ಪರಿಹಾರ ಕ್ರಮಗಳು ಬದಲಾಗಬೇಕಿವೆ: ಆಶಿಶ್ ವರ್ಮಾ
Team Udayavani, May 19, 2019, 3:07 AM IST
ಬೆಂಗಳೂರು: ಸಂಚಾರದಟ್ಟಣೆ ಸಮಸ್ಯೆಗೆ ಸಂಬಂಧಿಸಿದ ಪರಿಹಾರ ಕ್ರಮಗಳು ಬದಲಾಗಬೇಕಿದ್ದು, ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ “ಸಮಗ್ರ ಸಮೂಹ ಸಾರಿಗೆ ವ್ಯವಸ್ಥೆ’ ಬಲಪಡಿಸುವುದು ಸರ್ಕಾರದ ಆದ್ಯತೆ ಆಗಬೇಕು ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಮೂಲಸೌಕರ್ಯ, ಸುಸ್ಥಿರ ಸಾರಿಗೆ ಮತ್ತು ನಗರ ಯೋಜನೆ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ. ಆಶಿಶ್ ವರ್ಮ ಅಭಿಪ್ರಾಯಪಟ್ಟರು.
“ಉದಯವಾಣಿ’ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ “ದಾರಿ ಯಾವುದಯ್ಯ ಸಂಚಾರಕೆ…’ ಕುರಿತ ಸಂವಾದದಲ್ಲಿ ತಮ್ಮ ವಿಚಾರಗಳನ್ನು ಮುಂದಿಟ್ಟ ಅವರು, “ನಗರದಲ್ಲಿನ ಸಂಚಾರ ದಟ್ಟಣೆ ಸಮಸ್ಯೆಗೆ ರೂಪಿಸುತ್ತಿರುವ ಯೋಜನೆಗಳು ಬದಲಾಗಬೇಕಿವೆ. ಮೆಟ್ರೋ ಜಾಲ ತ್ವರಿತಗತಿಯಲ್ಲಿ ವಿಸ್ತರಣೆ ಆಗಬೇಕು. ಲಾಸ್ಟ್ ಮೈಲ್ ಕನೆಕ್ಟಿವಿಟಿ ಕಲ್ಪಿಸಬೇಕು. ಜತೆಗೆ ಸೈಕಲ್ ಬಳಕೆ, ಪಾದಚಾರಿಗಳಿಗೆ ಅವಕಾಶ ಕಲ್ಪಿಸಬೇಕಿದೆ ಎಂದರು.
ಜನರು ಸಮೂಹ ಸಾರಿಗೆ ವ್ಯವಸ್ಥೆಯಿಂದ ಮಾತ್ರ ಒಂದು ಭಾಗದಿಂದ ಮತ್ತೂಂದು ಭಾಗಕ್ಕೆ ಶೀಘ್ರ ಹಾಗೂ ಸುರಕ್ಷಿತವಾಗಿ ತಲುಪಬಹುದು. ಒಂದು ನಿರ್ದಿಷ್ಟ ಸ್ಥಳಕ್ಕೆ ನಿಯಮಿತವಾಗಿ ಬಸ್ಗಳು ಸಂಚರಿಸಿದಾಗ ಜನ ಸ್ವಂತ ವಾಹನಗಳನ್ನು ಬಿಟ್ಟು ಬಸ್ಗಳಲ್ಲಿ ಸಂಚರಿಸುತ್ತಾರೆ. ಅದೇ ರೀತಿ, ಮೆಟ್ರೋ, ಸೈಕಲ್ ಪಥ ಹಾಗೂ ಉತ್ತಮ ಪಾದಚಾರಿ ಮಾರ್ಗಗಳನ್ನು ನಿರ್ಮಿಸಿದರೆ ಶೇ. 80-90ರಷ್ಟು ಜನ ಸಮೂಹ ಸಾರಿಗೆಯತ್ತ ಮುಖಮಾಡುತ್ತಾರೆ. ಇದರಿಂದ ನಗರದ ಸಂಚಾರದಟ್ಟಣೆ ಸಮಸ್ಯೆ ಪರಿಹಾರವಾಗುತ್ತದೆ ಎಂದು ಪ್ರತಿಪಾದಿಸಿದರು.
ನೂರು ಮೀಟರ್ಗೆ ನೂರೆಂಟು ವಿಘ್ನ!: ವಿದೇಶಗಳಲ್ಲಿ ವಾಹನ ಬಳಕೆಗಿಂತಲೂ ಕಾಲ್ನಡಿಗೆಗೆ ಜನ ಇಚ್ಛಿಸುತ್ತಾರೆ. ಆದರೆ, ಬೆಂಗಳೂರಿನಲ್ಲಿ 100 ಮೀಟರ್ ನಡೆಯಲು ನೂರೆಂಟು ವಿಘ್ನಗಳು ಎದುರಾಗುತ್ತವೆ. ವಿದ್ಯುತ್ ಟ್ರಾನ್ಸ್ಫಾರ್ಮರ್, ಮರ, ವಿದ್ಯುತ್ ಕಂಬ, ಓಎಫ್ಸಿ ಕೇಬಲ್, ಪಾದಚಾರಿ ರಸ್ತೆಯ ಸ್ಲಾéಬ್ಗಳು ಮುರಿದಿರುತ್ತವೆ. ಹೀಗಿರುವಾಗ, ಯಾರು ನಡೆದುಹೋಗಲು ಇಷ್ಟಪಡುತ್ತಾರೆ ಎಂದು ಆಶಿಶ್ ವರ್ಮ ತಿಳಿಸಿದರು.
ಮೂರನೇ ಹಂತಕ್ಕೆ ಬೇಸರ: ವಿದೇಶಗಳಲ್ಲಿ ಸಮೂಹ ಸಾರಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರತಿ 100-200 ಮೀಟರ್ಗೆ ಮೆಟ್ರೋ ನಿಲ್ದಾಣ ಸಿಗುತ್ತದೆ. ನಗರದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆದ್ಯತೆ ಮೇರೆಗೆ “ನಮ್ಮ ಮೆಟ್ರೋ’ ಮಾರ್ಗ ನಿರ್ಮಿಸಬೇಕಾಗಿತ್ತು. ಆದರೆ, ಈ ಯೋಜನೆಯನ್ನು 3ನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ