ಬಸವನಗುಡಿ ಪರಿಷೆಗೆ ಹಳ್ಳಿ ಕಂಪು


Team Udayavani, Dec 4, 2018, 11:59 AM IST

basavanagudi.jpg

ಬೆಂಗಳೂರು: ನಗರದ ಬಸವನಗುಡಿಯಲ್ಲಿ ಸೋಮವಾರ ಹಳ್ಳಿಯ ಕಂಪು ಮನೆ ಮಾಡಿತ್ತು. ಎಲ್ಲೆಲೂ ಹಸಿ, ಹುರಿದ ಮತ್ತು ಬೇಯಿಸಿದ ಕಡಲೆ ಘಮಲು ನಾಸಿಕಕ್ಕೆ ರಾಚುತ್ತಿತ್ತು. ಸೂರ್ಯ ನತ್ತಿ ಮೇಲೆರುತ್ತಿದ್ದಂತೆ ರಸ್ತೆ ಬದಿಯಲ್ಲಿ ಆರಂಭವಾದ ಲೀಟರ್‌ ಮತ್ತು ಸೇರುಗಳಲ್ಲಿನ ಕಡಲೆ ವ್ಯಾಪಾರ ಥೇಟ್‌, ಗ್ರಾಮೀಣ ಸಂಸ್ಕೃತಿಯನ್ನು ನೆನಪಿಸಿತು.

ದೊಡ್ಡ ಬಸವಣ್ಣ ದೇವಸ್ಥಾನದ ಬಳಿ ಸೋಮವಾರದಿಂದ ಆರಂಭವಾಗಿರುವ ಎರಡು ದಿನಗಳ ಐತಿಹಾಸಿಕ ಕಡಲೆ ಪರಿಷೆಯಲ್ಲಿ ಹೆಗಲ ಮೇಲೆ ಹಸಿರು ಟವಲ್‌ ಹಾಕಿದ ರೈತರ ಕಡಲೆ ಮಾರಾಟ, ತಾಜಾ ಮಾಲ್‌, ಇಲ್ಲಿ ಸೇರ್‌ ಲೆಕ್ಕಾ.. ಎಂದು ಕೂಗಿ ಜನರನ್ನು ತನ್ನತ್ತ ಸೆಳೆಯುತ್ತಿದ್ದ ಮಹಿಳೆಯರ ಕಡಲೆ ವ್ಯಾಪಾರ ಕಾಂಕ್ರೀಟ್‌ ಕಾಡಿನೊಳಗೆ ಗ್ರಾಮೀಣ ಸೊಗಡನ್ನು ಕಣ್ಮುಂದೇ ತೆರೆದಿಟ್ಟಿತ್ತು.

ತಮಿಳುನಾಡು, ಆಂಧ್ರಪ್ರದೇಶ, ಚಿತ್ರದುರ್ಗ, ಕೋಲಾರ ಸೇರಿದಂತೆ ನಾನಾ ಕಡೆಗಳಿಂದ ರೈತರು ತಂದಿದ್ದ ಕಡಲೆ ಖರೀದಿಯಲ್ಲಿ ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳು ಉತ್ಸಾಹ ತೋರಿದರು. ಬೆಂಗಳೂರಿಗರಷ್ಟೇ ಅಲ್ಲ ಕನಕಪುರ, ಚಿಕ್ಕಬಳ್ಳಾಪರ, ದೊಡ್ಡಬಳ್ಳಾಪುರ, ರಾಮನಗರ, ತುಮಕೂರು ಮತ್ತು ಕೋಲಾರ ಸೇರಿದಂತೆ  ಸಿಲಿಕಾನ್‌ ಸಿಟಿಗೆ ಹತ್ತಿರ ಪ್ರದೇಶಗಳ ಕಡಲೆ ಕಾಯಿ ಪ್ರಿಯರು ಗುಂಪು, ಗುಂಪಾಗಿ ಆಗಮಿಸಿ ಕಡಲೆ ಖರೀದಿಯಲ್ಲಿ ತೊಡಗಿದರು. 

ಎರಡು ಸೇರಿಗೆ 50 ರೂ.: ಕೆಲವು ಕಡಲೆ ಪ್ರಿಯರು ಕಡಗಪ್ಪು ಬಣ್ಣದ ಕಡಲೆ ಕೊಳ್ಳುವಲ್ಲಿ ನಿರತವಾಗಿದ್ದು, ಕಂಡು ಬಂತು. ಕಡಲೆ ಕಾಯಿ ಗಾತ್ರ ಮತ್ತು ಪ್ರದೇಶವಾರು ತಳಿಯ ಲೆಕ್ಕಾಚಾರದಲ್ಲಿ ಮಾರಾಟ ಸಾಗಿತ್ತು. ಸೇರಿಗೆ 20, ಎರಡು ಸೇರಿಗೆ 50 ರೂ.ದಿಂದ ಆರಂಭವಾದ ವ್ಯಾಪಾರ, ಲೀಟರ್‌ ಗೆ 60 ರೂ.ವರೆಗೂ ನಡೆಯಿತು.

ಹಳ್ಳಿಯ ಜಾತ್ರೆ ಸೊಗಡನ್ನು ತೆರೆದಿಟ್ಟಿರುವ ಕಡಲೆಕಾಯಿ ಪರಿಷೆ ಬರೀ ಕಡಲೆ ವ್ಯಾಪಾರಕ್ಕೆ ಅಷ್ಟೇ ಸೀಮಿತವಾಗಿಲ್ಲ. ಮಕ್ಕಳ ಆಟದ ಸಾಮಾಗ್ರಿ, ಬಲೂನ್‌, ಹೆಂಗಳೆಯರ ಬಳೆ , ಬ್ಯಾಗ್‌ ವ್ಯಾಪರ ಕೂಡ ಭರ್ಜರಿಯಾಗಿ ನಡೆಯಿತು. ಸಂಜೆಯಾಗುತ್ತಿದ್ದಂತೆ ಮಕ್ಕಳು ಉಯ್ನಾಲೆ ಆಟದತ್ತ ಮುಖ ಮಾಡಿದರು. ಸಂಜೆ ವೇಳೆ ತೇಲಿ ಬಂದ ಸಂಗೀತ ಕಲಾ ಪ್ರಿಯರನ್ನು ರಂಜಿಸಿತು.

ಪ್ರವಾಸಿ ತಾಣ ಮಾಡುವ ಚಿಂತನೆ: ಬಸವಣ್ಣನ ಕಂಚಿನ ವಿಗ್ರಹಕ್ಕೆ ಕಡಲೆಕಾಯಿಂದ ತುಲಭಾರ ಮಾಡುವ ಮೂಲಕ ಪರಿಷೆಗೆ ಚಾಲನೆ ನೀಡಿದ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಇತಿಹಾಸ ಪ್ರಸಿದ್ಧ ದೊಡ್ಡ ಬಸವಣ್ಣ ದೇವಸ್ಥಾನವನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಚಿಂತನೆ ಪಾಲಿಕೆ ಮುಂದಿದೆ ಎಂದರು.

ಈ ಹಿಂದೆ ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್‌ ಅವರು, ಐತಿಹಾಸಿ ಕಡಲೆ ಕಾಯಿ ಪರಿಷೆಗೆ ಚಾಲನೆ ನೀಡುತ್ತಿದ್ದರು. ಆದರೆ ಅವರು ಈಗ ನಮ್ಮೊಂದಿಗೆ ಇಲ್ಲದಿರುವುದು ಬೇಸರ ಸಂಗತಿ. ಬೆಂಗಳೂರನ್ನು ಸ್ವತ್ಛವಾಗಿಡಲು ಬಿಬಿಎಂಪಿ ಪಣತೊಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ ಬಳಕೆಯನ್ನು ನಿಷೇಧಿಸಿದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬ್ಯಾಗ್‌ ಬಳಸಬೇಡಿ ಎಂದು ಜನರಲ್ಲಿ ಮನವಿ ಮಾಡಿದರು.

ಶಾಸಕ ರವಿ ಸುಬ್ರಮಣ್ಯ ಮಾತನಾಡಿ, ಅನಂತ್‌ ಕುಮಾರ್‌ ಕಡಲೆ ಪರಿಷೆಯನ್ನು ರಾಷ್ಟ್ರೀಯ ಉತ್ಸವನ್ನಾಗಿ ಮಾಡುವ ಕನಸು ಕಂಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಂತ ಕುಮಾರ್‌ ಅವರ ಕನಸನ್ನು ಈಡೇರಿಸಬೇಕು. ರಾಜ್ಯ ಸರ್ಕಾರ ಕೂಡ, ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ಮನವಿ ಪತ್ರ ಸಲ್ಲಿಸಬೇಕು. ಬಸವನಗುಡಿಯ ದೊಡ್ಡಗಣಪತಿ ದೇವಾಲಯ ವ್ಯಾಪ್ತಿಯಲ್ಲಿ ಹಲವು ಐತಿಹಾಸಿಕ ದೇವಾಲಯಗಳಿದ್ದು ಇವುಗಳನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದರು.

ತಂದೆ ಕೊಟ್ರು… ಮಗಳು ವಾಪಸ್‌ ಪಡೆದ್ರು!: ಕಡಲೆ ಪರಿಷೆ ಸೋಮವಾರ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧದ ಕುರಿತಂತೆ ಜನರಲ್ಲಿ ಅರಿವು ಮೂಡಿಸಲು ಬಂದಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪಾಲಿಥೇನ್‌ ಬ್ಯಾಗ್‌ ವಿತರಣೆ ಮಾಡಿ ತೆರಳಿದರು.

ಇದಾದ ಬಳಿಕ ಸ್ಥಳಕ್ಕೆ ಆಗಮಿಸಿದ ಶಾಸಕಿ ಸೌಮ್ಯಾರೆಡ್ಡಿ  ಈ ಬ್ಯಾಗ್‌ಗಳು ಪರಿಸರಕ್ಕೆ ಮಾರಾಕ ಎಂಬುವುದನ್ನು ತಿಳಿದು, ವಾಪಸ್‌ ಪಡೆದರು. ಬಳಿಕ ಹತ್ತು ಸಾವಿರ “ಪರಿಸರ ಸ್ನೇಹಿ’ ಬ್ಯಾಗ್‌ಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಪ್ಲಾಸ್ಟಿಕ್‌ ನಿಷೇಧ ಸಂಬಂಧ ಕೇಂದ್ರ ಸರ್ಕಾರ ರಾಷ್ಟ್ರೀಯ ನೀತಿ ರೂಪಿಸಬೇಕು ಎಂದರು.

ಇದೇ ಮೊದಲ ಬಾರಿ ಕಡಲೆಕಾಯಿ ಪರಿಷೆಗೆ ಬಂದಿದ್ದೇನೆ. ಇಲ್ಲಿ ಹಳ್ಳಿಯ ವಾತಾವರಣ ನಿರ್ಮಾಣವಾಗಿರುವುದ ಕಂಡು ನಿಜಕ್ಕೂ ಖುಷಿಯಾಗುತ್ತಿದೆ.
-ಗಗನ್‌ ಕುಮಾರ್‌, ನಂದಿನಿ ಲೇಔಟ್‌

ಪ್ರತಿ ವರ್ಷ ಬಸವನಗುಡಿಯ ಕಡಲೆಕಾಯಿ ಪರಿಷೆಗೆ ಭೇಟಿ ನೀಡುತ್ತಿದ್ದೇನೆ. ವರ್ಷದಿಂದ ವರ್ಷಕ್ಕೆ ಇಲ್ಲಿಗೆ ಬರುವ ಜನರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೇ ಇದೆ.
-ಪಾರಿಜಾತ, ಚಿಕ್ಕಬಳ್ಳಾಪುರ

ಕೆಲವು ದೇವಾಲಯಗಳಲ್ಲಿ ಹಿರಿಯರಿಗೆ ದರ್ಶನಕ್ಕೆ ಅನುಕೂಲವಾಗಲಿ ಎಂದು ವಿಶೇಷ ಕೌಂಟರ್‌ ತೆರೆದಿರುತ್ತಾರೆ. ಆದರೆ ಇಲ್ಲಿ ಅಂತಹ ವ್ಯವಸ್ಥೆ ಇಲ್ಲದಿರುವುದು ಬೇಸರದ ಸಂಗತಿ.
-ನಾಗರಾಜ್‌, ಜೆ.ಪಿ.ನಗರ ನಿವಾಸಿ

ಟಾಪ್ ನ್ಯೂಸ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.