ಹೆಚ್ಚುವರಿ ಖಾತೆ ಕೈತಪ್ಪುವ ಸಾಧ್ಯತೆ
Team Udayavani, Sep 6, 2018, 6:05 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಾದರೆ ಕೆಲವು ಸಚಿವರ ಬಳಿ ಇರುವ ಖಾತೆಗಳು ಕೈ ತಪ್ಪುವುದರ ಜೊತೆಗೆ ಖಾತೆಗಳೂ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಡಾ.ಜಿ. ಪರಮೇಶ್ವರ್ ಅವರು ಗೃಹ, ಬೆಂಗಳೂರು ಅಭಿವೃದ್ಧಿ, ಯುವಜನ ಮತ್ತು ಕ್ರೀಡಾ ಇಲಾಖೆ, ಡಿ.ಕೆ.ಶಿವಕುಮಾರ್ ಅವರು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ, ಯು.ಟಿ.ಖಾದರ್ ಅವರು ವಸತಿ ಹಾಗೂ ನಗರಾಭಿವೃದ್ಧಿ, ಕೃಷ್ಣ ಬೈರೇಗೌಡ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ರಾಜ್ ಹಾಗೂ ಕಾನೂನು ಸಂಸದೀಯ ಖಾತೆಗಳನ್ನು ಹೊಂದಿದ್ದ, ಹೆಚ್ಚುವರಿ ಖಾತೆಗಳು ಕೈ ತಪ್ಪುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆಯಲ್ಲಿ ಹಿರಿಯ ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಎಂ.ಬಿ. ಪಾಟೀಲ್ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಪ್ರಮುಖ ಖಾತೆಗಳಿಗೆ ಬೇಡಿಕೆ ಇಡಬಹುದು ಎಂದು ಹೇಳಲಾಗಿದೆ.