ನಿಷೇಧಿತ ಪ್ಲಾಸ್ಟಿಕ್ ಬಳಕೆ 86 ಲಕ್ಷ ರೂ. ದಂಡ ಸಂಗ್ರಹ
Team Udayavani, Sep 11, 2019, 3:07 AM IST
ಬೆಂಗಳೂರು: ಬಿಬಿಎಂಪಿ ಪ್ಲಾಸ್ಟಿಕ್ ವಶಕ್ಕೆ ಪಡೆಯುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು ಕಳೆದ ಆರು ತಿಂಗಳಲ್ಲಿ ನಗರದ ವಿವಿಧೆಡೆ ದಾಳಿ ನಡೆಸಿ 32 ಸಾವಿರ ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದು, 86 ಲಕ್ಷ ರೂ. ದಂಡ ವಿಧಿಸಿದ್ದಾರೆ. 2016ರರಿಂದ ರಾಜ್ಯ ಸರ್ಕಾರವು ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ.
ಇದರ ಹೊರತಾಗಿಯೂ ನಗರದ ಹಲವು ಭಾಗಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿರಂತರವಾಗಿದ್ದು, ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನಿಷೇಧಿತ ಪ್ಲಾಸ್ಟಿಕ್ ಬಳಸುವ ಹಾಗೂ ಮಾರಾಟ ಮಾಡುವವರ ಮೇಲೆ ಮೇಲೆ ದಾಳಿ ನಡೆಸಲಾಗಿತ್ತು. ಹೀಗಾಗಿ, ಪ್ರಸಕ್ತ ವರ್ಷದಲ್ಲಿ 32,118 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಿಬಿಎಂಪಿ ಆರೋಗ್ಯಅಧಿಕಾರಿಗಳು ಕಳೆದ ಏಪ್ರಿಲ್ನಿಂದ ಆಗಸ್ಟ್ ಅಂತ್ಯದ ವರೆಗೆ 86,78,580 ರೂ. ದಂಡ ವಿಧಿಸಲಾಗಿದೆಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
4ವರ್ಷದಲ್ಲಿ 3.45 ಕೋಟಿ ರೂ ದಂಡ: ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಎಂಟು ವಲಯದಲ್ಲಿ ದಾಳಿ ನಡೆಸಿ ಈವರೆಗೆ 2.64 ಲಕ್ಷ ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ವಶಕ್ಕೆ ಪಡೆದುಕೊಂಡು ವ್ಯಾಪಾರಿಗಳಿಗೆ 3.45 ಕೋಟಿ ರೂ. ದಂಡ ವಿಧಿಸಿದ್ದಾರೆ. 2015-16ನೇ ಸಾಲಿನಲ್ಲಿ 16 ಸಾವಿರ ಕೆ,ಜಿ ಪ್ಲಾಸ್ಟಿಕ್ ವಶ, 29.03 ಲಕ್ಷ ರೂ. ದಂಡ.
2016-17ರಲ್ಲಿ 54 ಸಾವಿರ ಕೆ.ಜಿ ಪ್ಲಾಸ್ಟಿಕ್ ವಶ,1 ಕೋಟಿ ರೂ. ದಂಡ ವಸೂಲಿ. 2017-18ರಲ್ಲಿ 40 ಸಾವಿರ ಕೆ.ಜಿ. ಪ್ಲಾಸ್ಟಿಕ್ ವಶ, 55.93 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. 2018-19ರಲ್ಲಿ 1.12 ಲಕ್ಷ ಕೆ.ಜಿ. ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದು, 73.90 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇಯರ್ ಜೊತೆ ವಿದ್ಯಾರ್ಥಿಗಳ ಸಂವಾದ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೆ.16 ರಂದು ನಗರದಲ್ಲಿ “ಪ್ಲಾಸ್ಟಿಕ್ ಬಳಕೆ ನಿಷೇಧ’ ಕುರಿತಂತೆ ಮೇಯರ್ ಜೊತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10.30ಕ್ಕೆ ಕಂದಾಯ ಭವನದ 3ನೇ ಮಹಡಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಏಪ್ರಿಲ್- ಆಗಸ್ಟ್ ವರೆಗೆ ಜಪ್ತಿಯಾದ ಪ್ಲಾಸ್ಟಿಕ್, ದಂಡ
ವಲಯ ಪ್ಲಾಸ್ಟಿಕ್ ಜಪ್ತಿ(ಕೆ.ಜಿ.) ದಂಡ (ರೂ.)
ಪಶ್ವಿಮ 2,877 17,47,300
ಉತ್ತರ 1,375 10,21,700
ದಕ್ಷಿಣ 4,174 11,59,650
ಬೊಮ್ಮನಹಳ್ಳಿ 3,403 16,40,800
ದಾಸರಹಳ್ಳಿ 3,135 4,58,400
ಆರ್.ಆರ್.ನಗರ 6,941 3,73,600
ಯಲಹಂಕ 3,841 6,00,230
ಮಹದೇವಪುರ 6,372 16,76,900
ಒಟ್ಟು 32,118 86,78,580
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!