ಬೆಂಕಿಗೂ ಬೆದರದ ಕನ್ನಡತಿಯರು!


Team Udayavani, Mar 8, 2020, 12:01 PM IST

ಬೆಂಕಿಗೂ ಬೆದರದ ಕನ್ನಡತಿಯರು!

ಬೆಂಗಳೂರು: ಸಾಂಪ್ರದಾಯಿಕವಾಗಿ ಪುರುಷರ ಪ್ರಾಬಲ್ಯ ಇರುವ ಅಗ್ನಿಶಾಮಕ ದಳದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ (ಬಿಐಎಎಲ್‌) ಮಹಿಳೆಯರ ತಂಡವನ್ನು ಕಟ್ಟಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾರಿಯರ ಹೊಸ ಅಧ್ಯಾಯ ಆರಂಭವಾಗಿದೆ.

ಏಷ್ಯಾ ಖಂಡದ ಯಾವುದೇ ವಿಮಾನ ನಿಲ್ದಾಣದ ಅಗ್ನಿಶಾಮಕ ದಳದಲ್ಲಿ ಮಹಿಳಾ ಸಿಬ್ಬಂದಿ ಇಲ್ಲ. ಇದೇ ಮೊದಲ ಬಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗ್ನಿಶಾಮಕ ದಳದಲ್ಲಿ ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಪೈಕಿ 14 ಮಹಿಳೆಯರೂ ಕನ್ನಡಿಗರಾಗಿರುವುದು ಹೆಮ್ಮೆಯ ವಿಷಯ.

ಪ್ರಸ್ತುತ ವಿಮಾನ ನಿಲ್ದಾಣದಲ್ಲಿ 2 ಅಗ್ನಿ ಶಾಮಕ ದಳದ ಠಾಣೆ, 265 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. 25 ಅಗ್ನಿಶಾಮಕ ವಾಹನಗಳಿವೆ. ತುರ್ತು ಸಂದರ್ಭ ಹಾಗೂ ಅಗ್ನಿ ಅವಘಡ ಸಂಭವಿಸಿದಾಗ ಈ ಪಡೆ ತಕ್ಷಣ ಕಾರ್ಯಪ್ರವೃತ್ತವಾಗುತ್ತದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಾಗಿ 2019ರ ಮಾರ್ಚ್‌ನಲ್ಲಿ ರಾಜ್ಯದ ವಿವಿಧೆಡೆಯಿಂದ ಈ 14 ಮಹಿಳೆಯರನ್ನು ಅಗ್ನಿಶಾಮಕ ದಳ (ಎಆರ್‌ಎಫ್ಎಫ್) ಪಡೆಗೆ ಆಯ್ಕೆ ಮಾಡಲಾಗಿತ್ತು. ನಂತರ ಇವರನ್ನು ಕೊಲ್ಕತಾದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಗ್ನಿಶಾಮಕ ತರಬೇತಿ ಕೇಂದ್ರದಲ್ಲಿ ತರಬೇತಿಗೆ ಕಳುಹಿಸಲಾಯಿತು. ಅಲ್ಲಿ ಜೀವ ಉಳಿಸುವ ಕಾಯಕದ ವಿವಿಧ ತಂತ್ರ ಹಾಗೂ ಆ ಸಂದರ್ಭದಲ್ಲಿ ತೋರಬೇಕಾದ ಸಾಹಸ ಮತ್ತು ಚಾಕಚಕ್ಯತೆ ಕಲಿತು ಒಂದು ವರ್ಷದ ಬಳಿಕ ಇವರು ಅಗ್ನಿಶಾಮಕ ಕಾರ್ಯಕ್ಕೆ ಸನ್ನದ್ಧರಾಗಿದ್ದಾರೆ. ಅಗ್ನಿಶಾಮಕ ದಳದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವೇ ಎಂದು ಕೇಳಿದವರೇ ಹೆಚ್ಚು. ಆದರೆ, ಪ್ರಯತ್ನ ಪಟ್ಟರೆ ಯಶಸ್ಸು ಖಚಿತ.

ಅದರಂತೆ ಪರಿಶ್ರಮದಿಂದ ತರಬೇತಿ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಬಹುತೇಕ ನಾವೆಲ್ಲರೂ ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸಿದ್ದೇವೆ. ಹೊಸ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿದ್ದೇವೆ ಎಂದು ತಂಡದಲ್ಲಿರುವ ದೇವನಹಳ್ಳಿಯ ಸುಮಾ ಹೇಳಿದರು.

ಪುರುಷರೇ ಪ್ರಧಾನವಾಗಿರುವ ಅಗ್ನಿಶಾಮಕ ಕ್ಷೇತ್ರಕ್ಕೂ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಬಿಐಎಎಲ್‌ ಮೆಚ್ಚುಗೆಗೆ ಪಾತ್ರವಾಗಿದೆ. ದೃಢ ಸಂಕಲ್ಪ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಇತರೆ ಮಹಿಳೆಯರಿಗೆ ಇವರು ಸ್ಫೂರ್ತಿ ಆಗಿದ್ದಾರೆ.ಥಾಮಸ್‌ ಆಂಡರ್‌ಸನ್‌, ಬಿಐಎಎಲ್‌ ಮುಖ್ಯ ಕಾರ್ಯಾಚರಣೆ ಅಧಿಕಾರಿ

ನಮ್ಮದು ಬಿಸಿಲು ನಾಡು. ಪತ್ರಿಕೆಗಳಲ್ಲಿ ಸಾಧಕರ ಬಗ್ಗೆ ಓದುವಾಗ ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಇತ್ತು. ಅದಕ್ಕೆ ಪೂರಕವೆಂಬಂತೆ ಅಗ್ನಿಶಾಮಕ ದಳದಲ್ಲಿ ಕೆಲಸ ನಿರ್ವಹಿಸುವ ಅವಕಾಶ ದೊರೆಯಿತು.ಪ್ರಿಯದರ್ಶಿನಿ ಬಿರಾದಾರ್‌, ಕಲಬುರಗಿ.

50 ಕೆ.ಜಿ. ವ್ಯಕ್ತಿಯನ್ನು ಹೊತ್ತು 35 ಅಡಿ ಎತ್ತರದ ಏಣಿಯಿಂದ ಇಳಿಯುತ್ತಾರೆ! : ಕೊಲ್ಕತ್ತಾದಲ್ಲಿ 4 ತಿಂಗಳ ತರಬೇತಿ ಕಠಿಣವಾಗಿತ್ತು. ಬೆಳಗ್ಗೆ 6 ಗಂಟೆಯಿಂದ ಆರಂಭವಾಗುವ ದಿನಚರಿ ಸಂಜೆ ಮುಕ್ತಾಯವಾಗುತ್ತಿತ್ತು. ದೈಹಿಕ ಸದೃಢತೆ ಕಾಪಾಡಿಕೊಳ್ಳುವುದು, ಜನರ ರಕ್ಷಣೆ ಹೇಗೆ ಮಾಡಬೇಕು ಎಂಬುದನ್ನು ತರಬೇತಿ ನೀಡಲಾಗುತ್ತಿತ್ತು. ಅದರಲ್ಲಿ ಲ್ಯಾಡರ್‌ ಡ್ರಿಲ್‌ ಕೂಡ ಒಂದಾಗಿದ್ದು, ಇದು ಬಹಳ ಕಠಿಣವಾಗಿತ್ತು. 50 ಕೆ.ಜಿ.ಗೂ ಅಧಿಕ ತೂಕವಿರುವ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತುಕೊಂಡು 35 ಅಡಿ ಎತ್ತರದ ಏಣಿಯಿಂದ ಕೆಳಗೆ ಇಳಿಯಬೇಕು. ಆಕಸ್ಮಾತ್‌ ಕೈ ಬಿಟ್ಟರೆ ಹೆಗಲ ಮೇಲಿರುವ ವ್ಯಕ್ತಿ ಸಹಿತ ನಾವು ಕೆಳಗೆ ಬೀಳುತ್ತಿದ್ದೆವು. ಇದು ಮಾತ್ರ 14 ಮಂದಿಯಲ್ಲಿಯೂ ಭಯ ಹುಟ್ಟಿಸಿತ್ತು. ಮೊದಲನೇ ದಿನ ನಿದ್ರೆಯೂ ಬಂದಿರಲಿಲ್ಲ. ಆದರೂ, ಹಿಂಜರಿಯದೇ ಈ ಟಾಸ್ಕ್ ಅನ್ನು ಮುಗಿಸಿದೆವು ಎಂದು ಹಾಸನದ ವನಿತಾ ತರಬೇತಿಯ ಅನುಭವವನ್ನು ಹಂಚಿಕೊಂಡರು.

 

-ಮಂಜುನಾಥ್‌ ಗಂಗಾವತಿ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.