ಅಸಮಾನತೆ ತೊಲಗಿದರೆ ದೇಶದ ಪ್ರಗತಿ


Team Udayavani, Oct 13, 2017, 10:09 AM IST

Blore-2.jpg

ಬೆಂಗಳೂರು: “ಸಮಾಜದಲ್ಲಿನ ಅಸಮಾನತೆಗಳು ತೊಲಗದ ಹೊರತು, ಭಾರತ ಸೂಪರ್‌ಪವರ್‌ ಆಗಲು ಸಾಧ್ಯವಿಲ್ಲ, ಸೂಪರ್‌ಪವರ್‌ ಆಗಿರುವ ಅಮೆರಿಕ, ಚೀನದಂತಹ ದೇಶಗಳೊಂದಿಗೆ ಪೈಪೋಟಿ ನಡೆಸಲಿಕ್ಕೂ ಶಕ್ತ ಆಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಹಾಗೂ ಲೋಹಿಯಾ ಒಡನಾಡಿ ಮದನಲಾಲ್‌ ಹಿಂದ್‌ ಅಭಿಪ್ರಾಯಪಟ್ಟರು.

ನಗರದ ಗಾಂಧಿ ಭವನದಲ್ಲಿ ಡಾ.ರಾಮಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಗಾಂಧಿ ಸ್ಮಾರಕ ನಿಧಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕೋಶ ಸಂಯುಕ್ತವಾಗಿ ಗುರುವಾರ ಹಮ್ಮಿಕೊಂಡಿದ್ದ “ಲೋಹಿಯಾ ನೆನಪು-50′ ಉದ್ಘಾಟಿಸಿ ಮಾತನಾಡಿದ ಅವರು, ಶೈಕ್ಷಣಿಕ, ಆರ್ಥಿಕ ಅಸಮಾನತೆಯಿಂದ ದೇಶ ಬಳಲುತ್ತಿದೆ. ಈ ಅಸಮಾನತೆಗಳನ್ನು ಹೋಗಲಾಡಿಸದೆ, ಭಾರತ ಸೂಪರ್‌ಪವರ್‌ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.

ದೇಶದ ಪ್ರಧಾನಿ, ಮುಖ್ಯಮಂತ್ರಿಯಿಂದ ಹಿಡಿದು ಒಬ್ಬ ಕೂಲಿ ಕಾರ್ಮಿಕನವರೆಗಿನ ಎಲ್ಲ ಮಕ್ಕಳಿಗೂ ಏಕರೂಪ ಶಿಕ್ಷಣದ ಕನಸು ಕಂಡಿದ್ದರು ಲೋಹಿಯಾ. ಆದರೆ, ಇಂದು ಒಂದೆಡೆ ಒಂದು ಮಗುವಿನ ಪ್ರಾಥಮಿಕ ಶಿಕ್ಷಣಕ್ಕೆ ತಿಂಗಳಿಗೆ 50 ಸಾವಿರ ರೂ. ಸುರಿಯಲಾಗುತ್ತಿದೆ. ಮತ್ತೂಂದೆಡೆ ಮಗುವಿನ ಶಿಕ್ಷ ಣಕ್ಕೂ ಗತಿ ಇಲ್ಲ. ಎಲ್ಲಿಯವರೆಗೆ ಪ್ರಾಥಮಿಕ ಶಿಕ್ಷಣದಲ್ಲಿ ಸಮಾನತೆ ಬರುವುದಿಲ್ಲವೋ ಅಲ್ಲಿಯವರೆಗೂ ಲೋಹಿಯಾ ಪ್ರಸ್ತುತ ಆಗಿರುತ್ತಾರೆ ಎಂದು ತಿಳಿಸಿದರು.

ಪರ್ಯಾಯ ಸಾಂಸ್ಕೃತಿಕ ರಾಜಕಾರಣ ಬೇಕು: “ಕರ್ನಾಟಕ ರಾಜಕಾರಣದಲ್ಲಿ ಲೋಹಿಯಾ ಚಿಂತನೆಗಳ ಪ್ರಭಾವ’ ಕುರಿತು ಮಾತನಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್‌ ಅಮಿನ್‌ಮಟ್ಟು, ಕೋಮುವಾದದ ಸಾಂಸ್ಕೃತಿಕ ರಾಜಕಾರಣ ಎದುರಿಸಲು ಪರ್ಯಾಯವಾದ ಮತ್ತೂಂದು ಸಾಂಸ್ಕೃತಿಕ ರಾಜಕಾರಣ ಕಟ್ಟುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. 

ಇಂದು ನಾವು ಮಾಡಬೇಕಾದದ್ದು ಚುನಾವಣಾ ರಾಜಕಾರಣವಲ್ಲ; ಸಾಂಸ್ಕೃತಿಕ ರಾಜಕಾರಣ. ಈ ನಿಟ್ಟಿನಲ್ಲಿ ಲೋಹಿಯಾ ಚಿಂತನೆ ಮಾತ್ರ ನಮಗೆ ಮಾದರಿ. ಯಾಕೆಂದರೆ, ಇಂದಿನ ಕೋಮುವಾದ ಎದುರಿಸಲು ಜಾತಿ ಮತ್ತು ಧರ್ಮದ ಬಗ್ಗೆ ಸ್ಪಷ್ಟತೆ ಇರಬೇಕು. ಇವೆರೆಡರ ಬಗ್ಗೆ ಅತ್ಯಂತ ಸ್ಪಷ್ಟವಾಗಿ ಮಾತನಾಡಿದವರು ಲೋಹಿಯಾ. ರಾಜಕೀಯ ಸಂದೇಶದ ರವಾನೆಗೆ ಸಂಸ್ಕೃತಿ ಒಂದು ಸಾಧನ.

ರಾಜಕೀಯ ಎಂಬುದು ಅಲ್ಪಕಾಲೀನ ಧರ್ಮ; ಧರ್ಮ ಎನ್ನುವುದು ದೀರ್ಘ‌ಕಾಲೀನ ರಾಜಕೀಯ ಲೋಹಿಯಾ ಬಣ್ಣಿಸಿದ್ದರು ಎಂದರು. ಮಾಜಿ ಅಡ್ವೊಕೇಟ್‌ ಜನರಲ್‌ ಪ್ರೊ. ರವಿವರ್ಮಕುಮಾರ್‌, ಇಂದಿರಾ ಕೃಷ್ಣಪ್ಪ, ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ. ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.