ಟೋಲ್‌ ಮುಕ್ತಿಗೆ ಮುಷ್ಕರ ಆರಂಭ


Team Udayavani, Jul 21, 2018, 10:57 AM IST

blore-6.jpg

ಬೆಂಗಳೂರು: ಟೋಲ್‌ನಿಂದ ಮುಕ್ತಿ, ಡೀಸೆಲ್‌ ದರ ಇಳಿಕೆ ಮತ್ತಿತರ ಬೇಡಿಕೆ ಈಡೇರಿಕೆಗೆ ಅಖೀಲ ಭಾರತ ಮೋಟಾರು ಟ್ರಾನ್ಸ್‌ಪೊರ್ಟ್‌ ಕಾಂಗ್ರೆಸ್‌ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸರಕು, ಸಾಗಣೆ ವಾಹನಗಳ ಸಂಚಾರದಲ್ಲಿ ತುಸು ಏರುಪೇರು ಉಂಟಾಗಿದೆ.

ಇನ್ನೊಂದೆಡೆ ಪ್ರವಾಸಿ ವಾಹನ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌ ಮಾಲಿಕರು ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಿಲ್ಲ. ರಾಜ್ಯ ಲಾರಿ ಮಾಲಿಕರ ಸಂಘ, ರಾಜ್ಯ ಪೆಟ್ರೋಲಿಯಂ ವರ್ತಕರ ಮಹಾ ಮಂಡಳವು ಹೋರಾಟಕ್ಕೆ ಬೆಂಬಲ ನೀಡದ ಕಾರಣ ಸರಕು ಸಾಗಣೆಯಲ್ಲಿ ಹೆಚ್ಚಿನ ವ್ಯತ್ಯಯ ಉಂಟಾಗಿಲ್ಲ. ಹಾಲು, ದಿನಪತ್ರಿಕೆ, ತರಕಾರಿ, ಔಷಧ ಇತರೆ ಅಗತ್ಯ ಸರಕು, ಸೇವೆಗಳ ಪೂರೈಕೆಗೆ ಮುಷ್ಕರದಿಂದ ವಿನಾಯ್ತಿ ನೀಡಲಾಗಿದೆ. ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದ ಸರಕು ಸಾಗಣೆ ದಾರರು ಪುರಭವನದ ಎದುರು ಶುಕ್ರವಾರ ಪ್ರತಿಭ ಟಿಸಿದರು. ಲಾರಿ, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ ಮಾಲಿಕರು ಕೂಡ ಮುಷ್ಕರ ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಅಖೀಲ ಭಾರತ ಮೋಟಾರು ಟ್ರಾನ್ಸ್‌ಪೊರ್ಟ್‌ ಕಾಂಗ್ರೆಸ್‌ನ ದಕ್ಷಿಣ ವಲಯದ ಪ್ರಧಾನ ಕಾರ್ಯದರ್ಶಿ ಜಿ.ಆರ್‌.ಷಣ್ಮುಖಪ್ಪ, ಅವಧಿ ಮುಗಿದಿದ್ದರೂ ಟೋಲ್‌ಗೇಟ್‌ಗಳಲ್ಲಿ ಸುಂಕ ಸಂಗ್ರಹಿಸಲಾಗುತ್ತಿದೆ. ರಾಜ್ಯದಲ್ಲಿ 29 ಟೋಲ್‌ಗೇಟ್‌ಗಳಿದ್ದು, 23 ಟೋಲ್‌ಗ‌ಳಲ್ಲಿ ಅವಧಿ ಪೂರ್ಣಗೊಂಡಿದ್ದರೂ ಗುತ್ತಿಗೆ ಸಂಸ್ಥೆಗಳಿಗೆ ಟೋಲ್‌ ಸಂಗ್ರಹಕ್ಕೆ ಅವಕಾಶ ನೀಡಲಾಗಿದೆ. ಇದರಿಂದ ಲಾರಿ ಮಾಲಿಕರು, ಸರಕು ಸಾಗಣೆದಾರರು ಹೊರೆ ಅನುಭವಿಸುವಂತಾಗಿದೆ ಎಂದರು.

ಕಾಲಾವಕಾಶ ಕೋರಲಾಗಿದೆ: ಸರಕು ಸಾಗಣೆದಾರರ ಹೋರಾಟಕ್ಕೆ ಪ್ರವಾಸಿ ವಾಹನಗಳ ಮಾಲಿಕರ ವತಿಯಿಂದ ನೈತಿಕ ಬೆಂಬಲ ನೀಡಲಾಗಿದೆ. ವಾಹನಗಳನ್ನು ಸ್ಥಗಿತಗೊಳಿಸಿ ಹೋ ರಾಟ ತೀವ್ರಗೊಳಿಸಲು ಕೆಲ ದಿನಗಳ ಕಾಲಾವಕಾಶ ಕೋರಲಾಗಿದೆ. ಬೇಡಿಕೆಗೆ ಸ್ಪಂದಿಸದಿದ್ದರೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದುಎಂದು ಬೆಂಗಳೂರು ಪ್ರವಾಸಿ ವಾಹನಗಳ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಹೇಳಿದರು.

ಬೆಂಬಲವಿಲ್ಲ; ಈ ಹಿಂದೆ ಇದೇ ಬೇಡಿಕೆಗಳ ಈಡೇರಿಕೆಗಾಗಿ ಸಂಘ ಮುಷ್ಕರಕ್ಕೆ ಕರೆ ನೀಡಿದಾಗ ಈ ಸಂಘಟನೆಗಳು ಬೆಂಬಲ ನೀಡಿರಲಿಲ್ಲ. ಅಲ್ಲದೇ ಪ್ರತಿಷ್ಠಿತ ಸರಕು ಸಾಗಣೆದಾರರ ಅನುಕೂಲಕ್ಕಾಗಿ ಹೋರಾಟ ಆರಂಭಿಸಿದಂತಿದ್ದು, ಇದರಿಂದ ಸಣ್ಣ ಪುಟ್ಟ ಲಾರಿ ಮಾಲಿಕರಿಗೆ ಹೆಚ್ಚಿನ ಪ್ರಯೋಜನವಾಗದು. ಹಾಗಾಗಿ ಸಂಘದ ವ್ಯಾಪ್ತಿಯ ವಾಹನಗಳು ಎಂದಿ ನಂತೆ ಸಂಚರಿಸಲಿವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಬಿ.ಚೆನ್ನಾರೆಡ್ಡಿ ತಿಳಿಸಿದರು.

ಪೆಟ್ರೋಲ್‌, ಡೀಸೆಲ್‌ ಪೂರೈಕೆ ಇರಲಿದೆ ಮುಷ್ಕರಕ್ಕೆ ಪೆಟ್ರೋಲಿಯಂ ವರ್ತಕರ ಬೆಂಬಲವನ್ನು ಯಾವ ಸಂಘಟನೆಯೂ ಕೋರಿಲ್ಲ. ಜನರಿಗೆ ಅಗತ್ಯವಾದ ವಸ್ತುವಾಗಿ ರು ವುದರಿಂದ ದಿಢೀರ್‌ ಸ್ಥಗಿತಗೊಳಿಸಲು ಸಾಧ್ಯ ವಿಲ್ಲ. ತೈಲ ಕಂಪೆನಿಗಳು ಹೆಚ್ಚಿನ ಪ್ರಮಾಣದಲ್ಲಿ ತೈಲ ದಾಸ್ತಾನು ಮಾಡಿಕೊ ಳ್ಳುವಂತೆ ಸೂಚಿ ಸಿವೆ. ಎಂದಿನಂತೆ ಪೆಟ್ರೋಲ್‌, ಡೀಸೆಲ್‌ ಪೂರೈಕೆ ಇರಲಿದೆ ಎಂದು ರಾಜ್ಯ ಪೆಟ್ರೋ ಲಿಯಂ ವರ್ತಕರ ಮಹಾಮಂಡಳದ ಅಧ್ಯಕ್ಷ ಎಚ್‌.ಎಸ್‌.ಮಂಜಪ್ಪ ಹೇಳಿದರು.

ಆಹಾರಧಾನ್ಯ ಪೂರೈಕೆ ಸಹಜ: ಬೆಂಗಳೂರಿನ ಎಪಿಎಂಸಿ ಮಾರುಕಟ್ಟೆಗೆ ನಿತ್ಯ 700ಕ್ಕೂ ಹೆಚ್ಚು ಲಾರಿಗಳಲ್ಲಿ ಆಹಾರಧಾನ್ಯ ಪೂರೈಕೆಯಾಗುತ್ತದೆ. ಅದರಂತೆ ಶುಕ್ರವಾರವೂ ಪೂರೈಕೆ ಸಹಜ ಸ್ಥಿತಿಯಲ್ಲಿತ್ತು. ಜತೆಗೆ ಮಾರುಕಟ್ಟೆಯಿಂದ ಇತರೆಡೆಗೆ ಆಹಾರ ಧಾನ್ಯ ಸಾಗಣೆಯಾಗುತ್ತಿದೆ. ಮುಷ್ಕರ ತೀವ್ರವಾದರೆ ಸೋಮವಾರದಿಂದ ಆಹಾರ ಧಾನ್ಯ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂದು ಬೆಂಗಳೂರು ಬೇಳೆಕಾಳು ವರ್ತಕರ ಸಂಘದ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.