ಯೋಧನ ಮೊಬೈಲ್‌ ಕಸಿದು ರೈಲಿಂದ ತಳ್ಳಿದರು


Team Udayavani, Aug 28, 2019, 3:09 AM IST

ydhana

ಬೆಂಗಳೂರು: ಬೆಂಗಳೂರಿನಿಂದ ಮಂಡ್ಯದ ಮದ್ದೂರು ತಾಲೂಕಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ಯೋಧರ ಮೊಬೈಲ್‌ ಕಸಿದುಕೊಂಡ ದುಷ್ಕರ್ಮಿಗಳು ಬಳಿಕ ಅವರನ್ನು ಚಲಿಸುತ್ತಿದ್ದ ರೈಲಿನಿಂದ ಕಳಗೆ ತಳ್ಳಿ ಪರಾರಿಯಾಗಿರುವ ಘಟನೆ ನಗರದಲ್ಲಿ ಇತ್ತೀಚೆಗೆ ನಡೆದಿದೆ.

ಘಟನೆಯಲ್ಲಿ ಭಾರತೀಯ ಸೇನಾ ಯೋಧ ಕೆ.ಬಿ.ಮಾದೇಗೌಡ(28) ಗಂಭೀರವಾಗಿ ಗಾಯಗೊಂಡು ಸೇನಾ ಕಮಾಂಡೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಮಾದೇಗೌಡ ಅವರ ಪತ್ನಿ ದೀಪಿಕಾ ಬೆಂಗಳೂರು ಸಿಟಿ ರೈಲ್ವೆ ಠಾಣೆಯಲ್ಲಿ ಆ.25ರಂದು ಪ್ರಕರಣ ದಾಖಲಿಸಿದ್ದಾರೆ.

ಯೋಧ ಕೆ.ಬಿ.ಮಾದೇಗೌಡ ಅವರು ಕೆಲ ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದು, ಆ.25ರಂದು ಪತ್ನಿ ದೀಪಿಕಾ ಮತ್ತು ಪುತ್ರ ಯಕ್ಷಿತ್‌ ಜತೆ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಬಳಿಕ ಬೆಳಗ್ಗೆ 7.20ಕ್ಕೆ ಸಿಟಿ ರೈಲು ನಿಲ್ದಾಣಕ್ಕೆ ಬಂದು, ಟುಟಿಕೊರಿಯನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕುಟುಂಬ ಸಮೇತ ಮದ್ದೂರಿಗೆ ಪ್ರಯಾಣಿಸುತ್ತಿದ್ದರು. ಮಾರ್ಗ ಮಧ್ಯೆ ಶೌಚಾಲಯಕ್ಕೆ ತೆರಳಿದ ಮಾದೇಗೌಡ ವಾಪಸ್‌ ಬಂದು, ಬಾಗಿಲ ಬಳಿ ನಿಂತಿದ್ದರು.

20 ನಿಮಿಷಗಳ ನಂತರ “ಯಾರೋ ಅಪರಿಚಿತರು ರೈಲಿನಲ್ಲಿದ್ದ ವ್ಯಕ್ತಿಯ ಮೊಬೈಲ್‌ ಕಿತ್ತುಕೊಂಡು, ಚಲಿಸುತಿದ್ದ ರೈಲಿನಿಂದ ಹೊರ ತಳ್ಳಿದ್ದಾರೆ. ಯಾರೋ ರೈಲಿನಿಂದ ಬಿದ್ದು ಹೋದರು’ ಎಂದು ಸಹ ಪ್ರಯಾಣಿಕರು ಮಾತನಾಡಿಕೊಳ್ಳುತ್ತಿದ್ದದ್ದನ್ನು ಕೇಳಿ, ದೀಪಿಕಾ ಸುತ್ತಮುತ್ತ ನೋಡಿ, ಪತಿ ಇಲ್ಲದನ್ನು ಕಂಡು ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ್ದದ್ದನ್ನು ಕಂಡು ಗಾಬರಿಗೊಂಡ ಅವರು ಪ್ರಯಾಣಿಕರ ಸಹಾಯದಿಂದ ರೈಲ್ವೆ ಪೊಲೀಸರಿಗೆ ತಿಳಿಸಿದ್ದಾರೆ.

ಮಾನವಿಯತೆ ಮೆರೆದ ಯುವಕ: ದೀಪಿಕಾ ಅವರ ಗೋಳಾಟ ಕಂಡ ಚೇತನ್‌ ಎಂಬಾತ ನೆರವಿಗೆ ಧಾವಿಸಿ, ಕೂಡಲೇ ರೈಲಿನದ್ದ ತುರ್ತು ನಿಲುಗಡೆ ಸರಪಳಿ ಎಳೆದು ಕೃಷ್ಣದೇವರಾಯ ರೈಲು ನಿಲ್ದಾಣದ ಸಮೀಪ ರೈಲು ನಿಲ್ಲಿಸಿದ್ದಾರೆ. ನಂತರ ಪುತ್ರ ಯಕ್ಷಿತ್‌, ಯುವಕ ಚೇತನ್‌ ಜತೆ ರೈಲಿನಿಂದ ಇಳಿದ ದೀಪಿಕಾ, ಪತಿಯನ್ನು ಹುಡುಕಲು ಯತ್ನಿಸಿದ್ದಾರೆ. ಅವರಿಗೆ ನೆರವಾದ ಚೇತನ್‌ ಮೊಬೈಲ್‌ ನಂಬರ್‌ ಪಡೆದು ಹುಡುಕಾಟಕ್ಕೆ ಮುಂದಾಗಿದ್ದಾರೆ.

ಸುಮಾರು 45 ನಿಮಿಷಗಳ ಬಳಿಕ ದೀಪಿಕಾ ಅವರಿಗೆ ಕರೆ ಮಾಡಿದ ಚೇತನ್‌, ಅಪರಿಚಿತ ವ್ಯಕ್ತಿಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಅವರ ಜೇಬಿನಲ್ಲಿ ಭಾರತೀಯ ಸೇನೆಯ ಗುರುತಿನ ಚೀಟಿಯಿದ್ದು, ಕೆ.ಬಿ. ಮಾದೇಗೌಡ ಎಂದು ಉಲ್ಲೇಖೀಸಿರುವುದಾಗಿ ತಿಳಿಸಿದರು. ಅವರೇ ತಮ್ಮ ಪತಿ ಎಂದ ದೀಪಿಕಾ, ಕೂಡಲೇ ಅವರನ್ನು ಸೇನಾ ಕಮಾಂಡೊ ಆಸ್ಪತ್ರೆ ರವಾನಿಸುವಂತೆ ಬೇಡಿಕೊಂಡಿದ್ದಾರೆ.

ಹೀಗಾಗಿ ಚೇತನ್‌ 108 (ಆ್ಯಂಬುಲೆನ್ಸ್‌) ಮತ್ತು ಪೊಲೀಸ್‌ ಸಹಾಯವಾಣಿ 100ಕ್ಕೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೀಪಿಕಾ ದೂರಿನಲ್ಲಿ ಉಲ್ಲೇಖೀಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಾದೇಗೌಡ ಅವರು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೃತ್ಯ ಎಸಗಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.

ಹೆಚ್ಚಾದ ಮೊಬೈಲ್‌ ಕಳ್ಳರ ಹಾವಳಿ: ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುವ ಯುವಕರ ಗುಂಪೊಂದು ಸಹ ಪ್ರಯಾಣಿಕರ ಮೊಬೈಲ್‌ ಹಾಗೂ ಹಣ ಕಳವು ಮಾಡುವುದಲ್ಲದೆ, ಪ್ರತಿರೋಧ ವ್ಯಕ್ತಪಡಿಸಿದ ವ್ಯಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ರೈಲಿನಿಂದ ಕೆಳಗೆ ತಳ್ಳಿ ಪರಾರಿಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಹೋಗುವ ರೈಲುಗಳಲ್ಲಿ ಈ ಗುಂಪು ಸಕ್ರಿಯವಾಗಿದ್ದು, ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.