ಸಿಕ್ಕಿಬಿದ್ದ ಮ್ಯಾಟ್ರಿಮೋನಿ ವಂಚಕ 


Team Udayavani, Jun 28, 2017, 11:41 AM IST

matrimony-arrest.jpg

ಬೆಂಗಳೂರು: ಸಾಮಾಜಿಕ ಜಾಲತಾಣ, ವಿವಾಹ ಸಂಬಂಧಿತ ವೆಬ್‌ಸೈಟ್‌ಗಳ ಮೂಲಕ ನೂರಾರು ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಅವರನ್ನು ಲೈಂಗಿಕವಾಗಿ ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣವನ್ನೂ ಪಡೆದು ವಂಚಿಸಿರುವ ಪ್ರಕಣವೊಂದು ಬಯಲಿಗೆ ಬಂದಿದ್ದು, ಸದ್ಯ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಹಾಸನ ಮೂಲದ ಸಾದತ್‌ಖಾನ್‌ (28) ಅಲಿಯಾಸ್‌ ಪ್ರೀತಮ್‌ ಕುಮಾರ್‌ ಬಂಧಿತ. ಹಲವು ಹೆಸರುಗಳಲ್ಲಿ ವೈಬ್‌ಸೈಟ್‌ಗಳಲ್ಲಿ ಯುವತಿಯರನ್ನು ಉದ್ಯಮಿ ಎಂದು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ, ಅವರನ್ನು ವಿವಾಹವಾಗುವುದಾಗಿ ಪೋಷಕರನ್ನೂ ಯಾಮಾರಿಸಿ ವಂಚಿಸುತ್ತಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದು ಬಂದಿದೆ.

ಸಾದತ್‌ ಖಾನ್‌ ಆಟೋ ಚಾಲಕ. ಮದ್ಯದ ದಾಸನಾಗಿರುವ ಈತನನ್ನು ಪೋಷಕರೇ ಮನೆಯಿಂದ ಹೊರಹಾಕಿದ್ದಾರೆ ಎನ್ನಲಾಗಿದೆ. ಅಲ್ಲಿಂದ ಬೆಂಗಳೂರಿಗೆ ಬಂದು ಅಲ್ಲಲ್ಲಿ ಕೆಲಸ ಮಾಡಿಕೊಂಡಿದ್ದ. ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ಗಳಲ್ಲಿ ಹತ್ತಾರು ಹೆಸರುಗಳಲ್ಲಿ ನೋಂದಣಿ ಮಾಡಿಕೊಂಡಿರುವ ಸಾದತ್‌ ಖಾನ್‌, ಸರ್ಕಾರಿ ಉದ್ಯೋಗಿ, ದೊಡ್ಡ ಉದ್ಯಮಿ ಎಂದೆಲ್ಲ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ.

ನಂತರ ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಜತಗೆ ಆ ಯುವತಿಯರ ಪೋಷಕರಿಗೆ ಸುಳ್ಳು ನೆಪಗಳನ್ನು ಹೇಳಿ ಹಣ ಪಡೆದು ಐಷಾರಾಮಿ ಜೀವನ ನಡೆಸುತ್ತಿದ್ದ. ಹೀಗೆ ಸುಮಾರು ನೂರಕ್ಕೂ ಅಧಿಕ ಮಂದಿಗೆ ಸಾದತ್‌ ಖಾನ್‌ ವಂಚಿಸಿದ್ದಾನೆ. ಆದರೆ, ಬೆರಳೆಣಿಕೆಯಷ್ಟು ಮಂದಿ ಮಾತ್ರ ದೂರು ನೀಡಿದ್ದಾರೆ ಎಂದು ಈಶಾನ್ಯ ವಿಭಾಗ ಡಿಸಿಪಿ ಡಾ ಪಿ.ಎಸ್‌.ಹರ್ಷಾ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2011ರಲ್ಲಿ ನಗರಕ್ಕೆ ಬಂದ ಈತ ಯಶವಂತಪುರದಲ್ಲಿ ಷರೀಫ್ ಎಂಬುವರ ಬಳಿ ವೆಲ್ಡಿಂಗ್‌ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ನಂತರ ಕೋರಮಂಗಲದಲ್ಲಿರುವ ಕಂಟ್ರಿಕ್ಲಬ್‌ನಲ್ಲಿ ಟೆಲಿಕಾಲರ್‌ ಆಗಿದ್ದ. ಇಲ್ಲಿ ಯುವತಿಯರಿಗೆ ವಂಚಿಸಿದ ಆರೋಪದ ಮೇಲೆ ಕೆಲಸದಿಂದ ವಜಾಗೊಂಡಿದ್ದ. 

ಎಲ್ಲೆಡೆ ಕೆಲಸ ಕಳೆದುಕೊಂಡ ಸಾದತ್‌ಖಾನ್‌ ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ಮ್ಯಾಟ್ರಿಮೋನಿಯಲ್ ವೆಬ್ಸೈಟ್‌ಗಳಲ್ಲಿ ರಾಹುಲ್, ರಾಜ್‌ಕುಮಾರ್‌, ಕಾರ್ತಿಕ್‌, ಮಹಮ್ಮದ್‌ಖಾನ್‌, ಪ್ರೀತಮ್‌ಕುಮಾರ್‌, ಸಾದತ್‌ಖಾನ್‌ ಎಂಬ ಹೆಸರುಗಳ ಖಾತೆಗಳನ್ನು ತೆರೆದುಕೊಂಡು, ವಿವಿಧ ರೀತಿಯ  ಫೋಟೋಗಳನ್ನು ಅಪ್‌ಲೋಡ್‌ ಮಾಡಿ ಯುವತಿಯರನ್ನು ಪರಿಚಯಿಸಿಕೊಳ್ಳುತ್ತಿದ್ದ. 

ತನ್ನ ಸ್ಟೇಟಸ್‌ಗಳಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌, ಸರ್ಕಾರಿ ನೌಕರ, ಖಾಸಗಿ ಕಂಪೆನಿಗಳ ಮಾಲೀಕ ಎಂದು ಬರೆದುಕೊಳ್ಳುತ್ತಿದ್ದ. ಪ್ರತಿ ಖಾತೆಯಲ್ಲಿಯೂ ವಿಭಿನ್ನವಾಗಿ ಬರೆದುಕೊಂಡು, ಯುವತಿಯರನ್ನು ಪರಿಚಯಿಸಿಕೊಳ್ಳುತ್ತಿದ್ದ. ಇದನ್ನು ನಂಬುತ್ತಿದ್ದ ಯುವತಿಯರ ಜತೆ ಚಾಟಿಂಗ್‌ ಮಾಡಿಕೊಂಡು ಅವರನ್ನು ಐಷಾರಾಮಿ ಹೋಟೆಲ್‌ಗ‌ಳಿಗೆ ಕರೆಸಿಕೊಂಡು ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಬಳಿಕ ಅವರ ಮನೆಯವರ ವಿಶ್ವಾಸ ಸಂಪಾದಿಸಿ ಸುಳ್ಳು ನೆಪಗಳನ್ನು ಹೇಳಿಕೊಂಡು ಹಣ ವಸೂಲಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ಒಬ್ಬರ ಹಣ ಮತ್ತೂಬ್ಬರಿಗೆ: ಒಬ್ಬ ಯುವತಿಗೆ ವಂಚಿಸಿ ವಸೂಲಿ ಮಾಡಿದ ಹಣವನ್ನು ಮತ್ತೂಬ್ಬ ಯುವತಿಯನ್ನು ಬಲೆಗೆ ಬೀಳಿಸಿಕೊಳ್ಳಲು ಬಳಸುತ್ತಿದ್ದ. ಇದಕ್ಕಾಗಿ ಐಷಾರಾಮಿ ಕಾರುಗಳನ್ನು ಬಾಡಿಗೆಗೆ ಪಡೆದು ಇವುಗಳಲ್ಲಿಯೇ ಹೋಟೆಲ್‌ಗ‌ಳು, ಶಾಪಿಂಗ್‌ ಮಾಲ್‌ಗ‌ಳಿಗೆ ಕರೆದೊಯ್ಯುತ್ತಿದ್ದ. ಒಂದು ವೇಳೆ ಯುವತಿಯ ಹಿನ್ನೆಲೆ ಶ್ರೀಮಂತವಾಗಿದ್ದರೆ ಅವರಿಂದ ಕನಿಷ್ಠ 2 ಲಕ್ಷ ರೂ.ವರೆಗೆ ವಸೂಲಿ ಮಾಡುತ್ತಿದ್ದ. ಇದೇ ಹಣದಿಂದ ಈತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೆಲೆಸುತ್ತಿದ್ದ. ಅಲ್ಲದೇ ಹೈದ್ರಾಬಾದ್‌ನಲ್ಲಿ ಶ್ರೀಮಂತ ಯುವತಿಯೊಬ್ಬರಿಂದ ಸುಮಾರು 3 ಲಕ್ಷ ರೂ. ವಸೂಲಿ ಮಾಡಿರುವ ಈತ.

ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ, ಅಲ್ಲಿಂದ ಪರಾರಿಯಾಗಿದ್ದಾನೆ. ಮೈಸೂರಿನ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಈತ, ಎರಡು ತಿಂಗಳ ಹಿಂದೆ ಬಾಗಲೂರಿನಲ್ಲಿ ನೆಲೆಸಿದ್ದ ಯುವತಿಗೆ ಮ್ಯಾಟ್ರಿಮೋನಿಯಲ್ನಲ್ಲಿ ಪ್ರೀತಮ್ಕುಮಾರ್‌ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡು ಮದುವೆಯಾಗುತ್ತೇನೆಂದು ಹೇಳಿ ಹಣ ಪಡೆದುಕೊಂಡು ವಂಚಿಸಿದ್ದ. ಈ ಬಗ್ಗೆ ದೂರು ದಾಖಲಾದ ಬಳಿಕ ಹಾಸನದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಈತನನ್ನು ಬಂಧಿಸಲಾಗಿದೆ. 

ಎಲ್ಲೆಲ್ಲಿ ಪ್ರಕರಣ ದಾಖಲಾಗಿದೆ?: ಈತನ ವಿರುದ್ಧ ತುಮಕೂರು, ಮೈಸೂರು, ಹುಬ್ಬಳ್ಳಿ-ಧಾರವಾಡ,  ಬೆಂಗಳೂರಿನ ಯಲಹಂಕ, ವಿದ್ಯಾರಣ್ಯಪುರ, ಕೆ.ಆರ್‌.ಪುರ, ಜಯನಗರ, ಹೆಬ್ಬಗೋಡಿ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಹೀಗೆ ಇದುವರೆಗೂ ಸುಮಾರು 45 ಲಕ್ಷ ರೂ. ಹಣ ವಸೂಲಿ ಮಾಡಿರುವುದು ಬೆಳಕಿಗೆ ಬಂದಿದೆ. 

ಉತ್ತಮ ಮಾತುಗಾರ: ಆರೋಪಿ ನಾಲ್ಕೈದು ಕಂಪೆನಿಗಳಲ್ಲಿ ಟಿಲಿಕಾಲರ್‌ ಆಗಿ ಕೆಲಸ ಮಾಡುತ್ತಿದ್ದರಿಂದ ಉತ್ತಮ ಮಾತುಗಾರನಾಗಿದ್ದ. ಈತ ಹಿಂದಿ, ಇಂಗ್ಲಿಷ್‌ ಮತ್ತು ಕನ್ನಡ ಭಾಷೆಯಲ್ಲಿ ಪರಿಣಿತ. ಇದನ್ನೆ ಬಂಡವಾಳ ಮಾಡಿಕೊಂಡು ಎಲ್ಲರನ್ನು ಯಾಮಾರಿಸಿದ್ದಾನೆ. ಅಲ್ಲದೇ ಫೋಟೋಶಾಪ್‌ ಮೂಲಕ ವಿದೇಶದಲ್ಲಿ ಐಷಾರಾಮಿ ಕಾರುಗಳ ಮಾಲೀಕನಂತೆ ನಿಂತಿರುವ ಫೋಟೋಗಳನ್ನು ಸೃಷ್ಟಿಸುತ್ತಿದ್ದ. 

ಸಾದತ್‌ ಖಾನ್‌ 70 ಯುವತಿಯರಿಗೆ ವಂಚಿಸಿದ್ದಾನೆ. ಅವರಿಂದ ಹಣ, ಚಿನ್ನಾಭರಣ ವಸೂಲಿ ಮಾಡಿದ್ದಾನೆ. ಆದರೆ, ಈ ವರೆಗೆ 8 ಪ್ರಕರಣ ಮಾತ್ರ ದಾಖಲಾಗಿದೆ. ಈತನಿಂದ ವಂಚನೆಗೊಳಗಾದ ಯುವತಿಯರು ದಯವಿಟ್ಟು ಠಾಣೆಗಳಲ್ಲಿ ದೂರು ನೀಡಿ. ಹೆಸರು ಗೌಪ್ಯವಾಗಿಡುತ್ತೇವೆ. ಈ ಮೂಲಕ ಮತ್ತೂಬ್ಬರಿಗೆ ಆಗುವ ವಂಚನೆಯನ್ನು ತಡೆಬಹುದು. ಇದಕ್ಕೆ ಸಹಕರಿಸಿ 
-ಹೇಮಂತ್‌ ನಿಂಬಾಳ್ಕರ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.