ಕೆಂಡದ ನಡಿಗೆ ಇಲ್ಲಿ ಮೌಢ್ಯ; ಅಮೆರಿಕದಲ್ಲಿ ಬಂಡವಾಳ!


Team Udayavani, Mar 17, 2019, 6:36 AM IST

kendadas.jpg

ಬೆಂಗಳೂರು: ನಮ್ಮದೇ ಪರಂಪರಾಗತ ಆಚರಣೆಯಾದ ಕೆಂಡದ ಮೇಲಿನ ನಡಿಗೆ ಇಂದು ನಮಗೆ ಮೂಢನಂಬಿಕೆಯಂತೆ ಕಾಣಿಸುತ್ತಿದೆ. ಆದರೆ, ಇದೇ ಆಚರಣೆಯನ್ನು ಬಂಡವಾಳ ಮಾಡಿಕೊಂಡು ಅಮೆರಿಕದಲ್ಲೊಬ್ಬ ಹಣ ಗಳಿಸುತ್ತಿದ್ದಾನೆ. ಜತೆಗೆ ಜಾಗೃತಿಯನ್ನೂ ಮೂಡಿಸುತ್ತಿದ್ದಾನೆ! 

ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್‌. ಕಿರಣ್‌ ಕುಮಾರ್‌ ಹೀಗೆ ಹೇಳಿ ಅಚ್ಚರಿ ಮೂಡಿಸಿದರು. ನಗರದ ನೆಹರು ತಾರಾಲಯದಲ್ಲಿ ಶನಿವಾರ ನವಕರ್ನಾಟಕ ಪ್ರಕಾಶನ ಹಾಗೂ ಬೆಂಗಳೂರು ಅಸೋಸಿಯೇಷನ್‌ ಫಾರ್‌ ಸೈನ್ಸ್‌ ಎಜುಕೇಷನ್‌ (ಬೇಸ್‌) ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಎಸ್‌. ಶೈಲಜಾ ಅವರ “ಆಕಾಶದಲ್ಲಿ ಏನಿದೆ? ಏಕಿದೆ?’ ಕೃತಿ ಲೋಕಾರ್ಪಣೆ ಮಾಡಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 

ಭಾರತೀಯ ಪರಂಪರೆಯಲ್ಲಿನ ಎಷ್ಟೋ ಆಚರಣೆಗಳಿಗೆ ವೈಜ್ಞಾನಿಕ ತಳಹದಿ ಇದೆ. ಉದಾಹರಣೆಗೆ ಕೆಂಡದ ಮೇಲಿನ ನಡಿಗೆಯ ಉದ್ದೇಶ ನಮ್ಮಲ್ಲಿರುವ ಭಯವನ್ನು ಹೋಗಲಾಡಿಸುವುದು. ಕೆಂಡದಲ್ಲಿ ಇಳಿಯುವ ಮುನ್ನ ಅದರೊಂದಿಗೆ ನಮ್ಮ ಚರ್ಮಎಷ್ಟುಹೊತ್ತು ಸಂಪರ್ಕದಲ್ಲಿರುತ್ತದೆ?

ಆ ಅವಧಿಯಲ್ಲಿ ಚರ್ಮಕ್ಕೆ ಯಾವುದೇ ಸಮಸ್ಯೆ ಆಗದಂತೆ ಮುಲಾಮು ಹಚ್ಚಿಕೊಳ್ಳುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕಾಗುತ್ತದೆ. ನಾವು ಇದನು ಮೂಢನಂಬಿಕೆ ಎನ್ನುತ್ತಿದ್ದೇವೆ. ಆದರೆ, ಅಮೆರಿಕದಲ್ಲಿ ಒಬ್ಬ ಇದೇ ಕೆಂಡದ ಮೇಲಿನ ನಡಿಗೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸುವುದರ ಜತೆಗೆ ಹಣ ಗಳಿಸುತ್ತಿದ್ದಾನೆ ಎಂದು ಹೇಳಿದರು. 

ಹಾಗಾಗಿ, ನಮ್ಮ ಪರಂಪರಾಗತ ಆಚರಣೆಗಳಿಗೂ ವೈಜ್ಞಾನಿಕ ತಳಹದಿ ಇದೆ. ಆದರೆ, ಅದನ್ನು ಸರಿಯಾಗಿ ಪ್ರತಿಪಾದಿಸದೆ ಇರುವುದರಿಂದ ಆ ಆಚರಣೆಗಳು ಮೂಢನಂಬಿಕೆಗೆ ಸೀಮಿತಗೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈ ಎಲ್ಲ ಆಚರಣೆಗಳನ್ನು ವೈಜ್ಞಾನಿಕವಾಗಿ ಒರೆಗೆ ಹಚ್ಚಿನೋಡುವ ಅವಶ್ಯಕತೆ ಇದೆ. ಅಲ್ಲದೆ, ಕನ್ನಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನದ ಬಗ್ಗೆ ಲೇಖನಗಳು, ಜರ್ನಲ್‌ಗ‌ಳು ಬರಬೇಕು. ಇದರಿಂದ ಸಮಾಜದಲ್ಲಿ ಹೆಚ್ಚು ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು. 

ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಖಗೋಳ ವಿಜ್ಞಾನಿ ಡಾ.ಪಾಲಹಳ್ಳಿ ವಿಶ್ವನಾಥ್‌, ನಕ್ಷತ್ರ ಹುಡುಕುವ ವಿಧಾನ ಇಂದು ಅಟೋಮೇಟೆಡ್‌ ಆಗಿಬಿಟ್ಟಿದೆ. ಇದು ನಮ್ಮ ಮೂಲಜ್ಞಾನವನ್ನು ಕಸಿದುಕೊಂಡಿದೆ. ವಿಚಿತ್ರವೆಂದರೆ, ಎಷ್ಟೋ ವಿದ್ಯಾರ್ಥಿಗಳಿಗೆ ರಾಹು-ಕೇತುಗಳ ಬಗ್ಗೆಯೂ ಜ್ಞಾನ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.  

ಡಾ.ಶೈಲಜಾ ಅವರ “ಆಕಾಶದಲ್ಲಿ ಏನಿದೆ? ಏಕಿದೆ?’ ಕೃತಿಯು ಜ್ಞಾನದ ಜತೆಗೆ ಅನುಭವವನ್ನು ನೀಡುತ್ತದೆ. ಪಠ್ಯಪುಸ್ತಕದ ರೀತಿಯಲ್ಲಿ ಇದನ್ನು ಅಧ್ಯಯನ ಮಾಡಬಹುದಾಗಿದೆ. ಗ್ರಹಣದ ಬಗ್ಗೆ ಈಗಲೂ ಮೌಡ್ಯದಲ್ಲಿದ್ದೇವೆ. ಅದರಿಂದ ಹೊರಬರಲು ಇಂತಹ ಪುಸ್ತಕಗಳು ನೆರವಾಗಲಿವೆ ಎಂದು ತಿಳಿಸಿದರು. ಪ್ರಕಾಶನದ ನಿರ್ದೇಶಕ ಎ.ರಮೇಶ ಉಡುಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.