ಹಳ್ಳಿ ಸೊಗಡು ನೆನಪಿಸಿದ ಸುಗ್ಗಿ ಸಂಭ್ರಮ


Team Udayavani, Jan 16, 2019, 6:26 AM IST

halli.jpg

ಬೆಂಗಳೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಹಳ್ಳಿ ಸೊಗಡು ಮೇಳೈಸಿತ್ತು. ದೇವಸ್ಥಾನಗಳಲ್ಲಿ ಭಕ್ತರ ದಂಡು, ವಿಶೇಷ ಪೂಜೆ, ಮನೆಗಳ ಮುಂದೆ ಚಿತ್ತಾರದ ರಂಗೋಲಿ “ಸುಗ್ಗಿ ಹಿಗ್ಗಿ’ಗೆ ಮತ್ತಷ್ಟು ಕಳೆ ತಂದಿತ್ತು. ಸಂಕ್ರಾಂತಿ ಶುಭಾಶಯ ಎಂಬ ಅಡಿ ಬರಹ, ಕಬ್ಬು ಎಳ್ಳು -ಬೆಲ್ಲಗಳ ವಿನಿಮಯದ ಸಂಭ್ರಮ ಜೋರಾಗಿತ್ತು.

ಪೊಂಗಲ್‌ನ ಘಮಲಿನ ನಡುವೆ ಹೊಸ, ಬಟ್ಟೆ ತೊಟ್ಟಿದ್ದ ಮಕ್ಕಳ ಖುಷಿಗೆ ಪಾರವೇ ಇಲ್ಲದಾಗಿತ್ತು. ಸಂಜೆ ಆಗುತ್ತಿದ್ದಂತೆ ನಾನಾ ಭಾಗಗಳಲ್ಲಿ ನಡೆದ ರಾಸುಗಳ ಮೆರವಣಿಗೆ ಸೇರಿದಂತೆ ಕಿಚ್ಚು ಹಾಯಿಸುವ ಕಾರ್ಯಕ್ರಮಗಳು ನಗರದ ಜನತೆಯನ್ನು ಹಳ್ಳಿಗಾಡಿನ ಸಂಸ್ಕೃತಿಗೆ ಕೊಂಡೊಯ್ದವು. ಇದೇ ವೇಳೆ ನಡೆದ ಮೊಸರು ಗಡಿಗೆ ಒಡೆಯುವ ಸ್ಪರ್ಧೆ ಸೇರಿದಂತೆ ಹಲವು ಆಟಗಳು ರಂಜಿಸಿದವು.

ದೇವಾಲಯಗಳಲ್ಲಿ ವಿಶೇಷ ಪೂಜೆ: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ದೇಗುಲ, ಮಲ್ಲೇಶ್ವರದ ಲಕ್ಷ್ಮಿ ನರಸಿಂಹ ದೇವಸ್ಥಾನ, ಬಸವನಗುಡಿಯ ದೊಡ್ಡ ಬಸವಣ್ಣ ದೇವಾಲಯ, ಕೆ.ಆರ್‌. ಮಾರುಕಟ್ಟೆಯ ಕೋಟೆ ಪ್ರಸನ್ನ ವೆಂಕಟರಮಣ ದೇವಸ್ಥಾನ, ಹಲಸೂರಿನ ಸೋಮೇಶ್ವರ ದೇವಸ್ಥಾನ, ಜೆಪಿ ನಗರದ ರಾಗಿಗುಡ್ಡ ಆಂಜನೇಯ ದೇವಸ್ಥಾನ, ಬನಶಂಕರಿಯ ದೇವಗಿರಿ ವೆಂಕಟೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದವು. 

ಬನಶಂಕರಿ, ಮಲ್ಲೇಶ್ವರ, ಜಯನಗರ, ಗಾಂಧಿಬಜಾರ್‌, ಕೆ.ಆರ್‌. ಮಾರುಕಟ್ಟೆಯಲ್ಲಿ ಬೆಳಗ್ಗೆ ಕಬ್ಬು, ಹೂವು- ಹಣ್ಣಿನ ವ್ಯಾಪಾರ ಭರ್ಜರಿಯಾಗಿತ್ತು. ಮತ್ತೂಂದು ಕಡೆ ನಾನಾ ಸಂಘ -ಸಂಸ್ಥೆಗಳ ಆಶ್ರಯದಲ್ಲಿ ಸಂಕ್ರಾಂತಿ ವಿಶೇಷವಾಗಿ ಆಚರಿಸಲಾಯಿತು.

ಕಡಲೆಕಾಯಿ ಪರಿಷೆ: ಸೋಂಪುರ ಬಳಿಯ ಚನ್ನವೀರಪಾಳ್ಯದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಂಕ್ರಾಂತಿ ಅಂಗವಾಗಿ ಕಡಲೆಕಾಯಿ ಪರಿಷೆ ನಡೆಯಿತು. ಬೆಳಗ್ಗೆಯಿಂದ ಸಂಜೆವರೆಗೂ ಪರಿಷೆ ಜತೆಗೆ ಸುಗ್ಗಿ ಸಂಭ್ರಮದ ವಿವಿಧ ಸ್ಪರ್ಧೆಗಳು ನಡೆದವು.

ಮೊಸರು ಗಡಿಗೆ ಒಡೆವ ಸ್ಪರ್ಧೆ: ಬನಶಂಕರಿಯ 3ನೇ ಹಂತದಲ್ಲಿನ ಭುವನೇಶ್ವರಿ ನಗರದಲ್ಲಿ ಆಯೋಜಿಸಲಾಗಿದ್ದ ಮೊಸರು ಗಡಿಗೆ ಒಡೆಯುವ ಸ್ಪರ್ಧೆಯಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಬೆಳಗ್ಗೆ ನಡೆದ ಚಿತ್ರಕಲೆ ಸ್ಪರ್ಧೆ ಹಾಗೂ ಮಧ್ಯಾಹ್ನ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ಯುವತಿಯರು ಮತ್ತು ಮಹಿಳೆಯರು ಪಾಲ್ಗೊಂಡಿದ್ದರು. ಮಹಾಲಕ್ಷಿ ದೇವಸ್ಥಾನ ಹಾಗೂ ಶ್ರೀನಗರದಲ್ಲಿ ವಿವಿಧ ಸಂಘಟನೆಗಳಿಂದ ಆಯೋಜಿಸಿದ್ದ ಕಿಚ್ಚು ಹಾಯಿಸುವುದನ್ನು ನೋಡಲು ಅಪಾರ ಜನರು ಜಮಾಯಿಸಿದ್ದರು.

ಎಳ್ಳು ಬೆಲ್ಲ ಹಂಚಿದ ವಾಟಾಳ್‌: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕೂಡ ವಿಭಿನ್ನ ರೀತಿಯಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿ ಗಮನ ಸೆಳೆದರು. ತೆರೆದ ವಾಹನದಲ್ಲಿ ಭುವನೇಶ್ವರಿ ದೇವಿಯ ಭಾವ ಚಿತ್ರ ಇರಿಸಿ ಮೈಸೂರು ಬ್ಯಾಂಕಿನಿಂದ ಮಲ್ಲೇಶ್ವರ, ಕೃಷ್ಣಯ್ಯರ್‌ ರಸ್ತೆ, ಚಿಕ್ಕಪೇಟೆ, ಕಬ್ಬನ್‌ ಪೇಟೆ, ಬಾಳೆ ಪೇಟೆ ಸೇರಿದಂತೆ ನಗರದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಜನರಿಗೆ ಕಬ್ಬು, ಎಳ್ಳು-ಬೆಲ್ಲ ಹಂಚಿ ಶುಭಾಶಯ ಕೋರಿದರು.

ಸಂಕ್ರಾಂತಿ ಸಂಗೀತ ಹಬ್ಬ: ಮಲ್ಲೇಶ್ವರದ ಸೇವಾ ಸದನದಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಲಾವಿದರ ಸಂಗೀತ ಕಾರ್ಯಕ್ರಮ ನೆರೆದ ಸಂಗೀತ ರಸಿಕರ ಮನಸೆಳೆಯಿತು. ಶ್ರೀವಿದ್ಯಾ ರಾಮನಾಥ್‌ ಅವರ ಗಾಯನ, ವಿದ್ವಾನ್‌ ಅದಮ್ಯ ರಮಾನಂದ್‌ ಅವರ ಮೃದಂಗ ಮತ್ತು ವಿದ್ವಾನ್‌ ಬಿ.ಎಸ್‌. ರಘುನಂದನ್‌ ಅವರ ಘಟಂಗೆ ಅಂಸಖ್ಯಾತ ಸಂಗೀತ ಪ್ರಿಯರು ಮನಸೋತರು. ಅರಳ ಪೇಟೆಯ ಶ್ರೀಕೋದಂಡರಾಮ ಭಜನಾ ಮಂಡಳಿ ಸುಗ್ಗಿ ಸಂಭ್ರಮದ ಹಿನ್ನೆಲೆಯಲ್ಲಿ ವಿದ್ವಾನ್‌ ರಾಮದಾಸ್‌ ಮತ್ತು ವಿದ್ವಾನ್‌ ಚಲುವರಾಜು ಮತ್ತವರ ತಂಡದಿಂದ ಸಂಗೀತ ಕಛೇರಿಯನ್ನು ಹಮ್ಮಿಕೊಂಡಿತ್ತು.

ಶಿವನಿಗೆ ಸೂರ್ಯ ಕಿರಣ ಜಳಕ: ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರಸ್ವಾಮಿ ದೇವಾಲಯದಲ್ಲಿ ಸೂರ್ಯನ ರಶ್ಮಿಯು ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ಮುಂಬಿಕೊಂಡರು. ಸೂರ್ಯನು ದಕ್ಷಿಣಾಯನದಿಂದ ಉತ್ತರಾಯನಕ್ಕೆ ಪಥ ಬದಲಿಸುವ ಸಮಯದಲ್ಲಾಗುವ ಈ ಅಪರೂಪದ ದೃಶ್ಯವನ್ನು ದೇಗುಲದ ಹೊರಗೆ ಎಲ್‌ಇಡಿ ಪರದೆ ಮೇಲೆ ಬಿತ್ತರಿಸಲಾಯಿತು.

ಸಂಜೆ 5.25ಕ್ಕೆ ಆರಂಭವಾದ ಪ್ರಕೃತಿಯ ಈ ಕೌತುಕವು ದೇವಾಲಯದಲ್ಲಿರುವ ನಂದಿಯ ಕೋಡಿನ ಮೂಲಕ ಮೊದಲಿಗೆ ಶಿವಲಿಂಗದ ಪಾದವನ್ನು ಸ್ಪರ್ಶಿಸಿದ ಕಿರಣಗಳು 5.29ರವರೆಗೆ ಶಿವಲಿಂಗವನ್ನು ಅಪ್ಪಿಕೊಂಡಿದ್ದವು. ಈ ವೇಳೆ ಶಿವಲಿಂಗಕ್ಕೆ ನೀರು ಹಾಗೂ ಹಾಲಿನ ಅಭಿಷೇಕ ಮಾಡಲಾಯಿತು. ಬಳಿಕ ಸಂಜೆ 6.30ರಿಂದ ರಾತ್ರಿ 10 ಗಂಟೆವರೆಗೆ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.