ಸಹಾನುಭೂತಿ ಸೂಚಿಸಲು ಕೋರಿದ ಸ್ಪೀಕರ್
Team Udayavani, Feb 12, 2019, 6:37 AM IST
ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಲು ಬಯಸಿದ ಸದಸ್ಯರಿಗೆ ಅವಕಾಶ ನೀಡಿದರು. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಮೌನವಾಗಿ ಕುಳಿತಿದ್ದರು. ಆಗ ಮಧ್ಯಪ್ರವೇಶಿದ ಸ್ಪೀಕರ್ ರಮೇಶ್ ಕುಮಾರ್, ತಾವೇ ಸಿದ್ದರಾಮಯ್ಯ ಅವರಿಗೆ ತಮ್ಮ ಪರವಾಗಿ ಸಹಾನುಭೂತಿ ವ್ಯಕ್ತಪಡಿಸುವಂತೆ ಮನವಿ ಮಾಡಿದರು.
ಸರ್ಕಾರ ರಚನೆಯಾದಾಗ ಸಭಾಧ್ಯಕ್ಷರನ್ನಾಗಿ ಮಾಡುವುದಾಗಿ ಹೇಳಿದ್ದೀರಿ, ಈಗ ನನ್ನ ಮೇಲೆ ಆರೋಪ ಕೇಳಿ ಬಂದಿದೆ. ನೀವು ಸುಮ್ಮನೆ ಕುಳಿತುಕೊಂಡರೆ,ನನ್ನ ಮೇಲೆ ಸಂಶಯ ಇದೆ ಎನಿಸುತ್ತದೆ. ನೀವೂ ನನ್ನ ಬಗ್ಗೆ ಮಾತನಾಡಿ ಎಂದು ಚಟಾಕಿ ಹಾರಿಸಿದರು.
ಆಗ ಎದ್ದು ನಿಂತ ಸಿದ್ದರಾಮಯ್ಯ, ನಿಮ್ಮ ಮೇಲೆ ನನಗೆ ಅಪಾರ ಗೌರವ ಇದೆ. ನಲವತ್ತು ವರ್ಷದಿಂದ ನಿಮ್ಮನ್ನು ವೈಯಕ್ತಿಕವಾಗಿ ನೋಡಿದ್ದೇನೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಇತಿಶ್ರೀ ಹಾಡಬೇಕು. ಸದನ ನಿಮ್ಮನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ. 225 ಸದಸ್ಯರ ಹಿತ ಕಾಯುವುದು ನಿಮ್ಮ ಜವಾಬ್ದಾರಿ. ಇದು ಭಾವನಾತ್ಮಕ ವಿಷಯವಲ್ಲ. ಗಂಭೀರ ವಿಷಯ. ಈ ಪ್ರಕರಣದಲ್ಲಿ ಸತ್ಯ ಹೊರಬರಬೇಕು.
ಕಳೆದ ಆರು ತಿಂಗಳಿನಿಂದ ಏನೇನು ನಡೆಯುತ್ತಿದೆ ಎನ್ನುವುದನ್ನು ನೋಡಿದ್ದೇವೆ. ಆಡಿಯೋದಲ್ಲಿರುವ ಎಲ್ಲ ಸಂಭಾಷಣೆ ಬಗ್ಗೆಯೂ ತನಿಖೆಯಾಗಬೇಕು. ಯಾರು ಮಾತನಾಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ಇಡೀ ದೇಶವೇ ಗಮನಿಸುತ್ತಿದೆ. ನಮ್ಮ ಸದನ ಕೈಗೊಳ್ಳುವ ತೀರ್ಮಾನ ಇಡೀ ದೇಶದ ಜನತೆಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ