ಮಳೆ ನಿಲ್ಲುತ್ತಿಲ್ಲ, ಜನರಿಗೆ ನೆಮ್ಮದಿಯಿಲ್ಲ


Team Udayavani, Aug 18, 2017, 11:29 AM IST

rain.jpg

ಬೆಂಗಳೂರು: ಮಳೆ ಬಿಡುತ್ತಿಲ್ಲ, ರಾಜಧಾನಿ ಜನತೆಗೆ ನೆಮ್ಮದಿ ಇಲ್ಲ. ಸೋಮವಾರ ರಾತ್ರಿ ಆರಂಭವಾಗಿರುವ ಮಳೆ ಗುರುವಾರವೂ ಮುಂದುವರಿದ ಪರಿಣಾಮ ರಾಜಧಾನಿಗೆ ಮಳೆ ಅವಾಂತರದಿಂದ ಮುಕ್ತಿ ಸಿಗುವ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ.

ಸತತ ನಾಲ್ಕನೇ ದಿನವಾದ ಗುರವಾರವೂ ಮಳೆ ಮುಂದುವರಿದಿದ್ದು, ತಡ ರಾತ್ರಿ ಸುರಿದ ಮಳೆಗೆ ನಗರದ ಅನೇಕ ಭಾಗಗಳು ಸಮಸ್ಯೆ ಎದುರಿಸಿವೆ. ವಿಶೇಷವಾಗಿ ಎಚ್‌ಎಎಲ್‌ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಅಣ್ಣಸಂದ್ರ ಬಡಾವಣೆ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಮ್ಯಾನ್‌ಹೋಲ್‌ ಉಕ್ಕಿ ಹರಿದು ಪ್ರವಾಹ ಮಾದರಿಯಲ್ಲಿ ನೀರು ರಸ್ತೆಯಲ್ಲಿ ತುಂಬಿದೆ. ಇನ್ನು ಮೂರು ದಿನಗಳಿಂದ ದ್ವೀಪದಂತಾಗಿರುವ ಎಸ್‌ಟಿ ಬೆಡ್‌ ಪ್ರದೇಶದಲ್ಲಿ ಮತ್ತೂಮ್ಮೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸಂಪಂಗಿರಾಮ ನಗರ 28.5 ಮಿ.ಮೀ. ದಯಾನಂದ ನಗರ 25, ವಿದ್ಯಾಪೀಠ 20.5, ದಾಸನಪುರ 15ಮಿ.ಮೀ., ಬಸವೇಶ್ವರನಗರ 14, ನಾಗಾಪುರ 14.5, ಕಾಟನ್‌ಪೇಟೆ 17, ರಾಜ್‌ಮಹಲ್‌ ಗುಟ್ಟಹಳ್ಳಿ 18, ಸಾರಕ್ಕಿ 19 ಹಾಗೂ ಬಸವನಗುಡಿಯಲ್ಲಿ 16 ಮಿ.ಮೀ ಮಳೆಯಾಗಿದೆ. ಗುರುವಾರ ರಾತ್ರಿ ಗಾಳಿಯಿಲ್ಲದೆ ಬರಿ ಮಳೆ ಮಾತ್ರ ಸುರಿದಿದ್ದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳಲಾಗಿದೆ.

ಸ್ಥಿತಿ ಬದಲಾಗಿಲ್ಲ: ಒಳ ಚರಂಡಿಗಳು ತುಂಬಿ ಹರಿದಿರುವುದರಿಂದ ಎಸ್‌ಟಿ ಬೆಡ್‌ ಪ್ರದೇಶ ಕೊಚ್ಚೆಯಂತಾಗಿದ್ದು, ಕೋರಮಂಗಲ ನಾಲ್ಕನೇ ಹಂತ ಮತ್ತು ಎಸ್‌ಟಿ ಬೆಡ್‌ ಪ್ರದೇಶಗಳಲ್ಲಿ ಇನ್ನೂ ಸ್ಥಿತಿ ಬದಲಾಗಿಲ್ಲ. ಅನೇಕ ಅಪಾರ್ಟ್‌ಮೆಂಟ್‌ಗಳು ಮತ್ತು ವಾಣಿಜ್ಯ ಮಳಿಗೆಗಳಲ್ಲಿ ನೀರಿನಲ್ಲಿಯೇ ನಿಂತಿವೆ. ಗುರುವಾರ ರಾತ್ರಿ ಮತ್ತೆ ಮಳೆ ಬಿದ್ದಿರುವುದು ಸಮಸ್ಯೆ ದುಪ್ಪಟ್ಟಾಗಿದೆ. ಬೇಸ್‌ಮೆಂಟ್‌ನಲ್ಲಿ ತುಂಬಿರು ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ.

ನೀರನ್ನು ಹೊರಕ್ಕೆ ಪಂಪ್‌ ಮಾಡಲು ಮೋಟಾರ್‌ಗಳ ಅವಶ್ಯವಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾಗಿರುವ ಕನ್ನಡಭವನದ ನಯನ ಸಭಾಂಗಣ ಜಲಾವೃತಗೊಂಡಿದ್ದು, ನೀರು ಹೊರ ಹಾಕುವ ಕಾರ್ಯದಲ್ಲಿ ಸಿಬ್ಬಂದಿ ಮಗ್ನರಾಗಿದ್ದರು. ಪಾಲಿಕೆ ಸಿಬ್ಬಂದಿಗಳು ಮೂರು ದಿನಗಳಿಂದ ನಿರಂತರವಾಗಿ ಕಾರ್ಯಾಚರಣೆ ಮಾಡುತ್ತಿದ್ದರೂ ಸಹ ಮೂಲ ಸೌಕರ್ಯ ಒದಗಿಸುವುದು ಸವಾಲಿನ ಕೆಲಸವಾಗಿದೆ.  

ಪಾಲಿಕೆ ತ್ವರಿತಗತಿಯಲ್ಲಿ ಸ್ವತ್ಛತೆ ಕೈಗೊಳ್ಳದಿದ್ದಲ್ಲಿ ಮತ್ತಷ್ಟು ಅನಾಹುತ ಎದುರಾಗಲಿದೆ. ನೀರು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿಯಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಪಾಲಿಕೆ ತಕ್ಷಣವೇ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.