ರಾಜ್ಯ ಸರ್ಕಾರ ಒಪ್ಪಿದ ಬಳಿಕ ಕೇಂದ್ರ ಸರ್ಕಾರಕ್ಕೆ ಮನವಿ


Team Udayavani, Sep 5, 2017, 7:20 AM IST

mb-patil-05-20147.jpg

ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತರ ಸ್ಥಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು, ಸರ್ಕಾರ ಒಪ್ಪಿದ ನಂತರವಷ್ಟೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡು ಸ್ಪಂದಿಸದಿದ್ದರಷ್ಟೇ ಸುಪ್ರೀಂ ಕೋರ್ಟ್‌ ಮೊರೆ ಹೋಗಲಾಗುವುದು ಎಂದು ಸಚಿವರಾದ ಎಂ.ಬಿ.ಪಾಟೀಲ್‌ ಹಾಗೂ ವಿನಯ್‌ ಕುಲಕರ್ಣಿ ಹೇಳಿದರು.

ನಗರದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ಲಿಂಗಾಯತ ಧರ್ಮಕ್ಕೆ ಸಂವಿಧಾನ ಮಾನ್ಯತೆ ನೀಡುವಂತೆ ಮನವಿ ಸಲ್ಲಿಸಲಾಗಿದ್ದು, ವೀರಶೈವರು ಸಹ ಪ್ರತ್ಯೇಕ ಮನವಿ ನೀಡಿದ್ದಾರೆ. ಹಾಗಾಗಿ ಗೊಂದಲ ಉಂಟಾಗದಂತೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿಗಳನ್ನು ಕೋರಿದ್ದು, ಸರ್ಕಾರ ಒಪ್ಪುವ ವಿಶ್ವಾಸವಿದೆ. ಆದರೆ ರಾಜ್ಯ ಸರ್ಕಾರ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತರ ಸ್ಥಾನ ನೀಡುವವರೆಗೆ ಕೇಂದ್ರ ಸರ್ಕಾರದ ಮೊರೆ ಹೋಗುವ ಪ್ರಶ್ನೆ ಇಲ್ಲ ಎಂದು ಹೇಳಿದರು.

ವೀರಶೈವ, ಪಂಚಮಸಾಲಿ, ಬಣಜಿಗ, ಜಂಗಮ, ಆರಾಧ್ಯ, ಕೂಡು ಒಕ್ಕಲಿಗ, ಶಿವಸಿಂಪಿ ಸೇರಿದಂತೆ ಒಟ್ಟು 99 ಉಪಪಂಗಡಗಳು ಸೇರಿ ಒಂದು ಲಿಂಗಾಯತ ಧರ್ಮವಾಗಿದೆ. ಈ ಬಗ್ಗೆ ಸಾಕ್ಷ್ಯಾಧಾರ, ದಾಖಲೆಗಳೂ ಇವೆ. ಜೈನ, ಬೌದ್ಧ, ಸಿಖ್‌ ಧರ್ಮಗಳಿಗೆ ಮಾನ್ಯತೆ ನೀಡಿದ ಮಾದರಿಯಲ್ಲೇ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಬೇಕು ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.

ಜೈನ ಸೇರಿದಂತೆ ಇತರೆ ಧರ್ಮಗಳಿಗೆ ಪ್ರತ್ಯೇಕ ಮಾನ್ಯತೆ ನೀಡಿದ್ದರಿಂದ ಹಿಂರ್ದು ಧರ್ಮ, ಇತರೆ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ. ಅದೇ ರೀತಿ ಲಿಂಗಾಯತರಿಗೆ ಸ್ವತಂತ್ರ ಧರ್ಮ ಮಾನ್ಯತೆ ನೀಡಿದರೆ ಹಿಂದು ಧರ್ಮಕ್ಕೆ ಧಕ್ಕೆಯಾಗುವುದಿಲ್ಲ. ನಮ್ಮ ಬೇಡಿಕೆಗೆ ಈವರೆಗೆ ಯಾವುದೇ ಅನ್ಯಧರ್ಮೀಯರು ವಿರೋಧ ವ್ಯಕ್ತಪಡಿಸಿಲ್ಲ. ಹಾಗಿದ್ದರೂ ವೀರಶೈವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಬಹಿರಂಗ ಆಹ್ವಾನ
ಬಿಜೆಪಿ ಮುಖಂಡರಾದ ಬಿ.ಎಸ್‌.ಯಡಿಯೂರಪ್ಪ ಅವರು ವೀರಶೈವರು ಹಿಂದು ಧರ್ಮದ ಭಾಗ ಎಂದಿದ್ದಾರೆ. ಹೀಗಾಗಿ ಅವರು ನಮ್ಮೊಂದಿಗೆ ಬರುವ ಪ್ರಶ್ನೆಯೇ ಇರುವುದಿಲ್ಲ. ಲಿಂಗಾಯತ ಧರ್ಮ ಒಪ್ಪಿ ಬರುವುದಾದರೆ ಯಡಿಯೂರಪ್ಪ, ಜಗದೀಶ ಶೆಟ್ಟರ್‌ ಇಬ್ಬರೂ ಬರಲಿ ಎಂದು ಬಹಿರಂಗ ಆಹ್ವಾನ ನೀಡಿದರು.

ಸ್ವಾಮೀಜಿ ಹೇಳಿಕೆಗೆ ಉಗ್ರ ಖಂಡನೆ
ಚಿಂತಕ ಎಂ.ಎಂ.ಕಲಬುರ್ಗಿ ಅವರೇ ವೀರಶೈವ ಲಿಂಗಾಯತ ಧರ್ಮವನ್ನು ಒಡೆದರು ಎಂಬುದಾಗಿ ಶಿವಯೋಗ ಮಂದಿರದ ಅಧ್ಯಕ್ಷರಾದ ಹಾಲಕೆರೆ ಅನ್ನದಾನೀಶ್ವರ ಸ್ವಾಮೀಜಿ ನೀಡಿರುವ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇವೆ. 

ಎಂ.ಎಂ.ಕಲಬುರ್ಗಿ ಅವರು ನಿಜವಾದ ಲಿಂಗಾಯತ ಧರ್ಮ ಪ್ರತಿಪಾದಕರು. ವೈದಿಕ ಧರ್ಮದ ಮುಖವಾಡವನ್ನು ಅವರು ಕಳಚಿದ್ದರು. ಅವರಿಂದಾಗಿ ಲಿಂಗಾಯತ ಧರ್ಮದ ಬಗ್ಗೆ ಜಾಗೃತಿಯಾಗಿದೆ ಎಂದು ಹೇಳಿದರು.

ಇನ್ನೊಂದೆಡೆ ಲಿಂಗಾಯತರು ಬೇರೆ, ವೀರಶೈವರು ಬೇರೆ ಎನ್ನುವವರು ಚುನಾವಣೆಗೆ ಸಿದ್ಧರಾಗಿ ಎಂಬುದಾಗಿ ಅನ್ನದಾನೀಶ್ವರ ಸ್ವಾಮೀಜಿ ಅವರ ಸವಾಲನ್ನು ನಾವು ಸ್ವೀಕರಿಸುತ್ತೇವೆ. ಈ ಹಿಂದೆ ವೀರೇಂದ್ರ ಪಾಟೀಲ್‌, ಜೆ.ಎಚ್‌.ಪಟೇಲ್‌ ಅವರಿಂದ ಹಿಡಿದು ಎಂ.ಬಿ.ಪಾಟೀಲ್‌, ವಿನಯ್‌ ಕುಲಕರ್ಣಿವರೆಗೆ ಎಲ್ಲರೂ ಲಿಂಗಾಯತ ಕೋಟಾದಲ್ಲೇ ಅಧಿಕಾರ ಪಡೆದಿದ್ದೇವೆ. ಇನ್ನು ಮಂದೆ ವೀರಶೈವರು ತಮ್ಮದೇ ವೀರಶೈವ ಕೋಟಾದಡಿ ಅಧಿಕಾರ ಕೇಳಲಿ. ಲಿಂಗಾಯತ ಕೋಟಾಕ್ಕೆ ಕೈಹಾಕಬಾರದು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

ಲಿಂಗಾಯತರು ಮೂಲತಃ ಕನ್ನಡಿಗರಾಗಿದ್ದರೆ ವೀರಶೈವರು ಮೂಲತಃ ಕನ್ನಡಿಗರಲ್ಲ. ತಮಿಳುನಾಡಿನಿಂದ ವಲಸೆ ಬಂದ ಬಹಳಷ್ಟು ವೀರಶೈವರು ಲಿಂಗಾಯತ ಧರ್ಮ ಸ್ವೀಕರಿಸಿದರು. ಕೆಲವರು ಆಂಧ್ರ ಪ್ರದೇಶದಿಂದಲೂ ವಲಸೆ ಬಂದಿದ್ದರು. ಅವರು ಲಿಂಗಾಯತ ಧರ್ಮದ ಉಳಿದ ಎಲ್ಲ ಪಂಗಡಗಳ ಜೊತೆಯಲ್ಲೇ ಜೀವನ ನಡೆಸಿದ್ದರು. ಆದರೆ ಕ್ರಮೇಣ ತಮ್ಮದೇ ಧರ್ಮವೆಂದು ಪ್ರತಿಪಾದಿಸಿದರು. ಈಗಲೂ ಶೇ.90ರಷ್ಟು ಮಂದಿ ಲಿಂಗಾಯತರೇ ಆಗಿದ್ದು, ಶೇ.10ರಷ್ಟು ಮಂದಿಯಷ್ಟೇ ವೀರಶೈವರೆನಿಸಿದ್ದಾರೆ. ಇದಕ್ಕೆ ಬೀದರ್‌, ಬೆಳಗಾವಿ ಮತ್ತು ಲಾತೂರಿನಲ್ಲಿ ನಡೆದ ಸಮಾವೇಶದ ಜನಸಮೂಹವೇ ಸಾಕ್ಷಿ. ಇದಕ್ಕೆ ಸೂಕ್ತ ಸಾಕ್ಷ್ಯಧಾರಗಳು ನಮ್ಮಲ್ಲಿವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.