ಸರ್ಕಾರಿ ಪ್ರಾಧ್ಯಾಪಕರ ವಿದೇಶಿ ಪ್ರವಾಸಕ್ಕೆ ನಿಯಮಾವಳಿ ಕಠಿಣ


Team Udayavani, May 9, 2017, 3:45 AM IST

college-08.jpg

ಬೆಂಗಳೂರು : ಸರ್ಕಾರಿ ಕಾಲೇಜಿನ ಉಪನ್ಯಾಸಕರು, ಪ್ರಾಧ್ಯಾಪಕರು ಶೈಕ್ಷಣಿಕ ಸಂಬಂಧಿತ ವಿದೇಶಿ ಪ್ರವಾಸಕ್ಕೆ ತೆರಳುವ ಮುನ್ನ ಸರ್ಕಾರದ ಅನುಮತಿ ಪಡೆಯುವುದರ ಜತೆಗೆ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಂಡಿದ್ದರೂ, ಉಳಿತಾಯ ಖಾತೆಯ ವಿವರ ಹಾಗೂ ಮೂರು ವರ್ಷದ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಕಡ್ಡಾಯವಾಗಿ ಸರ್ಕಾರಕ್ಕೆ ಸಲ್ಲಿಸಬೇಕು.

ಸರಕಾರಿ,ಅನುದಾನಿತ ಕಾಲೇಜುಗಳ ಈಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು ಹಾಗು ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರುಗಳು ಶೈಕ್ಷಣಿಕ ಉದ್ದೇಶದ  ವಿದೇಶ ಪ್ರವಾಸ ಕೈಗೊಳ್ಳುವುದಕ್ಕೆ ಇರುವ ಕಾನೂನು-ಕಟ್ಟಳೆಗಳನ್ನ ಮತ್ತಷ್ಟು ಕಠಿಣಗೊಳಿಸಿ ರಾಜ್ಯ ಸರಕಾರ ಮೂಗುದಾರ ಹಾಕಿದೆ.

ವಿದೇಶ ಪ್ರವಾಸ ಕೈಗೊಳ್ಳುವವರು ಸರಕಾರಕ್ಕೆ ಹಲವಾರು ಮಾಹಿತಿ ಮುಚ್ಚಿಟ್ಟು ಅಪೂರ್ಣ ಮಾಹಿತಿ ನೀಡಿ ಸರಕಾರ,ಕಾಲೇಜು ಆಡಳಿತ ಮಂಡಳಿಗಳನ್ನ ಹಲವಾರು ಮಾಹಿತಿಗಳಿಂದ ಕತ್ತಲೆಯಲ್ಲಿಡುತ್ತಿದ್ದುದರಿಂದ ವಿದೇಶ ಪ್ರವಾಸದ ನಿಯಮಾವಳಿಗಳನ್ನ ಸರಕಾರ ಬಿಗಿಗೊಳಿಸಿದೆ.

ರಾಜು ಖಾರ್ವಿ ಕೊಡೇರಿ ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಸಿಬ್ಬಂದಿ ವಿದೇಶದಲ್ಲಿ ನಡೆಯುವ ಅಂತಾರಾಷ್ಟ್ರೀಯ ಸಮ್ಮೇಳನ, ವಿಚಾರ ಸಂಕಿರಣ, ಕಾರ್ಯಾಗಾರ ಅಥವಾ ಸಮಾರಂಭ ಮೊದಲಾದ ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಗೂ ಪ್ರಬಂಧ ಮಂಡನೆಗೆ ವಿದೇಶ ಪ್ರವಾಸ ಮಾಡಲು ಪ್ರಾಧ್ಯಾಪಕರಿಂದ ಇಲಾಖೆಗೆ ಬರುವ ಪ್ರಸ್ತಾವನೆಯನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲಿಸಿ, ಅಗತ್ಯ ಮಾಹಿತಿಯನ್ನು ಕಡ್ಡಾಯವಾಗಿ ದ್ವಿ-ಪ್ರತಿಯಲ್ಲಿ ಪಡೆಯಬೇಕು. ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಒಂದು ತಿಂಗಳು ಮುಂಚಿತವಾಗಿಯೇ ಸಲ್ಲಿಸಿ ಅನುಮತಿ ಪಡೆಯುವಂತೆ ನಿರ್ದೇಶಿಸಿದೆ.

ಪ್ರಾಧ್ಯಾಪಕರಿಗೆ ಸೂಚನೆ :
ವಿದೇಶದಲ್ಲಿ ನಡೆಯುವ ಶೈಕ್ಷಣಿಕ ಸಂಬಂಧಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಅಥವಾ ಆಹ್ವಾನಿಸಿರುವ ಬಗ್ಗೆ ಸಂಬಂಧಪಟ್ಟ ಸಂಸ್ಥೆಯ ಅಧಿಸೂಚನೆ, ಆದೇಶದ ಪ್ರತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಯಾವ ದೇಶಕ್ಕೆ ಪ್ರಯಾಣ, ಹೊರಡುವ ದಿನಾಂಕ, ನಿರ್ಧಿಷ್ಟ ಸ್ಥಳ ಹಾಗೂ ಹಿಂದಿರುಗುವ ದಿನಾಂಕ ಸೇರಿದಂತೆ ಎಷ್ಟು ದಿನದ ಪ್ರವಾಸ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖೀಸಬೇಕು. ವಿದೇಶಕ್ಕೆ ಹೊರಡುವ ಬೋಧಕ ಸಿಬ್ಬಂದಿ ಯಾವ ರಜೆಯನ್ನು ಬಳಸಿಕೊಂಡಿದ್ದಾರೆ ಮತ್ತು ಅವರ ಹಕ್ಕಿನಲ್ಲಿರುವ ರಜೆಯ ವಿವರ ಕಡ್ಡಾಯವಾಗಿ ನೀಡಲು ಸೂಚಿಸಿದೆ.

ಖಾತೆಯ ವಿವರ :
ಪ್ರಾಧ್ಯಾಪಕರು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಹಿಸಲು ತಗಲುವ ಒಟ್ಟು ವೆಚ್ಚ ಹಾಗೂ ಈ ವೆಚ್ಚ ಭರಿಸುವ ವಿಧಾನದ ಬಗ್ಗೆ ಮಾಹಿತಿ ಒದಗಿಸಿ, ಸ್ವಂತ ಖರ್ಚಿನಲ್ಲಿ ವಿದೇಶಿ ಪ್ರಯಾಣ ಕೈಗೊಂಡಿದ್ದಲ್ಲಿ ಉಳಿತಾಯ ಖಾತೆಯ ವಿವರ ಹಾಗೂ ಮೂರು ವರ್ಷದ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ, ನಂತರವೇ ಪ್ರವಾಸ ಮುಂದುವರಿಸಬೇಕು ಎಂಬ ಕಟ್ಟಪ್ಪಣೆ ಮಾಡಿದೆ.

ವಿದೇಶಕ್ಕೆ ತೆರಳಿದ ಪ್ರಾಧ್ಯಾಪಕರ ವಿದೇಶಿ ವಾಸ್ತವ್ಯದ ವಿಳಾಸ, ಪಾಸ್‌ಪೋರ್ಟ್‌ ದೃಢೀಕೃತ ಪ್ರತಿ, ಸೇವಾ ಪೂರ್ವ ಅವಧಿ ಘೋಷಣಾ ಆದೇಶ ಪ್ರತಿಯ ಜತೆಗೆ ಪ್ರಾಧ್ಯಾಪಕ ವಿದೇಶದಲ್ಲಿ ಮಂಡಿಸಿದ ಪ್ರಬಂಧದ ವಿಷಯ ಹಾಗೂ ಆ ಪ್ರಬಂಧ ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅನುಕೂಲವಾಗಿದೆಯೇ ಎಂಬ ಬಗ್ಗೆ ಪ್ರಾಂಶುಪಾಲರಿಂದ ಅಧಿಕೃತ ಶಿಫಾರಸ್ಸು ಪಡೆಯಲೇ ಬೇಕು.

ಪರ್ಯಾಯ ವ್ಯವಸ್ಥೆ ಅಗತ್ಯ :
ವಿದೇಶ ಪ್ರವಾಸ ಮಾಡುವ ಸಂದರ್ಭದಲ್ಲಿ ಕಾಲೇಜಿನ ದೈನಂದಿನ ಚಟುವಟಿಕೆ, ಪಾಠಪ್ರವಚನ, ಪರೀಕ್ಷಾ ಹಾಗೂ ಕಚೇರಿ ಕೆಲಸ ಇತ್ಯಾದಿಗೆ ಕುಂದುಂಟಾಗದಂತೆ ಪರ್ಯಾಯ ವ್ಯವಸ್ಥೆಯಾಗಿರುವ ಬಗ್ಗೆ ಪ್ರಾಂಶುಪಾಲರು ಷರಾ ನೀಡಬೇಕು. ಸಂಬಂಧಪಟ್ಟ ಪ್ರಾಧ್ಯಾಪಕರಿಂದಲೂ ಸ್ವಯಂ ದೃಢೀಕರಣ ಇರಬೇಕು. 

ವಿಶ್ವವಿದ್ಯಾಲಯದಿಂದಲೂ ವಿನಾಯತಿ ಪತ್ರ ಪಡೆಯುವುದರ ಜತೆಗೆ ವಿದೇಶಕ್ಕೆ ಹೋದ ಸಂದರ್ಭದಲ್ಲಿ ರಾಜೀನಾಮೆ ನೀಡುವುದಿಲ್ಲ, ಅನುಮತಿ ಪಡೆದ ಅವಧಿಗಿಂತ ಅಧಿಕಾಲ ಅಲ್ಲಿಯೇ ಉಳಿಯುವುದಿಲ್ಲ ಹಾಗೂ ರಜೆಯನ್ನು ಮುಂದುವರಿಸುವುದಿಲ್ಲ ಎಂಬ ಬಗ್ಗೆಯೂ ಸ್ವಯಂ ದೃಢೀಕರಣ ನೀಡಲೇ ಬೇಕು ಎಂಬ ನಿಯಮ ಸರ್ಕಾರ ರೂಪಿಸಿದೆ.

ವಿದೇಶಕ್ಕೆ ಹೊರಡುವ ಪ್ರಾಧ್ಯಾಪಕರ ಮೇಲೆ ಯಾವುದೇ ಪೇಬಾಕಿ ಅಥವಾ ಇಲಾಖೆ ವಿಚಾರಣೆ, ನ್ಯಾಯಾಂಗ ತನಿಖೆ, ಕ್ರಿಮಿನಲ್‌ ಮೊಕದ್ದಮೆ ಇರುವುದಿಲ್ಲ ಎಂಬ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರು ದೃಢೀಕರಿಸಿದ ನಂತರವೇ ವಿದೇಶಕ್ಕೆ ಹಾರಲು ಅನುಮತಿ ನೀಡಲಾಗುತ್ತದೆ.

ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು, ಪ್ರಾಧ್ಯಾಪಕರು ಯಾವ ಉದ್ದೇಶಕ್ಕಾಗಿ ವಿದೇಶ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಅದರ ಖರ್ಚು, ವೆಚ್ಚದ ಬಗ್ಗೆ ಇಲಾಖೆ ಅಥವಾ ಸರ್ಕಾರಕ್ಕೆ ಅಪೂರ್ಣ ಮಾಹಿತಿ ಬರುತ್ತಿದ್ದು, ಪ್ರಾಧ್ಯಾಪಕರ ಪ್ರವಾಸದ ಸ್ಪಷ್ಟ ಮಾಹಿತಿಯ ಜತೆಗೆ ಯಾವುದೇ ಗೊಂದಲಕ್ಕೂ ಅವಕಾಶ ನೀಡದ ರೀತಿಯಲ್ಲಿ ನಿಯಮ ರೂಪಿಸಲಾಗಿದೆ.
– ಎಂ.ಶಿಲ್ಪ, ಪ್ರಭಾರ ನಿರ್ದೇಶಕಿ, ಕಾಲೇಜು ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.