ಕ್ವಾರಂಟೈನ್‌ ಅವಧಿ ಮೂರುಪಟ್ಟು ವಿಸ್ತರಣೆ


Team Udayavani, Apr 10, 2020, 10:53 AM IST

bng-tdy-4

ಬೆಂಗಳೂರು: ಕೋವಿಡ್ 19 ವೈರಸ್‌ಗೆ ಸಂಬಂಧಿಸಿದಂತೆ ಕ್ವಾರಂಟೈನ್‌ ಆಗಿರುವವರಿಗೆ ಕಹಿ ಸುದ್ದಿ. 14 ದಿನಗಳಿದ್ದ “ಗೃಹಬಂಧನ’ದ ಅವಧಿ ಈಗ ಮೂರುಪಟ್ಟು ಅಂದರೆ 42 ದಿನಗಳಿಗೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.

ಸೋಂಕಿತರೊಂದಿಗಿನ ಪ್ರಾಥಮಿಕ ಸಂಪರ್ಕ ಹೊಂದಿದವರು ಮತ್ತು ಸೋಂಕಿನ ಶಂಕೆ ಇರುವವರಿಗೆ ಈ ದೀರ್ಘಾವಧಿ ಕ್ವಾರಂಟೈನ್‌ ಅನ್ವಯ ಆಗಲಿದೆ. ಈಗಾಗಲೇ ನಿಗಾದಲ್ಲಿ ಇರುವ ಮತ್ತು ಇನ್ಮುಂದೆ ಹೊಸದಾಗಿ ಪತ್ತೆಯಾಗುವ ಎರಡೂ ವರ್ಗವೂ ಕಡ್ಡಾಯವಾಗಿ 42 ದಿನಗಳು ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ವಿದೇಶದಿಂದ ಬಂದವರನ್ನು ಈ ಮೊದಲು 14 ದಿನಗಳವರೆಗೆ ಕ್ವಾರಂಟೈನ್‌ ಮಾಡಲಾಗುತ್ತಿತ್ತು. ಆದರೆ, ಬೆಂಗಳೂರಿನಲ್ಲಿ ಅತಿ ಹೆಚ್ಚು 60 ಜನರಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ದೀರ್ಘಾವಧಿ ಕ್ವಾರಂಟೈನ್‌ ಮಾಡಲು ಸರ್ಕಾರ ಸೂಚಿಸಿದೆ. ಅದರಂತೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ನೂರಾರು ಮಂದಿ 14 ದಿನಗಳ ಕ್ವಾರಂಟೈನ್‌ ಅವಧಿ ಪೂರ್ಣಗೊಳಿಸಿ, ಬಿಡುಗಡೆ ಹಂತದಲ್ಲಿದ್ದರು. ಅಷ್ಟರಲ್ಲಿ ಈ ಹೊಸ ಆದೇಶ “ಶಾಕ್‌’ ನೀಡಿದೆ. ನಗರದಲ್ಲಿ ಒಟ್ಟಾರೆ 69 ಸೋಂಕಿತರಿದ್ದು, 17 ಜನ ಈಗಾಗಲೇ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಈ ಮಧ್ಯೆ ಸೋಂಕಿತರೊಂದಿಗೆ 457 ಜನ ಪ್ರಾಥಮಿಕ ಸಂಪರ್ಕ ಹೊಂದಿದವರಾಗಿದ್ದು, ಅವರೆಲ್ಲರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ಪರೋಕ್ಷವಾಗಿ ಅವರ ಕುಟುಂಬಗಳೂ ಒಂದು ರೀತಿಯ “ಗೃಹಬಂಧನ’ವನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ, ಅವರಿಗೂ ಈ ಬಿಸಿ ತಟ್ಟಲಿದೆ.

ಕೋವಿಡ್ 19  ಸೋಂಕಿತರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು 14 ದಿನ ಪಾಲಿಕೆಯಿಂದ ಗುರುತಿಸಿದ ಸ್ಥಳಗಳಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ. ಈ ವೇಳೆ 12ನೇ ದಿನ ಶಂಕಿತರ ಮಾದರಿ ಪರೀಕ್ಷೆಗೊಳಪಡಿಸಿ, ವರದಿ “ನೆಗೆಟಿವ್‌’ ಬಂದರೆ ಮಾತ್ರ ಕ್ವಾರಂಟೈನ್‌ ಮುಕ್ತ ಮಾಡಲಾಗುವುದು. ಅಲ್ಲದೆ, ಮತ್ತೆ 14 ದಿನಗಳು ಪಾಲಿಕೆ ನಿಗಾ ವಹಿಸಿ ಕ್ವಾರಂ ಟೈನ್‌ ಮಾಡಲಾಗುವುದು. ನಂತರ ಇನ್ನು 15 ದಿನಗಳವರೆಗೆ ವೈಯಕ್ತಿಕ ಕಾಳಜಿ ನಿಟ್ಟಿನಲ್ಲಿ ಕ್ವಾರಂಟೈನ್‌ ಸೂಚನೆ ನೀಡಲಾಗುತ್ತದೆ. ಒಟ್ಟಾರೆ 42 ದಿನಗಳು ಕ್ವಾರಂಟೈನ್‌ ಮಾಡಿ ಕೊರೊನಾ ಹರಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದರು.

ದೆಹಲಿಯ ನಿಜಾಮುದ್ದೀನ್‌ನ ತಬ್ಲೀಘಿ  ಜಮಾತ್‌ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 148 ಜನರನ್ನು ಹಜ್‌ ಭವನದಲ್ಲಿ ಕ್ವಾರಂಟೈನ್‌ ಮಾಡಿ ತಪಾಸಣೆ ಒಳಪಡಿಸಲಾಗಿತ್ತು. ಇದರಲ್ಲಿ 4 ಜನರಿಗೆ ಮಾತ್ರ ಸೋಂಕು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಉಳಿದಂತೆ ಸೋಂಕು ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದವರನ್ನು ಮನೆಗಳಿಗೆ ಕಳುಹಿಸಲಾಗಿದೆ. ಇವರನ್ನು ಕಡ್ಡಾಯವಾಗಿ ಮುಂದಿನ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ತಪಾಸಣೆ ಮತ್ತಷ್ಟು ಬಿಗಿ: ಈ ಮಧ್ಯೆ ಕೋವಿಡ್ 19  ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಟೋಲ್‌ಗೇಟ್‌ಗಳು ಹಾಗೂ ಚೆಕ್‌ ಪೋಸ್ಟ್ ಗಳಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಿಯಾಲಿಟಿ ಚೆಕ್‌ಗಾಗಿ ರಸ್ತೆಗಿಳಿದು ದಿಢೀರ್‌ ತಪಾಸಣೆ ನಡೆಸುತ್ತಿದ್ದಾರೆ. ಈ ನಡುವೆ ಸಚಿವರು ಗಡಿಭಾಗದಲ್ಲಿ ತಪಾಸಣೆ ನಡೆಸುತ್ತಿದ್ದ ವೈದ್ಯಕೀಯ ಸಿಬ್ಬಂದಿ ಬಳಿ ತೆರಳಿ ಸ್ವತಃ ತಪಾಸಣೆಗೊಳಪಟ್ಟರು.

 

ಚೆಕ್‌ಪೋಸ್ಟ್ ಗಳಲ್ಲಿ ಭಾರೀ ಕಟ್ಟುನಿಟ್ಟು! :  ರಾಜ್ಯದ ಪ್ರತಿ ಜಿಲ್ಲೆಗಳ ಗಡಿಭಾಗದ ಚೆಕ್‌ಪೋಸ್ಟ್ ಗಳಲ್ಲಿ ಭಾರಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ವಾಹನಗಳಲ್ಲಿ ಬರುವವರ ಹೆಸರು, ವಿಳಾಸ, ಅವರ ದೂರವಾಣಿ ಸಂಖ್ಯೆ, ಬೇರೆ ಊರು ಅಥವಾ ನಗರಕ್ಕೆ ತೆರಳುತ್ತಿರುವ ನಿರ್ದಿಷ್ಟ ಉದ್ದೇಶದ ಮಾಹಿತಿಯನ್ನು ಪೊಲೀಸರು ಪಡೆದುಕೊಳ್ಳುತ್ತಿ ದ್ದಾರೆ. ಜತೆಗೆ ಪಾಸ್‌ ಹೊಂದಿಲ್ಲ ದವರನ್ನು ವಾಪಾಸ್‌ ಕಳುಹಿಸುತ್ತಿದ್ದಾರೆ. ಕೋವಿಡ್ 19 ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ಹೋಗುತ್ತಿರುವವರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರಿಂದ ಒಂದು ವೇಳೆ ಹೋಗಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾದರೆ, ಆ ಜಾಲವನ್ನು ಸುಲಭವಾಗಿ ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.