ಹೋಟೆಲ್‌ ಮೇಲೆ ಕಲ್ಲು


Team Udayavani, Jan 14, 2019, 6:14 AM IST

hotel.jpg

ಬೆಂಗಳೂರು: ರಸ್ತೆ ಅಪಘಾತ ವಿಚಾರವಾಗಿ ಸ್ವಿಗ್ಗಿ ಸಂಸ್ಥೆಯ ಆಹಾರ ಡೆಲಿವರಿ ಮಾಡುವ ಯುವಕರ ಗುಂಪು ಅರಕೆರೆ ಬಳಿಯಿರುವ ಎಂಪೈರ್‌ ಹೋಟೆಲ್‌ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಪ್ರಕರಣ ಸಂಬಂಧ ಎಂಪೈರ್‌ ಹೋಟೆಲ್‌ನ ಏಳು ಸಿಬ್ಬಂದಿ ಹಾಗೂ 21 ಮಂದಿ ಸ್ವಿಗ್ಗಿ ಫ‌ುಡ್‌ ಡಿಲೆವರಿ ಯುವಕರನ್ನು ಮೈಕೋ ಲೇಔಟ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಬನ್ನೇರುಘಟ್ಟ ರಸ್ತೆಯಲ್ಲಿ ಸ್ವಿಗ್ಗಿ ಫ‌ುಡ್‌ ಡೆಲಿವರಿ ಯುವಕ ನದೀಂ ಎಂಬುವವನು ಬೈಕ್‌ನಲ್ಲಿ ಹೋಗುತ್ತಿದ್ದ. ಇದೇ ವೇಳೆ ಹಿಂದಿನಿಂದ ಬಂದ ಎಂಪೈರ್‌ ಹೋಟೆಲ್‌ ಸಿಬ್ಬಂದಿ ಫಾರುಖ್‌ ಎಂಬಾತ, ನದೀಂ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ನದೀಂ ಬೈಕ್‌ಗೆ ಹಾನಿಯಾಗಿತ್ತು. ಇದೇ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೂಡಲೇ ಸ್ಥಳದಲ್ಲಿದ್ದ ಮೈಕೋಲೇಔಟ್‌ ಸಂಚಾರ ಠಾಣೆ ಪೊಲೀಸರು ಇಬ್ಬರಿಗೂ ಸಮಾಧಾನ ಮಾಡಿ ಸ್ಥಳದಿಂದ ಕಳುಹಿಸಿದ್ದರು ಎಂದು ಪೊಲೀಸರು ಹೇಳಿದರು.

ಆದರೆ, ಘಟನೆಯಿಂದ ಆಕ್ರೋಶಗೊಂಡಿದ್ದ ನದೀಂ ಸ್ವಿಗ್ಗಿ ಸಂಸ್ಥೆಯ ಇತರೆ ಸಿಬ್ಬಂದಿ ಹಾಗೂ ಕೆಲ ಸ್ನೇಹಿತರನ್ನು ಬನ್ನೇರುಘಟ್ಟದ ಅರಕೆರೆಯಲ್ಲಿರುವ ಎಂಪೈರ್‌ ಹೋಟೆಲ್‌ಗೆ ಕರೆದೊಯ್ದು ಒಳ ನುಗ್ಗಿ ಫಾರುಕ್‌ಗಾಗಿ ಹುಡುಕಾಟ ನಡೆಸಿದ್ದಾನೆ. ಈ ವೇಳೆ ಹೋಟೆಲ್‌ ಸಿಬ್ಬಂದಿ ಹಾಗೂ ನದೀಂ ತಂಡದ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದಾರೆ.

ಬಳಿಕ ನದೀಂ ಮೈಕೋ ಲೇಔಟ್‌ ಠಾಣೆಯಲ್ಲಿ ಹಲ್ಲೆ ಆರೋಪದಡಿ ದೂರು ನೀಡಿದ್ದ. ಈ ಸಂಬಂಧ ಫಾರುಖ್‌ ಹಾಗೂ ಇತರೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಎಂಪೈರ್‌ ಹೋಟೆಲ್‌ ಮತ್ತು ಸ್ವಿಗ್ಗಿ ಫ‌ುಡ್‌ ಸಂಸ್ಥೆ ಮುಖ್ಯಸ್ಥರು ಠಾಣೆಗೆ ಬಂದು ಪರಸ್ಪರ ಸಂಧಾನ ಮಾಡಿಕೊಳ್ಳುವುದಾಗಿ ಹೇಳಿ ಕರೆದೊಯ್ದಿದ್ದರು ಎಂದು ಪೊಲೀಸರು ಹೇಳಿದರು.

ವಾಟ್ಸ್‌ಆ್ಯಪ್‌ ಮೂಲಕ ಕರೆಸಿಕೊಂಡ: ಈ ನಡುವೆ ತಡರಾತ್ರಿ 12.30ರ ಸುಮಾರಿಗೆ ತನ್ನ ವಾಟ್ಸ್‌ಆ್ಯಪ್‌ ಮೂಲಕ ಸಂದೇಶ ರವಾನಿಸಿದ ನದೀಂ, ಸುಮಾರು 40 ಮಂದಿ ಸ್ವಿಗ್ಗಿ ಡೆಲಿವರಿ ಯುವಕರು ಹಾಗೂ ಇತರೆ ಸ್ನೇಹಿತರನ್ನು ಮತ್ತೆ ಎಂಪೈರ್‌ ಹೋಟೆಲ್‌ ಬಳಿ ಕರೆದೊಯ್ದು ಕಲ್ಲು ತೂರಾಟ ನಡೆಸಿದ್ದಾನೆ.

ಪರಿಣಾಮ ಎಂಪೈರ್‌ ಹೋಟೆಲ್‌ನ ಮುಂಭಾಗದ ಗಾಜು ಸಂಪೂರ್ಣ ಹಾನಿಯಾಗಿದ್ದು, ಅದೃಷ್ಟವಶಾತ್‌ ಎಂಪೈರ್‌ ಹೋಟೆಲ್‌ನಲ್ಲಿದ್ದ ಗ್ರಾಹಕರು, ಸಿಬ್ಬಂದಿಗೆ ಯಾವುದೇ ಗಾಯಗಳಾಗಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ 21 ಮಂದಿ ಸ್ವಿಗ್ಗಿ ಡೆಲಿವರಿ ಯುವಕರು ಮತ್ತು ಎಂಪೈರ್‌ ಹೋಟೆಲ್‌ನ 7 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮೈಕೋಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.