ತಾಪ ಏರಿದರೆ ತಣ್ಣಗಾಗಲ್ಲ ವೈರಸ್‌


Team Udayavani, Mar 16, 2020, 3:09 AM IST

taapa-aridare

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ಸುಲಭವಾಗಿ ಕೊರೊನಾ ಸೋಂಕನ್ನು ಕಟ್ಟಿಹಾಕಬಹುದು ಎಂಬ ಲೆಕ್ಕಾಚಾರ ತಲೆಕೆಳಗಾಗಿದೆಯೇ? ಹಾಗೆಂದು ಪ್ರಶ್ನೆ ಈಗ ಉದ್ಭವವಾಗಿದೆ. ತಾಪಮಾನ ಹೆಚ್ಚಾಗುವುದರಿಂದ ಕೊರೊನಾಗೆ ಕಡಿವಾಣ ಬೀಳಲಿದೆ ಎಂದು ವೈದ್ಯರು ಅಂದಾಜಿಸಿದ್ದರು. ಆದರೆ, ಈ ವಾದವನ್ನು ವೈದ್ಯರು ತಳ್ಳಿ ಹಾಕಿದ್ದಾರೆ.

ಬಿಸಿಲು ಇರುವೆಡೆ ಈ ಸೋಂಕು ಬರುವುದಿಲ್ಲ ಎಂದು ಉದಾಸೀನತೆ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಜಿಲ್ಲೆಗಳಲ್ಲೇ ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಸದ್ಯ ಕಲಬುರಗಿಯಲ್ಲಿ ಗರಿಷ್ಠ 37.5 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದೆ. ಈ ಭಾಗದಲ್ಲೂ ಮುಂಜಾ ಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಈ ಸಂಬಂಧ “ಉದಯವಾಣಿ’ ಜತೆ ಮಾತನಾಡಿದ ರಾಜೀವ್‌ ಗಾಂಧಿ ಎದೆರೋಗ ಆಸ್ಪತ್ರೆಯ ನಿರ್ದೇಶಕ ಡಾ. ನಾಗ ರಾಜ ಅವರು, ಕೊರೊನಾ ಸೋಂಕು ಉಳಿದ ಸೋಂಕುಗಳಿಗಿಂತ ಭಿನ್ನವಾಗಿದೆ. ತಾಪಮಾನ ಹೆಚ್ಚಿರುವ ಸಿಂಗಾಪುರ, ಇಟಲಿ, ಇರಾನ್‌ ದೇಶಗಳಲ್ಲೂ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರು ವುದೇ ಇದಕ್ಕೆ ನಿದರ್ಶನ. ಹೀಗಾಗಿ, ಬಿಸಿಲಿದೆ ಎಂದು ನಿರ್ಲಕ್ಷ್ಯ ಮಾಡುವುದು ಬೇಡ ಎಂದು ಸಲಹೆ ನೀಡಿದರು.

ರಾಜ್ಯದ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮಾರ್ಚ್‌, ಏಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ವಾಡಿಕೆಗಿಂತ 0.5 ಡಿಗ್ರಿ ಸೆಲ್ಸಿಯಸ್‌ ನಿಂದ 1.0 ಡಿಗ್ರಿ ಸೆಲ್ಸಿಯಸ್‌ನವರೆಗೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವಾಡಿಕೆಗಿಂತ 0.5 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ಉಷ್ಠಾಂಶ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಕೊರೊನಾ ಸೋಂಕು ಗಾಳಿಯಲ್ಲಿ ಹರಡುವುದಕ್ಕಿಂತ ಹೆಚ್ಚಾಗಿ ವಸ್ತುಗಳ ಮೂಲಕ ಹರಡುತ್ತಿದೆ ಎನ್ನುತ್ತಾರೆ ವೈದ್ಯರು.

ರಾಜ್ಯದಲ್ಲಿ ತಾಪಮಾನ ಹೆಚ್ಚಳ ಸಾಧ್ಯತೆ: ರಾಜ್ಯದಲ್ಲಿ 2019ರ ಅ.15ರ ನಂತರ ಮಳೆಯಾಗಿಲ್ಲ. ಅಲ್ಲದೆ, ರಾಜ್ಯದಲ್ಲಿ ಈ ಬಾರಿ ತಾಪಮಾನ ಹೆಚ್ಚಾಗಲಿದೆ. ತೇವಾಂಶ ಪ್ರಮಾಣ ಕಡಿಮೆ ಇರುವುದೂ ಇದಕ್ಕೆ ಕಾರಣ ಎಂದು ಹವಾಮಾನ ತಜ್ಞ ಡಾ.ಎಂ.ಬಿ.ರಾಜೇಗೌಡ ಅವರು ತಿಳಿಸಿದ್ದಾರೆ. ಮಾರ್ಚ್‌ ಕೊನೆಯಲ್ಲಿ ಬೆಂಗಳೂರಿನಲ್ಲಿ 36ರಿಂದ 37 ಡಿಗ್ರಿ ಸೆಲ್ಸಿಯಸ್‌, ಮೈಸೂರು, ಚಾಮರಾಜನಗರದಲ್ಲಿ 37ರಿಂದ 38 ಡಿಗ್ರಿ ಸೆಲ್ಸಿಯಸ್‌, ಕಲಬುರಗಿ,

ಬೀದರ್‌, ಬಿಜಾಪುರ, ಬಾಗಲಕೋಟೆ ಸೇರಿ ಉತ್ತರ ಕರ್ನಾಟಕದ ವಿವಿಧೆಡೆ 42ರಿಂದ 43ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸದ್ಯ ಭೂಮಿಯ ಮೇಲ್ಪದರದಲ್ಲಿ ತೇವಾಂಶ ಕಡಿಮೆಯಾಗಿದೆ. ಹೀಗಾಗಿ, ವಾತಾವರಣ ತಂಪಾಗುವ ಸಾಧ್ಯತೆ ಕಡಿಮೆ. ಬಿಸಿಲು ಗರಿಷ್ಠ ಪ್ರಮಾಣ ತಲುಪಿದಾಗ ಮಳೆಯಾಗಲಿದೆ. ಒಳನಾಡಿನ ವಾತಾವರಣದಲ್ಲಿ ಆಗುವ ಬದಲಾವಣೆಗೆ ಹೋಲಿಸಿದರೆ, ಕರಾವಳಿಯಲ್ಲಿ ಹೆಚ್ಚು ಬದಲಾವಣೆ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಬಿಎಂಟಿಸಿಯಿಂದ ಕೊರೊನಾ ಕುರಿತು ಕಾರ್ಯಾಗಾರ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಡಿಪೋ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೊರೊನಾ ವೈರಸ್‌ ಹರಡುವ ವಿಧಾನ, ರೋಗ ಲಕ್ಷಣಗಳ ಜತೆಗೆ ತಡೆಗಟ್ಟಲು ಪಾಲಿಸಲೇಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳುವಳಿಕೆ ಮೂಡಿಸಲು ಮಾಹಿತಿ ಕಾರ್ಯಾಗಾರ ನಡೆಸುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೊರೊನಾ ಹರಡಿದ ಮಹಿಳೆ, ಆಕೆಯ ತಂದೆ ವಿರುದ್ಧ ಕೇಸ್‌: ಕೊರೊನಾ ವೈರಸ್‌ ಸೋಂಕನ್ನು ವಿವಿಧೆಡೆ ಹರಡಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಗೂಗಲ್‌ ಸಂಸ್ಥೆಯ ಸಿಬ್ಬಂದಿಯ ಪತ್ನಿ ಹಾಗೂ ಮಾವನ (ಪತ್ನಿಯ ತಂದೆ) ವಿರುದ್ಧ “1897ರ ಸಾಂಕ್ರಾಮಿಕ ಕಾಯಿಲೆ ಕಾಯ್ದೆ’ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೇ ತಿಂಗಳ ಮೊದಲ ವಾರದಲ್ಲಿ, ಗ್ರೀಕ್‌ ಪ್ರವಾಸ ಮುಗಿಸಿ ಬಂದಿದ್ದ ಗೂಗಲ್‌ ಸಂಸ್ಥೆಯ ಸಿಬ್ಬಂದಿ ಹಾಗೂ ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿತ್ತು.

ತನ್ನ ಸೋಂಕನ್ನು ಯಾರಿಗೂ ತಿಳಿಸಿದ ಆಕೆ, ಆಗ್ರಾದಲ್ಲಿರುವ ತನ್ನ ತವರು ಮನೆಗೆ ತೆರಳಿದ್ದರು. ಅಲ್ಲಿಗೆ ಹೋದ ನಂತರ ಸೋಂಕು ಉಲ್ಬಣಿಸಿದ್ದರಿಂದ ಅಲ್ಲಿ ರೈಲ್ವೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಕೆಯ ಪರೀಕ್ಷಾ ಫ‌ಲಿತಾಂಶ ವೈದ್ಯರ ಕೈ ಸೇರುವ ಮುನ್ನವೇ ಆಸ್ಪತ್ರೆಯಿಂದ ಕಾಲ್ಕಿತ್ತು, ತನ್ನ ತವರು ಮನೆಯಲ್ಲೇ ಬಚ್ಚಿಟ್ಟುಕೊಂಡಿದ್ದರು. ಅಧಿಕಾರಿಗಳು ಮಗಳನ್ನು ಹುಡುಕಿಕೊಂಡು ಮನೆಗೆ ಬಂದಾಗ, ಆಕೆಯ ತಂದೆ ತಮ್ಮ ಮಗಳು ಬೆಂಗಳೂರಿಗೆ ಹೊರಟು ಹೋಗಿದ್ದಾಗಿ ಸುಳ್ಳು ಹೇಳಿದ್ದರು. ಹೀಗಾಗಿ, ಅವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
ಎಂದು ಮೂಲಗಳು ತಿಳಿಸಿವೆ.

ಈಜುಕೊಳ ಬಳಸದಂತೆ ಸೂಚನೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ಅವಧಿಗೆ ಮುನ್ನವೇ ಬೇಸಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ, ಮಕ್ಕಳು ಈಜುಕೊಳಗಳತ್ತ ಸುಳಿಯದಂತೆ ಎಚ್ಚರಿಕೆ ವಹಿಸುವಂತೆ ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅವರು ಸೂಚನೆ ನೀಡಿದ್ದಾರೆ. ನಗರದ ಹಲವು ವಸತಿ ಸಮುತ್ಛಯಗಳಲ್ಲಿ ಈಜುಕೊಳಗಳಿದ್ದು, ಬೇಸಿಗೆಯ ಸಂದರ್ಭದಲ್ಲಿ ಇವನ್ನು ಮಕ್ಕಳು ಬಳಸುವ ಸಾಧ್ಯತೆ ಇದೆ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದ್ದು, ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸುವಂತೆ ವಸತಿ ಸಮುತ್ಛಯಗಳಿಗೆ ನಿರ್ದೇಶ ಮಾಡಿದ್ದಾರೆ.

ಉಳಿದ ಸೋಂಕು- ಕೊರೊನಾಗೆ ಇರುವ ವ್ಯತ್ಯಾಸ (ಡಾ.ನಾಗರಾಜ ಪ್ರಕಾರ)
-ಬೇರೆ ಸೋಂಕುಗಳು ವಾತಾವರಣದಲ್ಲಿ ಹೆಚ್ಚು ಇರುತ್ತವೆ. ಹೀಗಾಗಿ, ಬಿಸಿಲು ಹೆಚ್ಚಿರುವಾಗ ಉಲ್ಬಣ ಸಾಧ್ಯತೆ ಕಡಿಮೆ.

-ಕೊರೊನಾ ಸೋಂಕು ಗಾಳಿಯಲ್ಲಿ ಶೇ.20 ಪ್ರಮಾಣ ಮಾತ್ರ. ಶೇ.80 ವೈರಸ್‌ಗಳು ಮನುಷ್ಯರ ದೇಹದ ಮೇಲೆ, ಒಳಗೆ ಹಾಗೂ ಮೊಬೈಲ್‌, ಟೇಬಲ್‌ ಸೇರಿ ಸಾಮಾನ್ಯವಾಗಿ ಬಳಸುವ ವಸ್ತುಗಳ ಮೇಲೆ ಇರುತ್ತವೆ.

-ಬೇರೆ ಸೋಂಕುಗಳನ್ನು ಶೀಘ್ರವಾಗಿ ಪತ್ತೆ ಮಾಡಬಹುದು.

-ಕೊರೊನಾ ದೇಹದ ಒಳಗೆ ಹರಡುವುದರಿಂದ ಇದರ ಪತ್ತೆ ಕಷ್ಟ.

-ಕೊರೊನಾ ಸ್ಪರ್ಶದಿಂದ ಹರಡುತ್ತದೆ. ನೆಲ, ವಸ್ತುಗಳ ಮೇಲೆ ಕೊರೊನಾ ವೈರಾಣು ಕುಳಿತುಕೊಳ್ಳುವ ಸಾಧ್ಯತೆ ಹೆಚ್ಚು.

* ಹಿತೇಶ್‌ ವೈ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.