ಮರಳು ಸಮಸ್ಯೆ ನಿವಾರಿಸುವ ಉದ್ದೇಶ
Team Udayavani, Jun 8, 2019, 3:04 AM IST
ಬೆಂಗಳೂರು: ಮರಳು ಅಭಾವ ಹಾಗೂ ಕೃತಕ ಬೇಡಿಕೆ ಸಮಸ್ಯೆ ತಪ್ಪಿಸಲು ಮಂಗಳೂರು ನಗರದಲ್ಲಿ “ಸ್ಯಾಂಡ್ ಬಜಾರ್’ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸುವ ಚಿಂತನೆಯಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹದಿನೈದು ದಿನಗಳ ಹಿಂದೆ ಮಂಗಳೂರು ನಗರದಲ್ಲಿ ಆರಂಭಿಸಿರುವ ಸ್ಯಾಂಡ್ ಬಜಾರ್ ಆ್ಯಪ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಅಗತ್ಯ ಇರುವವರಿಗೆ ಬೇಕಾದಷ್ಟು ಮರಳು ನ್ಯಾಯಯುತ ಬೆಲೆಯಲ್ಲಿ ಸಿಗುತ್ತಿದೆ ಎಂದು ಹೇಳಿದರು.
ಮರಳಿನ ಅಗತ್ಯ ಇರುವವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಬಳಿ ನೋಂದಾಯಿಸಬೇಕು. ಆ ನಂತರ ಲಾರಿ ಹಾಗೂ ಮರಳು ಎಲ್ಲಿ ಸಿಗುತ್ತದೆ ಎಂಬುದರ ಮಾಹಿತಿ ಅವರ ಮೊಬೈಲ್ಗೆ ರವಾನೆಯಾಗಲಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯೇ ಮರಳಿಗೆ ದರ ನಿಗದಿಪಡಿಸಲಿದೆ. ಮರಳು ಸಾಗಣೆ ಲಾರಿ ಹೊಂದಿರುವವರು ನೋಂದಣಿ ಮಾಡಿಸಿಕೊಂಡಿರಬೇಕು. ಹೀಗಾಗಿ, ಜಿಲ್ಲಾಡಳಿತ ವತಿಯಿಂದಲೇ ಮರಳು ಅಗತ್ಯ ಇದ್ದವರಿಗೆ ಪೂರೈಕೆಯಾಗುತ್ತಿದೆ ಎಂದು ತಿಳಿಸಿದರು.
ಲಾರಿಗೆ ಪ್ರತಿ ಕಿ.ಮೀ.ಗೆ ಇಂತಿಷ್ಟು ಹಣ ನಿಗದಿಪಡಿಸಲಾಗುತ್ತದೆ. ಮರಳಿಗೂ ದರ ನಿಗದಿಪಡಿಸಲಾಗುತ್ತದೆ. ಗ್ರಾಹಕರು ಜಿಲ್ಲಾಡಳಿತಕ್ಕೆ ನೇರವಾಗಿ ಹಣ ಪಾವತಿಸಿ ಅನುಮತಿ ಪಡೆಯಬಹುದು. ಜಿಲ್ಲಾಡಳಿತ ಮರಳು ಬ್ಲಾಕ್ ಗುತ್ತಿಗೆದಾರರಿಗೆ ಹಾಗೂ ಲಾರಿ ಮಾಲೀಕರಿಗೆ ಹಣ ಪಾವತಿಸಲಿದೆ. ಈ ವ್ಯವಸ್ಥೆಯಿಂದ ಕೃತಕ ಮರಳು ಅಭಾವ, ಮನಸೋಯಿಚ್ಛೆ ದರ ಹೆಚ್ಚಳ, ಅಕ್ರಮ ಸಾಗಣೆಗೆ ಕಡಿವಾಣ ಬಿದ್ದಿದೆ. ಈ ಪದ್ಧತಿ ಯಶಸ್ವಿಯಾದರೆ ರಾಜ್ಯಾದ್ಯಂತ ವಿಸ್ತರಣೆ ಮಾಡಬಹುದು. ಇದರಿಂದ ಮರಳು ಸಮಸ್ಯೆ ತಲೆದೋರುವುದು ತಪ್ಪಲಿದೆ. ಅಗತ್ಯ ಇದ್ದವರಿಗೆ ಮರಳು ಸಿಗಲಿದೆ ಎಂದರು.
ಸಿಸಿ ಟಿವಿ: ಕೇರಳ ಗಡಿ ಭಾಗಕ್ಕೆ ಮರಳು ಅಕ್ರಮ ಸಾಗಾಟ ಜತೆಗೆ ಡ್ರಗ್ಸ್ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಭಾಗದ ಚೆಕ್ಪೋಸ್ಟ್ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಜಾಗೃತ ದಳ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಅಕ್ರಮ ಮರಳು ಸಾಗಾಟದಾರರು ಮಾಹಿತಿ ರವಾನೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಕ್ರಮ ತಡೆಗಟ್ಟುವ ಅಧಿಕಾರಿಗಳು ಎಲ್ಲಿ ಯಾವ ಹೊತ್ತಿಗೆ ಬರುತ್ತಾರೆ, ಎಲ್ಲಿಂದ ಬಿಟ್ಟರು, ಎಲ್ಲಿಗೆ ತಲುಪಿದರು, ಯಾವ ಮಾರ್ಗದಲ್ಲಿ ಬರುತ್ತಿದ್ದಾರೆ ಎಂಬೆಲ್ಲಾ ಮಾಹಿತಿ ಒಬ್ಬರಿಂದ ಒಬ್ಬರಿಗೆ ರವಾನೆ ಮಾಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ