ನಗರದಲ್ಲಿ ಸುರಿದ ಮಳೆ ಧರೆಗುರುಳಿದ ಮರ
Team Udayavani, Jun 6, 2019, 3:05 AM IST
ಬೆಂಗಳೂರು: ಜೋರಾದ ಗಾಳಿ ಸಹಿತ ಸುರಿದ ಮಳೆಗೆ ಬುಧವಾರ ನಗರದ ವಿವಿಧ ಭಾಗಗಳಲ್ಲಿ ಹತ್ತಾರು ಹೆಚ್ಚು ಬೃಹತ್ ಮರಗಳು ಧರೆಗುರುಳಿದ್ದು, ಭೈರವೇಶ್ವರ ನಗರದಲ್ಲಿ ಕಾರೊಂದು ಜಖಂಗೊಂಡಿದೆ.
ನಗರದಲ್ಲಿ ಬುಧವಾರ ಮಧ್ಯಾಹ್ನ ಜೋರಾದ ಗಾಳಿದ ಸಹಿತ ಸುರಿದ ಧಾರಾಕಾರ ಮಳೆಗೆಯಿಂದಾಗಿ 8 ಬೃಹತ್ ಗಾತ್ರದ ಮರಗಳು ಹಾಗೂ 7 ಕೊಂಬೆಗಳು ಧರೆಗುರುಳಿದ್ದು, ಭೈರವೇಶ್ವರ ನಗರದಲ್ಲಿ ಮರ ಕಾರಿದ ಮೇಲೆ ಉರುಳಿದ ಪರಿಣಾಮ ಕಾರು ಜಖಂಗೊಂಡಿದೆ.
ಈ ವೇಳೆ ಕಾರಿನಲ್ಲಿ ಯಾರು ಇಲ್ಲದಿದ್ದರಿಂದ ಯಾವುದೇ ರೀತಿಯ ಅವಘಡ ಸಂಭವಿಸಿಲ್ಲ ಎಂದು ಪಾಲಿಕೆಯ ನಿಯಂತ್ರಣ ಕೊಠಡಿ ಸಿಬ್ಬಂದಿ ತಿಳಿಸಿದ್ದಾರೆ. ನಿರಂತರವಾಗಿ ಮಳೆ ಸುರಿದ ಪರಿಣಾಮ ಕೆಲವು ರಸ್ತೆಗಳಲ್ಲಿ ನೀರು ನಿಂತರೂ ರಜೆ ದಿನವಾದ್ದರಿಂದ ಸಂಚಾರಕ್ಕೆ ಹೆಚ್ಚಿನ ತೊಂದರೆಯಾಗಲಿಲ್ಲ.
ಅದರಂತೆ ಹಲಸೂರು, ವಿಲ್ಸನ್ ಗಾರ್ಡನ್, ಜಯನಗರ, ಮೂಡಲಪಾಳ್ಯ, ನಾಗರಬಾವಿ, ಕಾವೇರಿಪುರ, ಮಲ್ಲತ್ತಹಳ್ಳಿ, ಬೊಮ್ಮನಹಳ್ಳಿ, ಹುಳಿಮಾವು, ರಾಜರಾಜೇಶ್ವರಿನಗರ, ಅಮ್ಮಾ ಆಶ್ರಮ ರಸ್ತೆ, ಬೆಳ್ಳಂದೂರು ಸಿಗ್ನಲ್ ಸೇರಿದಂತೆ ಹಲವೆಡೆಗಳಲ್ಲಿ ಎಂಟು ಮರಗಳು ಹಾಗೂ 7 ಕೊಂಬೆಗಳು ಉರುಳಿವೆ.
ಮಾರುಕಟ್ಟೆಯಲ್ಲಿ ಹರಿದ ಕೊಳಚೆ ನೀರು: ಕೆ.ಆರ್.ಮಾರುಕಟ್ಟೆಯ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆಯಿಂದಾಗಿ ಮ್ಯಾನ್ಹೋಲ್ಗಳು ಉಕ್ಕಿ ಹರಿದ ಪರಿಣಾಮ ಕೆ.ಆರ್.ಮಾರುಕಟ್ಟೆ ಜಂಕ್ಷನ್ನಲ್ಲಿ ನಿರಂತರವಾಗಿ ಕೊಳಚೆ ನೀರು ಹರಿದ ಪರಿಣಾಮ ಸಾರ್ವಜನಿರಕು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.
ಇದರೊಂದಿಗೆ ಕೆ.ಆರ್.ವೃತ್ತ, ಶಿವಾನಂದ ವೃತ್ತ, ಓಕಳಿಪುರ ಜಂಕ್ಷನ್, ಚಾಲುಕ್ಯವೃತ್ತಗಳಲ್ಲಿ ಮಳೆನೀರು ನಿಂತಿದ್ದರಿಂದ ವಾಹನಗಳು ಸಂಚರಿಸಿದಾಗ ಪಾದಚಾರಿಗಳ ಮೇಲೆ ಸಿಡಿದು ಕಿರಿಕಿರಿ ಅನುಭವಿಸುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ