ಪ್ರೇಯಸಿ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ
Team Udayavani, Oct 28, 2018, 11:35 AM IST
ಬೆಂಗಳೂರು: ಎಂಟು ವರ್ಷಗಳ ಹಿಂದೆ ಹೈಕೋರ್ಟ್ ಆವರಣದಲ್ಲೇ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಆರೋಪಿಗೆ 62ನೇ ಸಿಸಿಎಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಢ ವಿಧಿಸಿ ಆದೇಶಿಸಿದೆ.
ವಕೀಲ ರಾಜಪ್ಪ ಶಿಕ್ಷೆಗೆ ಒಳಗಾದವ ಆರೋಪಿ. ತಾನು ಪ್ರೀತಿಸಿದ ಯುವತಿ ಬೇರೆ ಯಾರಿಗೂ ಸಿಗಬಾರದು ಎಂಬ ಉದ್ದೇಶದಿಂದ ಆಯೋಪಿಯು, 2010ರ ಜುಲೈ 8ರಂದು ಮಧ್ಯಾಹ್ನ ಹೈಕೋರ್ಟ್ ಆವರಣದಲ್ಲೇ ನ್ಯಾಯವಾದಿ ನವೀನಾ ಎಂಬುವವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಜಪ್ಪನನ್ನು ಬಂಧಿಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ 62ನೇ ಸಿಸಿಎಚ್ ನ್ಯಾಯಾಲಯ, ಆರೋಪಿಗೆ ಕೊಲೆ ಪ್ರಕರಣದಲ್ಲಿ ಅಜೀವ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ಸಾಧ್ಯವಾಗದಿದ್ದಲ್ಲಿ 3 ತಿಂಗಳ ಸೆರೆವಾಸ ಅನುಭವಿಸಬೇಕು. ಆತ್ಮಹತ್ಯೆಗೆ ಯತ್ನಿಸಿದ ಆರೋಪದಲ್ಲಿ 500 ರೂ. ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸಲು ವಿಫಲನಾದಲ್ಲಿ 10 ದಿನಗಳ ಸಾಮಾನ್ಯ ಕಾರಾಗೃಹ ವಾಸ ಅನುಭವಿಸಬೇಕೆಂದು ಆದೇಶಿಸಿದೆ. ಇದೇ ವೇಳೆ 5 ಸಾವಿರ ರೂ. ದಂಡ ಮೊತ್ತವನ್ನು ಹತ್ಯೆಗೀಡಾದ ನವೀನಾರ ಪೋಷಕರಿಗೆ ಪರಿಹಾರವಾಗಿ ನೀಡಬೇಕು ಎಂದು ಸೂಚಿಸಿದೆ.
ಘಟನೆ ಏನು?: ಆರೋಪಿ ರಾಜಪ್ಪ ಹಾಗೂ ನವೀನಾ ಇಬ್ಬರು ವಕೀಲರಾಗಿದ್ದು, ಹಿರಿಯ ನ್ಯಾಯವಾದಿ ಒಬ್ಬರ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಮದುವೆಗೂ ನಿರ್ಧರಿಸಿದ್ದರು. ಈ ಮಧ್ಯೆ ನವೀನಾ, ಆಕೆಯ ಹಿರಿಯ ವಕೀಲರ ಜತೆ ಸಂಬಂಧ ಹೊಂದಿದ್ದಾರೆ ಎಂದು ಸಂದೇಹ ಪಟ್ಟು, ಆಕೆಯ ಜತೆ ರಾಜಪ್ಪ ಮನಸ್ತಾಪ ಮಾಡಿಕೊಂಡಿದ್ದ.
ಈ ಹಿನ್ನೆಲೆಯಲ್ಲಿ 2010 ಜುಲೈ 8ರಂದು ಮಧ್ಯಾಹ್ನ 1.45ರ ಸುಮಾರಿಗೆ ಹೈಕೋರ್ಟ್ನ 1ನೇ ಮಹಡಿಯ ಹಾಲ್ ಬಳಿ ಬಂದ ಆರೋಪಿ, ಹಿರಿಯ ವಕೀಲರ ಜತೆ ಆಕೆ ಅತಿ ಸಲುಗೆಯಿಂದ ಮಾತನಾಡುತ್ತಿದ್ದುದನ್ನು ತಪ್ಪಾಗಿ ಅರ್ಥೈಸಿಕೊಂಡು, ಆಕೆಗೆ ಚಾಕುವಿನಿಂದ ಇರಿದು ಕೊಲೆಗೈದಿದ್ದ. ಬಳಿಕ ಕೋರ್ಟ್ ಆವರಣದಲ್ಲಿರುವ ಶೌಚಾಲಯಕ್ಕೆ ಹೋಗಿ ವಿಷ ವಿಶ್ರಿತ ಮದ್ಯ ಸೇವಿಸಿದ್ದ. ಅಲ್ಲದೆ, ಚಾಕುವಿನಿಂದ ತನ್ನ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ