ಬುಲೆಟ್ ಕದ್ದಿದ್ದ ಇಬ್ಬರು ಎಂಜಿನಿಯರ್ಗಳು: ಬಂಧನ
Team Udayavani, Aug 6, 2023, 12:04 PM IST
ಬೆಂಗಳೂರು: ಬುಲೆಟ್ಗಳನ್ನು ಕಳವು ಮಾಡು ತ್ತಿದ್ದ ಇಬ್ಬರು ಬಿಟೆಕ್ ಎಂಜಿನಿಯರ್ಗಳನ್ನು ಹನು ಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ನೆಲ್ಲೂರು ಮೂಲದ ಹೇಮಾದ್ರಿ (23) ಮತ್ತು ಪವನ್(23) ಬಂಧಿತರು. ಆರೋಪಿಗಳಿಂದ 3 ಲಕ್ಷ ರೂ. ಮೌಲ್ಯದ 2 ರಾಯಲ್ ಎನ್ಫೀಲ್ಡ್ ಬುಲೆಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಹನುಮಂತನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಮನೆ ಎದುರು ನಿಲುಗಡೆ ಮಾಡಿದ್ದ 2 ರಾಯಲ್ ಎನ್ಫೀಲ್ಡ್ ಬುಲೆಟ್ಗಳನ್ನು ಆರೋಪಿಗಳು ಕದ್ದಿದ್ದರು.
ಆಂಧ್ರಪ್ರದೇಶದಲ್ಲಿ ಬಿಟೆಕ್ ಪದವಿ ಪಡೆದಿದ್ದ ಆರೋಪಿಗಳು ಕೆಲಸಕ್ಕಾಗಿ ಹುಡುಕಾಡುತ್ತಿದ್ದರು. ಈ ಪೈಕಿ ಆರೋಪಿ ಹೇಮಾದ್ರಿ ಇತ್ತೀಚೆಗೆ ನಗರಕ್ಕೆ ಬಂದು ಉದ್ಯೋಗಕ್ಕಾಗಿ ಹುಡುಕಾಟ ನಡೆಸಿ, ಎಂಜಿನಿಯರಿಂಗ್ಗೆ ಸಂಬಂಧಿಸಿದ ಕೋರ್ಸ್ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಕೂಡ ಪಡೆಯುತ್ತಿದ್ದ. ಈ ಬಗ್ಗೆ ತನ್ನ ಸಹಪಾಠಿ ಪವನ್ಗೂ ವಿಚಾರ ತಿಳಿಸಿ ನಗರಕ್ಕೆ ಕರೆಸಿಕೊಂಡಿದ್ದಾನೆ. ಬಳಿ ಇಬ್ಬರು ಉದ್ಯೋಗಕ್ಕಾಗಿ ತಿಂಗಳುಗಟ್ಟಲೇ ಅಲೆದಿದ್ದಾರೆ. ಎಲ್ಲಿಯೂ ನೌಕರಿ ಸಿಗದ ಹಿನ್ನೆಲೆಯಲ್ಲಿ ಊರಿಗೆ ವಾಪಸ್ ಹೋಗಲು ನಿರ್ಧರಿಸಿದ್ದರು.
ಬುಲೆಟ್ ಕಳ್ಳತನ ಮಾಡಿ ಪರಾರಿ: ಊರಿಗೆ ಹೋಗುವ ಮುನ್ನ ನಗರದಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಕದಿಯಲು ಸಂಚು ರೂಪಿಸಿದ್ದರು. ಅದರಂತೆ ಹನುಮಂತನಗರ ಹಾಗೂ ಕೆಂಪೇಗೌಡ ನಗರದಲ್ಲಿ ಮನೆ ಎದುರು ನಿಲ್ಲಿಸಿದ್ದ 2 ಬುಲೆಟ್ಗಳನ್ನು ಕದ್ದು ಆಂಧ್ರಕ್ಕೆ ಪರಾರಿಯಾಗಿದ್ದರು. ಘಟನಾ ಸ್ಥಳದ ಸಿಸಿ ಕ್ಯಾಮೆರಾ, ಮೊಬೈಲ್ಕರೆಗಳ ಆಧಾರದ ಮೇಲೆ ಆಂಧ್ರಪ್ರದೇಶದ ನೆಲ್ಲೂರು ಬಳಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು