ಯುದ್ಧ ಭೂಮಿಯಾಗಿತ್ತು ಕೆ.ಆರ್‌.ಮಾರುಕಟ್ಟೆ!

ಮಾರುಕಟ್ಟೆಗೆಂದು ಕಾಯಕಲ್ಪ?

Team Udayavani, Jun 9, 2019, 3:10 AM IST

yuddabhomi

ಬೆಂಗಳೂರು: ಕೃಷ್ಣರಾಜೇಂದ್ರ ಮಾರುಕಟ್ಟೆ ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದು. ಇನ್ನೊಂದು ದಶಕದಲ್ಲಿ ಈ ಮಾರುಕಟ್ಟೆ ಶತಮಾನದ ಸಂಭ್ರಮ ಆಚರಿಸಿಕೊಳ್ಳಲಿದೆ. ಏಷ್ಯಾದ ಅತೀ ದೊಡ್ಡ ಹೂವಿನ ಮಾರುಕಟ್ಟೆ, ಒಂದು ಕಾಲದ ಯುದ್ಧ ಭೂಮಿ ಎನ್ನುವ ಹೆಗ್ಗಳಿಕೆ ಇದಕ್ಕಿದೆ.

ಆಗಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ ಅವರ ಹೆಸರನ್ನು ಈ ಮಾರುಕಟ್ಟೆಗೆ ಇಡಲಾಗಿದೆ. 1921ರಲ್ಲಿ ಅಂದಿನ ನಗರಸಭಾ ಅಧ್ಯಕ್ಷರಾಗಿದ್ದ ಬಿ.ಕೆ.ಗರುಡಾಚಾರ್‌ ಅವರ ಅಧ್ಯಕ್ಷತೆಯಲ್ಲಿ ಮಾರುಕಟ್ಟೆಯ ಪ್ರಾರಂಭೋತ್ಸವ ನಡೆದಿತ್ತು. ಅಧಿಕೃತವಾಗಿ 1928ರಲ್ಲಿ ಸರ್‌ ಮಿರ್ಜಾ ಇಸ್ಮಾಯಿಲ್‌ ಅವರು ಮಾರುಕಟ್ಟೆಯನ್ನು ಉದ್ಘಾಟಿಸಿದ್ದರು.

ಮಾರುಕಟ್ಟೆ ಪ್ರಾರಂಭವಾದ ದಿನಗಳಲ್ಲಿ ಇದರ ಮುಂದೆ ಸರ್‌ ಮಿರ್ಜಾ ಇಸ್ಮಾಯಿಲ್‌ ಓವಲ್‌ ಎನ್ನುವ ಕಾರಂಜಿಯುಳ್ಳ ಸುಂದರ ಉದ್ಯಾನವನವಿತ್ತು ಎನ್ನುವುದು ಇತಿಹಾಸದಿಂದ ತಿಳಿಯುತ್ತದೆ. ಈ ಗತ ವೈಭವವನ್ನು ಮೆಲುಕು ಹಾಕಲು, ಅದನ್ನು ನೆನಪಿಸಿಕೊಂಡು ಖುಷಿ ಪಡುವಂತಹ ಸಂತೋಷದ ವಾತಾವರಣ ಮಾತ್ರ ಈಗಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ ಧೋರಣೆಗೆ ಹಿಡಿದ ಕೈಗನ್ನಡಿ.

ಈ ಪ್ರದೇಶ 1971ರಲ್ಲಿ ಬ್ರಿಟಿಷರು ಮತ್ತು ಮೈಸೂರು ಮಹಾರಾಜರ ನಡುವಿನ ಕದನಕ್ಕೆ ಸಾಕ್ಷಿಯಾಗಿತ್ತು. ಈಗ ಮಳೆ ಬಂದರೆ ಕೆಸರು, ಕೊಳಚೆ ನೀರಿನೊಂದಿಗೆ ಹೋರಾಡ ಬೇಕಾದ ಪರಿಸ್ಥಿತಿ ಸಾರ್ವಜನಿಕರದ್ದು. “ರಾಜರ ಕಾಲದಲ್ಲಿ ಮಾರುಕಟ್ಟೆಯನ್ನು ಸುವ್ಯವಸ್ಥಿತವಾಗಿ ನಿರ್ವಹಿಸುತ್ತಿದ್ದರು. ಇಂದು ಇರುವ ತಂತ್ರಜ್ಞಾನ ಆ ಕಾಲದಲ್ಲಿ ಇರಲಿಲ್ಲ.

ತಂತ್ರಜ್ಞಾನ ಇಷ್ಟು ಮುಂದುವರಿದಿದ್ದರೂ, ಮಾರುಕಟ್ಟೆಯನ್ನು ಸರ್ಮಪಕವಾಗಿ ನಿಭಾಯಿಸಲು ಆಗುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸುತ್ತಾರೆ ಇತಿಹಾಸತಜ್ಞ ಎಸ್‌.ಕೆ. ಅರುಣಿ. ಕೃಷ್ಣ ರಾಜೇಂದ್ರ ಮಾರುಕಟ್ಟೆಯ ಸುತ್ತಮುತ್ತಲಿನ ರಸ್ತೆಗಳನ್ನು ರಾಜರಕಾಲದಲ್ಲಿ ರಾಜಬೀದಿ ಎಂದೇ ಗುರುತಿಸಲಾಗಿತ್ತು. ಪಾರಂಪರಿಕ ಇತಿಹಾಸವಿರುವ ಮಾರುಕಟ್ಟೆಯನ್ನು ಉಳಿಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ ಎನ್ನುತ್ತಾರೆ ಅರುಣಿ.

ಕೆ.ಆರ್‌.ಮಾರುಕಟ್ಟೆ ಪ್ರದೇಶದಲ್ಲಿ ಒಂದು ಕಾಲದಲ್ಲಿ ಸಿದ್ಧಿಕಟ್ಟೆ ಎನ್ನುವ ಕಲ್ಯಾಣಿ ಇತ್ತು. ಸದಾ ಅದರಲ್ಲಿ ನೀರು ತುಂಬಿರುತಿತ್ತು ಎಂದು ಸ್ಮರಿಸುತ್ತಾರೆ ಇತಿಹಾಸ ತಜ್ಞರು. ಅಂತಹ ಇತಿಹಾಸ ಪ್ರಸಿದ್ಧ ಮಾರುಕಟ್ಟೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಇಂದಿಗೂ ಕುಡಿಯುವ ನೀರಿಗೆ ಪರದಾಡಬೇಕಾದ ಪರಿಸ್ಥಿತಿ ಇದೆ.

ಕೃಷ್ಣರಾಜೇಂದ್ರ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ತರಕಾರಿ ಹಣ್ಣು, ಹೂ, ಡ್ರೈಪ್ರೂಟ್ಸ್‌, ಸಿಹಿ ತಿಸಿಸು, ಬಟ್ಟೆ, ಕಟ್ಟಡ ನಿರ್ಮಾಣ ಸಾಮಗ್ರಿ, ಎಲೆಕ್ಟ್ರಾನಿಕ್‌ ತ್ಪನ್ನಗಳು ಸೇರಿದಂತೆ ಜೀವನವಶ್ಯಕ ವಸ್ತುಗಳೆಲ್ಲವೂ ಸಿಗುತ್ತವೆ. ಇಲ್ಲಿನ ಸಮಸ್ಯೆಗಳ ಪಟ್ಟಿಯೂ ಅಷ್ಟೇ ದೊಡ್ಡದಿದೆ.

ಈ ಮಾರುಕಟ್ಟೆಯ ವ್ಯಾಪಾರಿಗಳು ಮತ್ತು ಗ್ರಾಹಕರು ಸದಾ ಅಪಾಯದ ಆತಂಕದಲ್ಲೇ ದಿನ ದೂಡುತ್ತಿದ್ದಾರೆ. ಬೆಂಕಿ ಅವಘಡಗಳು ಸಂಭವಿಸಿದರೆ ತಪ್ಪಿಸಿಕೊಳ್ಳಲು ಸ್ಥಳವೇ ಇಲ್ಲ. ಪ್ರತಿದಿನ ಇಲ್ಲಿಗೆ ಅಂದಾಜು 30 ಸಾವಿರದಿಂದ 40 ಸಾವಿರ ಜನ ಬಂದು ಹೋಗುತ್ತಾರೆ.

ವಘಡ ಸಂಭವಿಸಿದರೆ ಎಲ್ಲಿ ಹೋಗಬೇಕೆಂಬ ಸೂಚನಾ ಫ‌ಲಕಗಳು ಇಲ್ಲಿ ಕಾಣಿಸುವುದಿಲ್ಲ. ಅವಘಡ ಸಂಭವಿಸಿದರೆ ಕಾಲು¤ಳಿತದ ಅಪಾಯವನ್ನು ತಳ್ಳಿ ಹಾಕುವಂತಿಲ್ಲ. ಹೂವಿನ ವ್ಯಾಪಾರಿಗಳಿಗೆಂದೇ ನಿರ್ಮಿಸಲಾಗಿರುವ ಲಿಫ್ಟ್ಗೆ ತುಕ್ಕು ಹಿಡಿದಿದೆ.

ತ್ಯಾಜ್ಯ ಸಮಸ್ಯೆ: ನಗರದ ಮಾರುಕಟ್ಟೆಗಳಲ್ಲಿ ಅತೀ ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಮಾರುಕಟ್ಟೆಗಳಲ್ಲಿ ಕೃಷ್ಣರಾಜೇಂದ್ರ ಮಾರುಕಟ್ಟೆ ಮೊದಲನೇ ಸ್ಥಾನದಲ್ಲಿದೆ. ಈ ಮಾರುಕಟ್ಟೆಯಲ್ಲಿ ಪ್ರತಿ ದಿನ ಅಂದಾಜು 500ರಿಂದ 600 ಟನ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು ಸಂಸ್ಕರಣೆ ಮಾಡುವುದಾಗಲಿ, ಸೂಕ್ತ ರೀತಿಯಲ್ಲಿ ವಿಂಗಡಿಸುವ ಕೆಲಸವಾಗಲಿ ಆಗುತ್ತಿಲ್ಲ.

ಬದಲಾವಣೆ ಇಲ್ಲ: ಮಾರುಕಟ್ಟೆ ಸಂಕೀರ್ಣದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಮಳಿಗೆಗಳ ತೆರವಿಗೆ ಕೋರಿ ಬೆಂಗಳೂರು ಹೂವಿನ ವ್ಯಾಪಾರಿಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್‌ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಿ, ಅಗ್ನಿ ಶಾಮಕ ಮತ್ತು ಆಂಬ್ಯುಲೆನ್ಸ್‌ ವಾಹನಗಳು ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಬಿಬಿಎಂಪಿಗೆ ಆದೇಶ ನೀಡಿತ್ತು.

ಬಿಬಿಎಂಪಿ ಸಹ ಈ ಆದೇಶ ಪಾಲಿಸಿ, ಹಲವು ಅನಧಿಕೃತ ಮಳಿಗೆಗಳನ್ನು ತೆರುವುಗೊಳಿಸಿತ್ತು. ಆದರೆ, ಒಂದೇ ವಾರದಲ್ಲಿ ಒತ್ತುವರಿ ತೆರವಾದ ಜಾಗದಲ್ಲಿ ಬೀದಿ ವ್ಯಾಪಾರಿಗಳು ಮತ್ತೆ ವ್ಯಾಪಾರ ಆರಂಭಿಸಿದರು. ಹೀಗಾಗಿ, ಒತ್ತುವರಿ ತೆರವು ಮಾಡಿದರೂ ಯಾವುದೇ ಪ್ರಯೋಜನವಿಲ್ಲ ಎನ್ನುವಂತಾಗಿದೆ.

ಮಾರ್ಷಲ್‌ಗ‌ಳು ನಾಪತ್ತೆ: ಮಾರುಕಟ್ಟೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿದ ನಂತರ 30 ಮಾರ್ಷಲ್‌ಗ‌ಳನ್ನು ನೇಮಕ ಮಾಡಲಾಗಿತ್ತು. “ಮೂರು ಪಾಳಿಗಳಲ್ಲಿ ಈ ಮಾರ್ಷಲ್‌ಗ‌ಳು ಕೆಲಸ ಮಾಡಿ, ಮುಂದೆ ಎಂದೂ ಒತ್ತುವರಿ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುವರು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಹೇಳಿದ್ದರು. ಆದರೆ ತೆರವು ಕಾರ್ಯಚರಣೆ ಮುಗಿಯುವವರೆಗೆ ಕಾಣಿಸಿಕೊಂಡ ಮಾರ್ಶಲ್‌ಗ‌ಳು ಆ ನಂತರ ನಾಪತ್ತೆಯಾಗಿದ್ದಾರೆ.

ಅಧಿಕಾರಿಗಳಿಗೇ ಗೊತ್ತಿಲ್ಲ: ಮಾರುಕಟ್ಟೆಯಲ್ಲಿ ಇಂದಿಗೂ ಸಾಕಷ್ಟು ಅನಧಿಕೃತ ಮಳಿಗೆಗಳಿವೆ. ಆದರೆ, ಅದು ಬಿಬಿಎಂಪಿ ಅಧಿಕಾರಿಗಳಿಗೆ ಗೊತ್ತೇ ಇಲ್ಲ. ಒತ್ತುವರಿ ಸಮಯದಲ್ಲಿ ಅಧಿಕಾರಿಗಳು ದಾಖಲೆ ನೋಡಿಕೊಂಡು ಮಳಿಗೆಗಳನ್ನು ತೆರುವುಗೊಳಿಸಿದ್ದೇ ಇದಕ್ಕೆ ಸಾಕ್ಷಿ. ಎಷ್ಟು ಅನಧಿಕೃತ ಮಳಿಗೆಗಳಿವೆ, ಇಷ್ಟು ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿದ್ದು ಹೇಗೆ ಎನ್ನುವ ಪ್ರಶ್ನೆಗಳಿಗೆ ಅಧಿಕಾರಿಗಳ ಬಳಿ ಸ್ಪಷ್ಟ ಉತ್ತರವಿಲ್ಲ.

ಅಪಾಯಕಾರಿ ಪಾರ್ಕಿಂಗ್‌ ಲಾಟ್‌: ಕೆ.ಆರ್‌ ಮಾರುಕಟ್ಟೆಯಲ್ಲಿ ನೆಲ ಮಹಡಿಯಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಒಂದು ಬದಿ ಮೂತ್ರ ವಿರ್ಸಜನೆ ಮತ್ತೂಂದು ಬದಿ ಧೂಮಪಾನದ ಪ್ರದೇಶವಾಗಿ ಬದಲಾಗಿದೆ. ಸಾವಿರಾರು ವಾಹನಗಳು ನಿಲ್ಲುವ ಪ್ರದೇಶದಲ್ಲಿ ಧೂಮಪಾನ ಮಾಡುವವರನ್ನು ಪ್ರಶ್ನಿಸುವವರೇ ಇಲ್ಲ. ಬೆಂಕಿ ಅವಘಡ ಸಂಭವಿಸಿದರೆ ಅದನ್ನು ನಂದಿಸುವ ಸಾಧನಗಳೂ ಇಲ್ಲಿಲ್ಲ. ಇನ್ನು ಮಳೆ ಬಂದರೆ ಪಾರ್ಕಿಂಗ್‌ ತಾಣ ಈಜು ಕೊಳದಂತಾಗುತ್ತದೆ.

ಬೆಂಕಿ ಆರಿಸಲು ಸಾಧನಗಳಿಲ್ಲ: ಅಗ್ನಿ ಅವಘಡಗಳು ಸಂಭವಿಸಿದರೆ ಅದನ್ನು ನಂದಿಸಲು ಇರಬೇಕಾದ ಸಣ್ಣ ಸಾಧನ ಸಹ ಕೆ.ಆರ್‌ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಮಾರುಕಟ್ಟೆ ಅಭಿವೃದ್ಧಿ ಪಡಿಸುವುದಾಗಿ ಬಿಬಿಎಂಪಿ ಹೇಳಿದೆಯಾದರೂ ಅದು ಕಾರ್ಯರೂಪಕ್ಕೆ ಬರುವುದಕ್ಕೆ ವರ್ಷಗಳೇ ಬೇಕು.

ಸ್ಮಾರ್ಟ್‌ ಸಿಟಿ ಅಡಿ ಅಭಿವೃದ್ಧಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ, 51 ಕೋಟಿ ವೆಚ್ಚದಲ್ಲಿ ಕೃಷ್ಣರಾಜೇಂದ್ರ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲು ಬಿಬಿಎಂಪಿ ಮುಂದಾಗಿದೆ. ಈ ಯೋಜನೆ ಪೂರ್ಣಗೊಳ್ಳಲು ಕನಿಷ್ಠ 30 ತಿಂಗಳು (ಎರಡುವರೆ ವರ್ಷ) ಬೇಕು. ಬಳಿಕವಾದರೂ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ಮಾರುಕಟ್ಟೆ ಅಭಿವೃದ್ಧಿಯಾಗಲಿದೆ. ಪಾರಂಪರಿಕ ಕಟ್ಟಡದ ಮೂಲ ರಚನೆ ಉಳಿಸಿಕೊಂಡೇ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣದಿಂದ ಕೆ.ಆರ್‌. ಮಾರುಕಟ್ಟೆಗೆ ಸ್ಕೈವಾಕ್‌, ವ್ಯಾಪಾರಿಗಳಿಗೆ ಲಿಫ್ಟ್ ಸೌಲಭ್ಯ ಬರಲಿದ್ದು, ಮಾರುಕಟ್ಟೆಯ ಚಿತ್ರಣವೇ ಬದಲಾಗಲಿದೆ.
-ಸುರೇಶ್‌, ಸ್ಮಾಟ್‌ಸಿಟಿ ಯೋಜನೆ ಮುಖ್ಯ ಎಂಜಿನಿಯರ್‌

* ಹಿತೇಶ್‌ ವೈ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.