ಕದ್ದ ಗೋಡಂಬಿ ಮೌಲ್ಯ 17ಲಕ್ಷ ರೂ.


Team Udayavani, Aug 25, 2018, 12:52 PM IST

kadda-godambi.jpg

ಬೆಂಗಳೂರು: ಮೈತುಂಬಾ ಸಾಲ ಮಾಡಿಕೊಂಡು, ಅದನ್ನು ತೀರಿಸಲು ಚಿನ್ನ ಕದಿಯುವುದು, ಹಣ ದೋಚಿದ ಪ್ರಕರಣಗಳು ಸಾಕಷ್ಟಿವೆ. ಆದರೆ ಇಲ್ಲೊಬ್ಬ ವ್ಯಕ್ತಿ ಗೋಡಂಬಿ ಗೋದಾಮಿಗೆ ಕನ್ನ ಹಾಕಿ, ಖಾಕಿ ಪಡೆಗೆ ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ!

ಒಣ ದ್ರಾಕ್ಷಿ ಖರೀದಿಸಲು ಮಾಡಿದ್ದ ಸಾಲ ತೀರಿಸಲು ಪರಿಚಯಸ್ಥರ ಗೋದಾಮಿಗೆ ಕನ್ನ ಹಾಕಿ, ಅಲ್ಲಿದ್ದ 17 ಲಕ್ಷ ರೂ. ಮೌಲ್ಯದ ಗೋಡಂಬಿ ಕಳವು ಮಾಡಿ ಬೇರೆಡೆ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ವ್ಯಾಪಾರಿಯನ್ನು ಬಂಧಿಸುವಲ್ಲಿ ವೈಯಾಲಿಕಾವಲ್‌ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಮೂಲದ, ಪ್ರಸ್ತುತ ಬಸವೇಶ್ವರನಗರ ನಿವಾಸಿಯಾಗಿರುವ ಪ್ರಶಾಂತ್‌ ತಾನಾಜಿ ಪಾಟೀಲ್‌ (25) ಬಂಧಿತ. ಆರೋಪಿ ತನಗೆ ಪರಿಚಿತರಾಗಿರುವ, ಸುಬ್ರಹ್ಮಣ್ಯನಗರದ ನಿವಾಸಿ ರಾಜೇಶ್‌ ಕಾಮತ್‌ ಎಂಬುವವರ ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ 1,980 ಕೆ.ಜಿ. ಗೋಡಂಬಿ ಕಳವು ಮಾಡಿದ್ದ. ಕಳವು ಮಾಡಿದ್ದ ಗೋಡಂಬಿಯನ್ನು ಸ್ನೇಹಿತನ ಮನೆಯಲ್ಲಿ ಇರಿಸಿದ್ದ.

ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ಮೂಲದ ರಾಜೇಶ್‌ ಕಾಮತ್‌, ಗೋಡಂಬಿ ಹೋಲ್‌ಸೇಲ್‌ ವ್ಯಾಪಾರ ಮಾಡುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ಗೋಡಂಬಿ ಖರೀದಿಸಿ ವೈಯಾಲಿಕಾವಲ್‌ನ 12ನೇ ಮುಖ್ಯ ರಸ್ತೆಯಲ್ಲಿರುವ ಓಂ ಶ್ರೀ ಟ್ರೇಡರ್ ಹೆಸರಿನ ಗೋದಾಮಿನಲ್ಲಿ ಶೇಖರಿಸಿ ಇಡುತ್ತಾರೆ. ಅಲ್ಲಿಂದ ನಗರದ ಡ್ರೈಫ‌ೂಟ್ಸ್‌ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಾರೆ.

ಇವನೂ ವ್ಯಾಪಾರಿ: ಬಂಧಿತ ಆರೋಪಿ ಪ್ರಶಾಂತ್‌ ಕೂಡ ಡ್ರೈಫ‌ೂಟ್ಸ್‌ ವ್ಯಾಪಾರಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ರಾಜೇಶ್‌ ಕಾಮತ್‌ ಜತೆ ವ್ಯವಹಾರ ನಡೆಸುತ್ತಿದ್ದ. ಹೀಗಾಗಿ ಆರೋಪಿ ಆಗಾಗ ರಾಜೇಶ್‌ ಕಾಮತ್‌ ಅವರ ಗೋದಾಮಿಗೆ ಭೇಟಿ ನೀಡುತ್ತಿದ್ದ. ಈ ವೇಳೆ ಅಲ್ಲಿ ಲಕ್ಷಾಂತರ ರೂ. ಮೌಲ್ಯದ ಗೋಡಂಬಿ ಸಂಗ್ರಹಿಸಿ ಇಟ್ಟಿರುವುದನ್ನು ಗಮನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೇಶ್‌ ಕಾಮತ್‌ ಆಗಸ್ಟ್‌ ಎರಡನೇ ವಾರದಲ್ಲಿ ತೀರ್ಥಹಳ್ಳಿಯಿಂದ 510 ಕೆ.ಜಿ, ಮಂಗಳೂರಿನಿಂದ 800 ಕೆ.ಜಿ, ಆ.5ರಂದು ಕೋಣಂದೂರಿನಿಂದ 1,050 ಕೆ.ಜಿ, ಕಾರ್ಕಳದಿಂದ 700 ಕೆ.ಜಿ ಸೇರಿ ಒಟ್ಟು 3,060 ಕೆ.ಜಿ ಗೋಡಂಬಿಯನ್ನು ತರಿಸಿಕೊಂಡು ತಮ್ಮ ಗೋದಾಮಿನಲ್ಲಿ ಶೇಖರಿಸಿ ಇರಿಸಿದ್ದರು.

ಉಳಿದದ್ದು ಒಂದೇ ಡಬ್ಬ!: ಆ.21ರಂದು ಗೋದಾಮಿನಲ್ಲಿರುವ ಎಲ್ಲ ಗೋಡಂಬಿ ಡಬ್ಬಗಳನ್ನು ಲೆಕ್ಕ ಬಾಕಿ ಗೋದಾಮಿಗೆ ಬೀಗ ಹಾಕಿ ಹೋಗಿದ್ದರು. ಆ.22ರಂದು ಸಂಜೆ ವ್ಯಾಪಾರಿಗಳಿಗೆ ಗೋಡಂಬಿ ಸರಬರಾಜು ಮಾಡಲು ಗೋದಾಮು ಬಾಗಿಲು ತೆರೆದಾಗ 10 ಕೆ.ಜಿ. ಗೋಡಂಬಿ ಇದ್ದ 198 ಡಬ್ಬಗಳು ನಾಪತ್ತೆಯಾಗಿದ್ದವು. ಒಂದೇ ಒಂದು ಡಬ್ಬ ಮಾತ್ರ ಇತ್ತು. ಇದರಿಂದ ಆತಂಕಗೊಂಡ ರಾಜೇಶ್‌ ಕಾಮತ್‌ ಕೂಡಲೇ ವೈಯಾಲಿಕಾವಲ್‌ ಠಾಣೆಗೆ ದೂರು ನೀಡಿದ್ದರು. ಅಲ್ಲದೆ, ಆ.19ರಂದು ಪ್ರಶಾಂತ್‌ 2-3 ಬಾರಿ ಗೋದಾಮಿಗೆ ಬಂದು ಹೋಗಿದ್ದ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಆರೋಪಿಯ ಮೊಬೈಲ್‌ ನೆಟ್‌ವರ್ಕ್‌ ಪರಿಶೀಲಿಸಿದಾಗ ಮೊದಲಿಗೆ ಸ್ವಿಚ್‌ಆಫ್ ಆಗಿತ್ತು. ಮರು ದಿನ ಮತ್ತೂಮ್ಮೆ ಪರಿಶೀಲಿಸಿದಾಗ ಬಸವೇಶ್ವರನಗರದಲ್ಲಿ ಸಂಖ್ಯೆಯ ಸುಳಿವು ಪತ್ತೆಯಾಗಿತ್ತು. ಅನುಮಾನದ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ತಾನೇ ಕಳವು ಮಾಡಿದ್ದಾಗಿ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಕೀ ಬಳಸಿ ಕೃತ್ಯ: ಡ್ರೈಫ‌ೂಟ್ಸ್‌ ವ್ಯಾಪಾರಿಯಾಗಿರುವ ಪ್ರಶಾಂತ್‌, ನೆರೆ ರಾಜ್ಯಗಳಿಂದ ಒಣ ದ್ರಾಕ್ಷಿ ತರಿಸಿ ನಗರದ ವಿವಿಧ ಅಂಗಡಿಗಳಿಗೆ ಪೂರೈಸುತ್ತಿದ್ದ. ಇದಕ್ಕಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ. ಆದರೆ, ನಿರೀಕ್ಷೆಯಂತೆ ಲಾಭ ಬಾರದೆ ನಷ್ಟ ಅನನುಭವಿಸಿದ್ದ. ಹೀಗಾಗಿ ಸಾಲಗಾರರು ಮನೆ ಹಾಗೂ ಅಂಗಡಿ ಬಳಿ ಬಂದು ಹಣ ಹಿಂದಿರುಗಿಸುವಂತೆ ಒತ್ತಾಯಿಸುತ್ತಿದ್ದರು.

ಈ ನಡುವೆ ರಾಜೇಶ್‌ ಕಾಮತ್‌ ಗೋದಾಮಿಗೆ ಭೇಟಿ ನೀಡಿದ್ದ ಆರೋಪಿ ಇಲ್ಲಿರುವ ಗೋಡಂಬಿ ಡಬ್ಬಗಳನ್ನು ಕಳವು ಮಾಡಿ ಸಾಲ ತೀರಿಸಲು ಸಂಚು ರೂಪಿಸಿದ್ದ. ಅದರಂತೆ ಆ.19ರಂದು ಬೆಳಗ್ಗೆಯೇ ಗೋದಾಮಿಗೆ ಹೋದ ಆರೋಪಿ, ರಾಜೇಶ್‌ ಕಾಮತ್‌ ಜತೆ ಮಾತನಾಡುತ್ತ, ಅವರಿಗೆ ಗೊತ್ತಾಗದಂತೆ ಗೋದಾಮಿನ ಕೀ ಎಗರಿಸಿಕೊಂಡು ಹೋಗಿದ್ದ. ನಕಲಿ ಕೀ ಮಾಡಿಸಿಕೊಂಡು ಒಂದು ಗಂಟೆ ಬಳಿಕ ಮತ್ತೆ ಬಂದು ಅಸಲಿ ಕೀ ಇಟ್ಟು, ನಂತರ ಕೆಲ ಹೊತ್ತು ಅಲ್ಲೇ ಇದ್ದು ಹೋಗಿದ್ದ.

ಆ.21ರಂದು ತಡರಾತ್ರಿ 12.30ರ ಸುಮಾರಿಗೆ ಬಾಡಿಗೆ ವಾಹನದೊಂದಿಗೆ ಗೋದಾಮಿಗೆ ಬಂದ ಆರೋಪಿ, ನಕಲಿ ಕೀ ಮೂಲಕ ಬೀಗ ತೆಗೆದು, 17 ಲಕ್ಷ ರೂ. ಮೌಲ್ಯದ, 1,980 ಕೆ.ಜಿ ಗೋಡಂಬಿ ಕಳವು ಮಾಡಿದ್ದ. ಅದನ್ನು ಬಸವೇಶ್ವರನಗರದ ಶಿವನಗರದಲ್ಲಿರುವ ಸ್ನೇಹಿತನ ಮನೆಯಲ್ಲಿ ಶೇಖರಿಸಿಟ್ಟಿದ್ದ. ಆ.23ರಂದು ಸಗಟು ವ್ಯಾಪಾರಿಗಳಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ. ಅಷ್ಟರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ವೈಯಾಲಿಕಾವಲ್‌ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.