ಕನ್ನಡ ಚಿತ್ರಗಳ ಗುಣಮಟ್ಟ ಕುಗ್ಗುತ್ತಿದೆ
Team Udayavani, May 31, 2018, 12:11 PM IST
ಬೆಂಗಳೂರು: ಕನ್ನಡ ಸಿನಿಮಾಗಳ ಗುಣಮಟ್ಟ ಕುಗ್ಗುತ್ತಿರುವ ಈ ಸಂದರ್ಭದಲ್ಲಿ ರಂಗಭೂಮಿ ಕ್ರಿಯಾಶೀಲವಾಗಬೇಕಿದೆ. ಆ ಮೂಲಕ ಶಂಕರ್ ನಾಗ್ ಅವರಂಥ ಪ್ರತಿಭೆಗಳು ಹೊರಹೊಮ್ಮುವ ಅಗತ್ಯವಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಅಭಿಪ್ರಾಯಪಟ್ಟರು.
ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ರಂಗಪಯಣ ಸಂಸ್ಥೆ ಹಮ್ಮಿಕೊಂಡಿದ್ದ ಶಂಕರ್ನಾಗ್ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ಚಲನಚಿತ್ರ ರಂಗ ವರ್ಷಕ್ಕೆ 200ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸುತ್ತಿದ್ದರೂ ಗುಣಮಟ್ಟದ ವಿಚಾರದಲ್ಲಿ ಕುಗ್ಗುತ್ತಿದೆ. ಹೀಗಾಗಿ ರಂಗಭೂಮಿಯನ್ನು ನಾವೆಲ್ಲರೂ ಸೇರಿ
ಕ್ರಿಯಾಶೀಲ ಮಾಡಬೇಕಿದೆ ಎಂದು ಹೇಳಿದರು.
ನಗರದಲ್ಲಿ ಇಂದು 400ಕ್ಕೂ ಹೆಚ್ಚು ಸ್ಟುಡಿಯೋಗಳಿವೆ. ಇದಕ್ಕೆ ಅಡಿಪಾಯ ಹಾಕಿದವರು ಶಂಕರನಾಗ್. ಆದರೆ ಅವರು ಮೊದಮೊದಲು ಬೆಂಗಳೂರಿನಲ್ಲಿ ಸಂಕೇತ್ ಸ್ಟುಡಿಯೋ ಆರಂಭಿಸಿದಾಗ ಅನೇಕರು ಟೀಕಿಸಿದ್ದರು. ಇನ್ನು ವ್ಯಕ್ತಿತ್ವದ ವಿಚಾರದಲ್ಲಿ ಶಂಕರ್ನಾಗ್ ಅವರು ಡಾ.ರಾಜ್ಕುಮಾರ್ ಅವರಿಗೆ ಸಮನಾಗಿದ್ದರು. ತಮ್ಮ ಬೆಳೆವಣಿಗೆ ಜತೆ, ನಾಡು-ನುಡಿ ಬೆಳವಣಿಗೆಗೆ ಸದಾ ಹಂಬಲಿಸುತ್ತಿದ್ದರು ಎಂದು ಶಂಕರ್ನಾಗ್ ಅವರ ಜತೆಗಿದ್ದ ದಿನಗಳನ್ನು ಹಂಸಲೇಖ ಸ್ಮರಿಸಿದರು.
ರಂಗಕರ್ಮಿ ಶ್ರೀನಿವಾಸ್ ಜಿ.ಕಪ್ಪಣ್ಣ ಮಾತನಾಡಿ, ಶಂಕರ್ನಾಗ್ ಎಷ್ಟೇ ಎತ್ತರಕ್ಕೆ ಬೆಳೆದರೂ ಅವರ ವ್ಯಕ್ತಿತ್ವದಲ್ಲಿ ಒಂದಿಷ್ಟು ಬದಲಾಗಲಿಲ್ಲ. ಎಂದಿಗೂ ತಮ್ಮೊಂದಿಗೆ ಕೆಲಸ ಮಾಡುವವರನ್ನು ಅವರು ಮರೆಯುತ್ತಿರಲಿಲ್ಲ. ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದರು. ಕೇವಲ ರಂಗಭೂಮಿ ಅಷ್ಟೇ ಅಲ್ಲದೇ ಎಲ್ಲ ಕ್ಷೇತ್ರಗಳ ಬೆಳವಣಿಗೆ ಬಗೆಗೂ ತಮ್ಮದೇ ಆದ ಕನಸುಗಳನ್ನು ಹೊಂದಿದ್ದರು ಎಂದರು. ಪತ್ರಕರ್ತೆ ಡಾ. ಜಯಾ ಮಾತನಾಡಿದರು. ಕಾರ್ಯಕ್ರಮದಲ್ಲಿ ರಂಗ ಪ್ರತಿಭೆಗಳಿಗೆ ಶಂಕರ್ನಾಗ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್