ಸ್ಕ್ಯಾನ್‌ ಮಾಡಿದ್ರೆ ವಿಡಿಯೋ ಬರುತ್ತೆ


Team Udayavani, Nov 30, 2018, 11:43 AM IST

scan-madi.jpg

ಬೆಂಗಳೂರು: ಪುಸ್ತಕದ ಮೇಲೆ ಮೊಬೈಲ್‌ ಇಟ್ಟರೆ, ಅದರಲ್ಲಿದ್ದ ಪಠ್ಯವನ್ನು ಯಥಾವತ್ತಾಗಿ ಆ ಮೊಬೈಲ್‌ ಓದಿ ಹೇಳುತ್ತದೆ. ಹೌದು, ತೆರೆದ ಪುಸ್ತಕದ ಮೇಲೆ ಮೊಬೈಲ್‌ ಸ್ಕ್ಯಾನ್‌ ಮಾಡಿದರೆ, ಕ್ಷಣಾರ್ಧದಲ್ಲಿ ಆ ಪಠ್ಯ ಡಿಜಿಟಲ್‌ ರೂಪ ಪಡೆದುಕೊಳ್ಳುತ್ತದೆ. ಅಷ್ಟೇ ಅಲ್ಲ, ಅದರಲ್ಲಿದ್ದುದನ್ನು ಯಥಾವತ್ತಾಗಿ ಓದುವ ಆಡಿಯೋ ಸಹಿತ ವಿಡಿಯೋ ಮೊಬೈಲ್‌ ಪರದೆ ಮೇಲೆ ಬರುತ್ತದೆ.

ಇದರಿಂದ ಏಕಕಾಲದಲ್ಲಿ ಹಲವಾರು ಜನ ಪರದೆ ಮೇಲೆ ವೀಕ್ಷಿಸಿ ಮಾಹಿತಿ ಪಡೆಯಬಹುದು. ಇಂತಹದ್ದೊಂದು ಮೊಬೈಲ್‌ ಆ್ಯಪ್‌ ಅನ್ನು ರೇನ್‌ಟ್ರೀ ಮೀಡಿಯಾ ಕಂಪೆನಿ ಅಭಿವೃದ್ಧಿಪಡಿಸಿದ್ದು, ಮುಂದಿನ ದಿನಗಳಲ್ಲಿ ಇದನ್ನು ಶಿಕ್ಷಣ ಕ್ಷೇತ್ರಕ್ಕೆ ಪರಿಚಯಿಸಲು ಚಿಂತನೆ ನಡೆಸಿದೆ.

ಆದರೆ, ಹೀಗೆ ಡಿಜಿಟಲೀಕರಣಗೊಳ್ಳಲು ಪೂರಕವಾದ ಪಠ್ಯವನ್ನು ಸಿದ್ಧಪಡಿಸಬೇಕಾಗುತ್ತದೆ. ಪ್ರಾಯೋಗಿಕವಾಗಿ ಸ್ವತಃ ರೇನ್‌ಟ್ರೀ ಮೀಡಿಯಾ “ಇನ್ನೋವೇಟ್‌ ಬೆಂಗಳೂರು’ ಕಾಫಿ ಟೇಬಲ್‌ ಪುಸ್ತಕವೊಂದನ್ನು ಹೊರತಂದಿದ್ದು, ಇದಕ್ಕಾಗಿ “Global Village AR’ ಎಂಬ ಆ್ಯಪ್‌ ಅನ್ನು ಅಭಿವೃದ್ಧಿಪಡಿಸಿದೆ.

ಈ ಆ್ಯಪ್‌ಗೆ ಸ್ಪಂದಿಸುವ ಪುಟಗಳನ್ನು ರೂಪಿಸಿದ್ದು, ಒಂದು ಮೂಲೆಯಲ್ಲಿ “ಎಆರ್‌’ ಸಂಕೇತ ಇದೆ. ಬೇಕಾದವರು ತಮ್ಮ ಸ್ಮಾರ್ಟ್‌ಫೋನ್‌ ಅಥವಾ ಐಒಎಸ್‌ನಲ್ಲಿ ಉಚಿತವಾಗಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು, ಪುಸ್ತಕದ ಮೇಲೆ ಸ್ಕ್ಯಾನ್‌ ಮಾಡುತ್ತಿದ್ದಂತೆ ವೀಡಿಯೊ ಪ್ಲೇ ಆಗುತ್ತದೆ.
 
ಬೆಂಗಳೂರು ಟೆಕ್‌ ಸಮಿಟ್‌ನಲ್ಲಿ ಗುರುವಾರ ಈ ಕಾಫಿ ಟೇಬಲ್‌ ಪುಸ್ತಕವನ್ನು ಹೊರತರಲಾಗಿದೆ. ಇದರ ಮುಖ್ಯ ಉದ್ದೇಶ ಏಕಕಾಲದಲ್ಲಿ ಹಲವು ಜನ ಪುಸ್ತಕದಲ್ಲಿನ ಮಾಹಿತಿಯನ್ನು ತಿಳಿಯಬಹುದು. ಇದನ್ನು ಶಿಕ್ಷಣದಲ್ಲೂ ಅಳವಡಿಸಬಹುದು. ಆದರೆ, ಎಲ್ಲ ವಿಷಯಗಳಿಗೆ ಕಷ್ಟಸಾಧ್ಯ. ಭೂಗೋಳಶಾಸ್ತ್ರ, ವಿಜ್ಞಾನ, ವೈದ್ಯಕೀಯದಂತಹ ವಿಷಯಗಳಿಗೆ ಪರಿಚಯಿಸಬಹುದು.

ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸುವ ಆಲೋಚನೆ ಇದೆ ಎಂದು ರೇನ್‌ಟ್ರೀ ಮೀಡಿಯಾ ಸಂಸ್ಥಾಪಕಿ ಸಂಧ್ಯಾ ಮೆಂಡೊನ್ಕ “ಉದಯವಾಣಿ’ಗೆ ತಿಳಿಸಿದರು. ಶಾಲಾ ಗ್ರಂಥಾಲಯಗಳಲ್ಲಿ ಒಂದೇ ಸೆಟ್‌ ಪುಸ್ತಕ ಇರುತ್ತದೆ. ಆದರೆ, ಹೀಗೆ ಡಿಜಿಟಲ್‌ಗೆ ಪರಿವರ್ತಿಸಿದರೆ ಆರಾಮಾಗಿ ಎಲ್ಲರೂ ಓದಬಹುದು.

ಮಕ್ಕಳಿಗೆ ಪುಸ್ತಕಗಳ ಹೊರೆ ಆಗುತ್ತಿದೆ ಎಂಬ ಮಾತು ಚರ್ಚೆಯಲ್ಲಿದೆ. ಆ ಹೊರೆ ತಗ್ಗಿಸಲು ಇದು ಅನುಕೂಲ ಆಗಲಿದೆ. ಹೇಗೆಂದರೆ, ಪುಸ್ತಕಗಳನ್ನು ಮಕ್ಕಳು ಮನೆಗೆ ತರಬೇಕಾಗಿಲ್ಲ. ಮೊಬೈಲ್‌ನಲ್ಲಿ ಸ್ಕ್ಯಾನ್‌ ಮಾಡಿದ್ದನ್ನು ರೆಕಾರ್ಡ್‌ ಮಾಡಿಕೊಂಡು, ಆಗಾಗ್ಗೆ ಕೇಳಿಸಿಕೊಂಡಿರಬಹುದು ಎಂದು ಸಂಧ್ಯಾ ಮೆಂಡೊನ್ಕ ಅಭಿಪ್ರಾಯ ವ್ಯಕ್ತಪಡಿಸಿದರು. 

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.