ವೃದ್ಧೆಯ ಕತ್ತು ಸೀಳಿ ಕೊಲೆ
Team Udayavani, Aug 12, 2018, 12:11 PM IST
ಬೆಂಗಳೂರು: ಮೈಸೂರು ರಸ್ತೆಯಲ್ಲಿನ ದುಬಾಸಿಪಾಳ್ಯದ ಬಳಿಯ ತೋಟದ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆಯನ್ನು ದುಷðರ್ಮಿಗಳು ಕತ್ತು ಕೊಯ್ದು ಕೊಲೆಗೈದಿದ್ದಾರೆ. ಗೌರಮ್ಮ (65) ಕೊಲೆಯಾದ ವೃದ್ಧೆ.
ಚಿಕ್ಕಪೇಟೆಯ ದೇವರಾಜ್ ಎಂಬುವರಿಗೆ ಸೇರಿದ ತೋಟದಲ್ಲಿ ವಾಸವಿದ್ದ ಗೌರಮ್ಮ, ಜೀವನ ನಿರ್ವಹಣೆಗಾಗಿ ಹಸು ಸಾಕಣೆ ಮಾಡುತ್ತಿದ್ದರು. ತೋಟದ ಮಾಲೀಕ ದೇವರಾಜ್ ಮಾಸಿಕ ಮೂರು ಸಾವಿರ ರೂ. ಕೊಡುತ್ತಿದ್ದರು. ಅಲ್ಲದೆ, ಗೌರಮ್ಮರ ಪತಿಯ ಎರಡನೇ ಪತ್ನಿಯ ಮಕ್ಕಳು ಬನಶಂಕರಿಯಲ್ಲಿ ವಾಸವಿದ್ದು, ಆಗಾಗ ಬಂದು ಆಹಾರ ಪದಾರ್ಥ, ಹಣ್ಣು ಕೊಟ್ಟು ಆರೋಗ್ಯ ವಿಚಾರಿಸಿಕೊಂಡು ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಹಸು ನಿರಂತರವಾಗಿ ಕೂಗಿಕೊಳ್ಳುತ್ತಿತ್ತು. ಆದರೂ ಗೌರಮ್ಮ ಮನೆಯಿಂದ ಹೊರಬಂದಿಲ್ಲ. ಇದರಿಂದ ಅನುಮಾನಗೊಂಡ ಪಕ್ಕದ ಕಟ್ಟಡದ ಭದ್ರತಾ ಸಿಬ್ಬಂದಿ, ಗೌರಮ್ಮ ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಬನಶಂಕರಿಯಲ್ಲಿರುವ ಸಂಬಂಧಿಕರು ಬಂದು ಕಿಟಕಿ ಮೂಲಕ ಪರಿಶೀಲಿಸಿದಾಗ ಗೌರಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.
ತಕ್ಷಣ ಕೆಂಗೇರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಜ್ಜಿಯನ್ನು ಕೊಂದ ದುಷ್ಕರ್ಮಿಗಳು ಬಳಿಕ ಮನೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ. ಗೌರಮ್ಮ ಮೈ ಮೇಲೆ ಇದ್ದ ಯಾವುದೇ ಆಭರಣ ಕಳುವಾಗಿಲ್ಲ. ಹೀಗಾಗಿ ಪರಿಚಿತರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ