ಪರಿಹಾರ ಕಾಮಗಾರಿ ಮತ್ತಷ್ಟು ಚುರುಕಾಗಲಿ


Team Udayavani, Aug 21, 2018, 6:10 AM IST

bsyeddyurappa1246193f.jpg

ಬೆಂಗಳೂರು:ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ನೆರವಾಗಲು ಬಿಜೆಪಿಯ ವಿಧಾನಸಭೆ, ವಿಧಾನಪರಿಷತ್‌, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಒಂದು ತಿಂಗಳ ವೇತನ ಪರಿಹಾರ ನಿಧಿಗೆ ನೀಡಲು ತೀರ್ಮಾನಿಸಿದ್ದಾರೆ.

ಬಿಜೆಪಿಯ ಶಾಸಕರು ಹಾಗೂ ಸಂಸದರ ಒಂದು ತಿಂಗಳ ವೇತನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಗುವುದು. ಸಾರ್ವಜನಿಕರು ಸಹ  ಉದಾರವಾಗಿ ಧನ ಸಹಾಯ ಮಾಡಬೇಕು ಎಂದು ಪ್ರತಿಪಕ್ಷ ನಾಯಕರ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಊಹೆಗೂ ನಿಲುಕದಷ್ಟು ಹಾನಿಯುಂಟಾಗಿದ್ದು ಜಿಲ್ಲೆಯ ಜನರು ತಮ್ಮ ಸಹಜ ಜೀವನಕ್ಕೆ ಮರಳಲು ಹೆಣಗಾಡುತ್ತಿದ್ದಾರೆ. ಮನೆ, ಆಸ್ತಿ ಎಲ್ಲವನ್ನೂ ಕಳೆದುಕೊಂಡಿರುವ ಜನರಿಗೆ ನೆರವಿಗೆ ಧಾವಿಸುವುದು ನಮ್ಮ ಪ್ರಥಮ ಕರ್ತವ್ಯವಾಗಿದೆ. ಸದ್ಯಕ್ಕೆ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಜನರಿಗೆ ಸಮರೋಪಾದಿಯಲ್ಲಿ ಶಾಶ್ವತ ನೆಲೆಯನ್ನು ಒದಗಿಸಬೇಕಾಗದ ಅಗತ್ಯವಿದೆ.  ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ಚುರುಕಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ  ಒತ್ತಾಯಿಸಿದ್ದಾರೆ.

ಪುನರ್ವಸತಿ ಕೇಂದ್ರಗಳಲ್ಲಿರುವ ಸಂತ್ರಸ್ತರನ್ನು ನಾನು ಖುದ್ದಾಗಿ ಭೇಟಿ ಮಾಡಿದ್ದೇನೆ. ಸರ್ವಸ್ವವನ್ನೂ ಕಳೆದುಕೊಂಡಿರುವ ಜನರಿಗೆ ಶಾಶ್ವತ ಪುನರ್ವಸತಿ ಒದಗಿಸಲು ಕೇಂದ್ರ ಸರ್ಕಾರದಿಂದಲೂ ನೆರವು ಕಲ್ಪಿಸಲು ಪ್ರಯತ್ನಿಸಲಾಗುವುದು. ರಾಜ್ಯ ಸರ್ಕಾರ  ಈ ಸಂಬಂಧ ತಕ್ಷಣವೇ ಯೋಜನೆ ರೂಪಿಸಿ ಅನುಷ್ಟಾನಕ್ಕೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಪಾಲಿಕೆ ಸದಸ್ಯರ ಎರಡು ತಿಂಗಳ ವೇತನ
ಈಮಧ್ಯೆ, ಬಿಬಿಎಂಪಿಯಲ್ಲಿರುವ ಬಿಜೆಪಿಯ 99 ಪಾಲಿಕೆ ಸದಸ್ಯರು ಎರಡು ತಿಂಗಳ ವೇತನ ಪರಿಹಾರ ನಿಧಿಗೆ ಕೊಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ತಿಳಿಸಿದ್ದಾರೆ.

ಸಂತ್ರಸ್ತರಿಗೆ ನೆರವು ಕೊಡಿ
“ಕೊಡಗು ಜಿಲ್ಲೆಯಲ್ಲಿ ಮಳೆಯಬ್ಬರದಿಂದ ಪರಿಸ್ಥಿತಿ ಕೈ ಮೀರಿದೆ. ಜನ ಜೀವನ ಸಹಜ ಸ್ಥಿತಿಗೆ ಬರಲು ತಿಂಗಳುಗಳೇ ಬೇಕು. ಅಲ್ಲಿನ ಸಂತ್ರಸ್ತರಿಗೆ ನನ್ನ ಕೈಲಾದಷ್ಟು ನೆರವು ನೀಡಿದ್ದೇನೆ.ರಾಜ್ಯದ ಸಹೃದಯಿಗಳು ಮಾನವೀಯತೆಯ ದೃಷ್ಟಿಯಿಂದ ಕೈಲಾದಷ್ಟು ನೆರವು ನೀಡಬೇಕು’ಎಂದು ನಟ ಪುನೀತ್‌ ರಾಜಕುಮಾರ್‌ ಬಾಗಲಕೋಟೆಯಲ್ಲಿ ಮನವಿ ಮಾಡಿದರು.

ಹಾಲಿನ ಪುಡಿ ರವಾನೆ
ಮಂಡ್ಯ:
ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದಿಂದ ನೆಲೆ ಕಳೆದುಕೊಂಡು ನಿರಾಶ್ರಿತರಾಗಿರುವ ಜನರಿಗೆ ಜಿಲ್ಲಾ ಹಾಲು ಒಕ್ಕೂಟ 10 ಲಕ್ಷ ರೂ. ಮೌಲ್ಯದ ಹಾಲು ಮತ್ತು ಹಾಲಿನ ಪುಡಿಯನ್ನು ಸೋಮವಾರ ರವಾನಿಸಿತು. ಮನ್‌ ಮುಲ್‌ನಿಂದ ಎರಡು ಲಾರಿಗಳಲ್ಲಿ 1 ಕೆ.ಜಿ. ಪ್ಯಾಕೆಟ್‌ ನ 2,000 ಪ್ಯಾಕೆಟ್‌ಗಳು ಹಾಗೂ 500 ಎಂಎಲ್‌ನ 30 ಸಾವಿರ ಯುಎಚ್‌ಟಿ ಗುಡ್‌ಲೈಫ್ ಹಾಲಿನ ಪ್ಯಾಕೆಟ್‌ಗಳನ್ನು ನೆರೆ ಸಂತ್ರಸ್ತರಿಗೆ ಕಳುಹಿಸಿಕೊಡಲಾಯಿತು.

Ad

ಟಾಪ್ ನ್ಯೂಸ್

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Untitled-1

Mangaluru: ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ತಾಯಿಯಿಂದ ಎಸ್‌ ಪಿಗೆ ದೂರು

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

Tesla-Maha-CM

ದೇಶದ ಮೊದಲ ʼಟೆಸ್ಲಾʼ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

8-sirsi

Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ

Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ

Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Untitled-1

Mangaluru: ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ತಾಯಿಯಿಂದ ಎಸ್‌ ಪಿಗೆ ದೂರು

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

KOTA; ಬಿಯರ್‌ ಬಾಟಲಿಯಿಂದ ಹ*ಲ್ಲೆ; ಯುವಕನಿಗೆ ಗಂಭೀರ ಗಾಯ

Byndoor; ಮಲಗಿದಲ್ಲೇ ವ್ಯಕ್ತಿ ಸಾವು

Byndoor; ಮಲಗಿದಲ್ಲೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.