಂತರ ಹಸುವಿನ ಕಾಲುಗಳನ್ನು ಕಟ್ಟಿ, ಮದ್ಯದ ಬಾಟಲಿಯಿಂದ ಗುಪ್ತಾಂಗ ಹಾಗೂ ಕೆಚ್ಚಲಿಗೆ ಚುಚ್ಚಿ ಕೊಂದಿದ್ದಾರೆ.
ನಾರಾಯಣಪ್ಪ ಅವರು 15 ಹಸುಗಳನ್ನು ಸಾಕಿದ್ದು, ರಾತ್ರಿ ಒಂದು ಹಸು ಕಾಣದಿದ್ದಾಗ ಇಡೀ ರಾತ್ರಿ ಹಸುವಿಗಾಗಿ ಹುಡುಕಾಡಿದರೂ ದೊರೆತಿಲ್ಲ. ಶನಿವಾರ ಬೆಳಗ್ಗೆ ನಿರ್ಮಾಣ ಹಂತದ ಮನೆ ಬಳಿ ಹಸು ಮೃತಪಟ್ಟಿರುವುದನ್ನು ಕಂಡ ದಾರಿ ಹೋಕರು, ಗ್ರಾಮಕ್ಕೆ ಬಂದು ವಿಷಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ