ರಾಜಕೀಯ ಮೇಲಾಟಕ್ಕೆ ಪೊಲೀಸರು ಹೈರಾಣು


Team Udayavani, Jul 15, 2019, 3:07 AM IST

rajakiya

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ರಾಜಕೀಯ ಪ್ರಹಸನ ಪೊಲೀಸ್‌ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಕಾರ್ಯವೈಖರಿಯ ಮೇಲೆ ತಟಸ್ಥತೆ ಆವರಿಸಲು ಕಾರಣವಾಗಿದೆ. ಜು.12ರಂದು ಪೊಲೀಸ್‌ ಇಲಾಖೆಯಲ್ಲಿ ನಡೆಸಲಾಗಿದ್ದ 21 ಡಿವೈಎಸ್ಪಿ ಹಾಗೂ 110 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಆದೇಶ, ಕೆಲವೇ ಗಂಟೆಗಳಲ್ಲಿ ರದ್ದಾಗಿದ್ದು ಇದಕ್ಕೆ ತಾಜಾ ಉದಾಹರಣೆ.

ರಾಜಕೀಯ ಮೇಲಾಟಗಳಿಂದ ಉಂಟಾದ ವರ್ಗಾವಣೆ ರದ್ದು ಆದೇಶ ಹಲವು ತಿಂಗಳುಗಳಿಂದ ಸೂಕ್ತ ಸ್ಥಳ ನಿಯೋಜನೆಗೊಳ್ಳದೆ ಉಳಿದಿದ್ದ ಅಧಿಕಾರಿಗಳ ಆಸೆಗೆ ಮತ್ತೆ ತಣ್ಣೀರೆರಚಿದೆ. ಮತ್ತೂಂದೆಡೆ, ವರ್ಗಾವಣೆ ತಲೆ ಬಿಸಿ ಹಾಗೂ ಬಂದೋಬಸ್ತ್ ಸೇರಿದಂತೆ ಇನ್ನಿತರ ಕಾರ್ಯಗಳಲ್ಲಿ ಪೊಲೀಸ್‌ ಅಧಿಕಾರಿಗಳು ನಿರತರಾಗಿರುವುದರಿಂದ ಅದರ ನೇರ ಪರಿಣಾಮ ಸಾರ್ವಜನಿಕರ ಮೇಲೆ ಉಂಟಾಗುತ್ತಿದೆ.

ರಾಜ್ಯದಲ್ಲಿ ಉಂಟಾಗಿರುವ ರಾಜಕೀಯದ ಕ್ಷಿಪ್ರಕ್ರಾಂತಿಯಿಂದ ಸರ್ಕಾರದ ಬುಡವೇ ಅಲ್ಲಾಡುತ್ತಿದೆ. ಈ ಹಂತದಲ್ಲಿ ವರ್ಗಾವಣೆ, ಆಡಳಿತಕ್ಕೆ ಸಂಬಂಧಿಸಿದಂತೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಗೊಂದಲದಲ್ಲಿ ಉನ್ನತ ಅಧಿಕಾರಿಗಳಿದ್ದಾರೆ. ಕೆಳಹಂತದ ಅಧಿಕಾರಿಗಳು ವರ್ಗಾವಣೆ ನಿರೀಕ್ಷೆ, ಬಂದೋಬಸ್ತ್ನಂತಹ ಕೆಲಸಗಳು ಧುತ್ತನೆ ಬರಲಿವೆಯಲ್ಲ ಎಂಬ ಚಿಂತೆಯಲ್ಲಿದ್ದಾರೆ.

ಅತೃಪ್ತರ ಶಾಸಕರದ್ದೇ ಮೇಲುಗೈ: ವರ್ಗಾವಣೆ ಬಳಿಕ ಹಲವು ತಿಂಗಳಿನಿಂದ ನಿಯುಕ್ತಿ ಸ್ಥಳ ಸಿಗದೆ ಅಥವಾ ಇಚ್ಛಿಸಿದ ಸ್ಥಳ ಪಡೆಯಲು ಕಾದಿದ್ದ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ಜುಲೈ 12ರಂದು ನೀಡಲಾದ ವರ್ಗಾವಣೆ ಆದೇಶದಿಂದ ಕೊಂಚ ನಿರಮ್ಮಳರಾಗಿದ್ದರು.

ಆದರೆ, ವರ್ಗಾವಣೆ ಪಟ್ಟಿಯಲ್ಲಿ ಅತೃಪ್ತ ಶಾಸಕರು ಶಿಫಾರಸು ಮಾಡಿದ್ದ ಕೆಲವು ಅಧಿಕಾರಿಗಳಿಗೆ ಸ್ಥಳಗಳು ಅದಲು ಬದಲಾಗಿದ್ದವು. ಕೆಲವರಿಗೆ ಬಯಸಿದ ಸ್ಥಾನಗಳು ಸಿಕ್ಕಿರಲಿಲ್ಲ. ವರ್ಗಾವಣೆ ಆದೇಶದ ಬಳಿಕ ಕೆಲವೇ ಗಂಟೆಗಳಲ್ಲಿ ಈ ಬಗ್ಗೆ ಅಸಮಾಧಾನ ಹೊರಬಿದ್ದಿತ್ತು. ಕೂಡಲೇ ಎಚ್ಚೆತ್ತುಕೊಂಡ ಸರ್ಕಾರ ವರ್ಗಾವಣೆ ಆದೇಶವನ್ನೇ ರದ್ದುಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಉನ್ನತ ಅಧಿಕಾರಿಗಳಿಗೂ ಟೆನ್ಶನ್‌: ರಾಜ್ಯ ಸರ್ಕಾರದ ಮೇಲೆ ತೂಗುಕತ್ತಿ ನೇತಾಡುತ್ತಿದೆ. ಹೀಗಾಗಿ, ಮುಂದೆ ಯಾವ ಸರ್ಕಾರ ರಚನೆಯಾಗಲಿದೆ ಎಂಬುದು ಗೊತ್ತಾಗುತ್ತಿಲ್ಲ. ಹೀಗಾಗಿ, ಹಾಲಿ ಸರ್ಕಾರದ ಮಂತ್ರಿಗಳು ಹಾಗೂ ಪ್ರಮುಖರ ಶಿಫಾರಸು ಕೃಪೆಯಿಂದ ಇಲಾಖೆಯ ಆಯಕಟ್ಟಿನ ಸ್ಥಾನಗಳನ್ನು ಅಲಂಕರಿಸಿದ ಹಿರಿಯ ಅಧಿಕಾರಿಗಳಿಗೂ ಟೆನ್ಶನ್‌ ಶುರುವಾಗಿದೆ. ಕೆಲವೇ ದಿನಗಳ ಹಿಂದೆ ಪಡೆದುಕೊಂಡ ಉನ್ನತ ಸ್ಥಾನವನ್ನು ಹೊಸ ಸರ್ಕಾರ ಬಂದರೆ ಕಳೆದುಕೊಳ್ಳಬಹುದು ಎಂಬ ಆತಂಕದಲ್ಲಿ ಅವರಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪುನಃ ಲಕ್ಷ ಲಕ್ಷ ರೂ. ಎಣಿಸಬೇಕು!: ಬೆಂಗಳೂರು ಪಶ್ಚಿಮ ವಿಭಾಗ, ಕೇಂದ್ರ ವಿಭಾಗ ಸೇರಿದಂತೆ ಹಲವು ಆಯಕಟ್ಟಿನ ಪೊಲೀಸ್‌ ಠಾಣೆಗಳಲ್ಲಿ ಸ್ಥಳ ನಿಯೋಜನೆ ಸಿಗಬೇಕಾದರೆ ರಾಜಕಾರಣಿಗಳ ಕೃಪಾಕಟಾಕ್ಷವಿರಬೇಕು ಇಲ್ಲವೇ ಲಕ್ಷ ಲಕ್ಷ ರೂ.ದುಡ್ಡು ನೀಡಿ ಪಡೆದುಕೊಳ್ಳಬೇಕು ಎಂಬ ಆರೋಪ ಈ ಹಿಂದಿನಿಂದಲೂ ಇಲಾಖೆಯೊಳಗಿದೆ.

ಇದೀಗ, ಬಯಸಿದ ಸ್ಥಾನಗಳಲ್ಲಿ ಪ್ರತಿಷ್ಠಾಪನೆಗೊಳ್ಳಲು ಹಣ ನೀಡಿರುವ ಅಧಿಕಾರಿಗಳು ವರ್ಗಾವಣೆ ಆದೇಶ ಹೊರಬಿದ್ದ ಕೂಡಲೇ ಕೊಂಚ ನಿರಾಳರಾಗಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ವರ್ಗಾವಣೆ ಆದೇಶ ರದ್ದುಗೊಂಡಿದೆ. ಒಂದು ವೇಳೆ ಸರ್ಕಾರ ಬದಲಾದರೆ ಪುನ: ಹಣ ಖರ್ಚು ಮಾಡಬೇಕಾಗಿದೆ ಎಂಬ ಚಿಂತೆಯಲ್ಲಿ ಅವರಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಗೃಹ ಸಚಿವರಿಗೇ ಗೊತ್ತಿರಲಿಲ್ಲ!: ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ವರ್ಗಾವಣೆ ವಿಚಾರ ಖುದ್ದು ಗೃಹ ಸಚಿವ ಎಂ.ಬಿ ಪಾಟೀಲರಿಗೆ ಗೊತ್ತಿರಲಿಲ್ಲ. ವರ್ಗಾವಣೆ ಆದೇಶದ ಬಳಿಕ ಈ ಬಗ್ಗೆ ಸರ್ಕಾರದಲ್ಲಿ ಅಪಸ್ವರ ಎದ್ದಿತ್ತು. ಹೀಗಾಗಿ, ರಾಜ್ಯಪಾಲರ ಸೂಚನೆ ಮುಂದಿಟ್ಟು ವರ್ಗಾವಣೆ ಆದೇಶ ರದ್ದು ಮಾಡಲಾಯಿತು.

ಪೊಲೀಸ್‌ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ರಾಜಕಾರಣಿಗಳ ಶಿಫಾರಸು ಇರಬಾರದು ಎಂದು ಸುಪ್ರೀಂಕೋರ್ಟ್‌, ಹೈಕೋರ್ಟ್‌ಗಳ ಸ್ಪಷ್ಟ ಸೂಚನೆಯಿದೆ. ಆದರೆ, ವರ್ಗಾವಣೆ ದಂಧೆ ಮಾತ್ರ ಮುಂದುವರಿದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.