ದಕ್ಷಿಣ ಆಫ್ರಿಕಾದಿಂದ ಬರಲಿವೆ ಬಿಳಿ ಸಿಂಹ, ಈಲಂಡ್ಸ್‌


Team Udayavani, Aug 19, 2018, 11:59 AM IST

dakshina.jpg

ಆನೇಕಲ್‌: ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ದೇಶ, ವಿದೇಶಿ ಪ್ರವಾಸಿಗರನ್ನು ಸೆಳೆಯಲು ವಿದೇಶಿ ಪ್ರಾಣಿಗಳ ವೀಕ್ಷಣೆಗೆ ಅನುವು ಮಾಡಿಕೊಡುವುದರ ಜೊತೆಗೆ ಮತ್ತಷ್ಟು ಆಕರ್ಷಣೆಯಾಗಲಿದೆ. ದಕ್ಷಿಣ ಆಫ್ರಿಕಾದ ಒಂದು ಜೋಡಿ ಬಿಳಿ ಸಿಂಹ, ಐದು ಈಲಂಡ್ಸ್‌ ಎಂಬ ಸಸ್ಯಹಾರಿ ಪ್ರಾಣಿಗಳನ್ನು ಸದ್ಯದಲ್ಲೇ ತರಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ ಪ್ರಾಣಿ ಪ್ರಿಯರ ಕಾತುರ ಹೆಚ್ಚಾಗಿದೆ.

ಸದ್ಯ ಉದ್ಯಾನವನದಲ್ಲಿ 95 ಪ್ರಭೇದದ ಸುಮಾರು 2000 ಸಾವಿರ ಪ್ರಾಣಿ, ಪಕ್ಷಿ, ಸರಿಸೃಪಗಳಿವೆ. ಇದರಲ್ಲಿ ವಿದೇಶದಿಂದ ತರಿಸಿಕೊಂಡಿರುವ ಜಿಬ್ರಾ ಕೂಡ ಸೇರಿದೆ. ಇತ್ತೀಚೆಗೆ ಮೈಸೂರು ಮೃಗಾಲಯದಲ್ಲಿ ಒಂದು ಜಿರಾಫೆ ತಂದು ಪ್ರವಾಸಿಗರನ್ನು ಸೆಳೆದಿದ್ದ ಉದ್ಯಾನವನದ ಅಧಿಕಾರಿಗಳು, ದಕ್ಷಿಣ ಆಫ್ರಿಕಾದಿಂದ ಒಂದು ಗಂಡು, ಒಂದು ಹೆಣ್ಣು ಬಿಳಿ ಸಿಂಹಗಳನ್ನು ಇದರ ಜೊತೆಗೆ ಭಾರತದ ಕಾಡಹಸುವನ್ನು ಹೋಲುವ (ನಿಲ್‌ಗಾಯ್‌) ಐದು ಈಲಂಡ್ಸ್‌ ಪ್ರಾಣಿಗಳನ್ನು ವಿಮಾನದ ಮೂಲಕ ತರಿಸಿಕೊಳ್ಳುವ ಸಿದ್ಧªತೆಗಳು ಭರದಿಂದ ಸಾಗಿವೆ.

ಬಿಳಿ ಸಿಂಹಗಳು ಮತ್ತು ಈಲಂಡ್ಸ್‌  ವಿದೇಶಿ ಪ್ರಾಣಿಗಳು ಒಟ್ಟಿಗೆ ತರಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಕೊಂಚ ಕಾನೂನು ಮತ್ತು ಅನುಮತಿಗಳ ತೊಡಕಾದರೆ ಮೊದಲ ಹಂತದಲ್ಲಿ ಈಲಂಡ್ಸ್‌ ಪ್ರಾಣಿಗಳನ್ನು ಬರಮಾಡಿಕೊಳ್ಳಬಹುದು ನಂತರ ಎರಡನೇ ಹಂತವಾಗಿ ಒಂದು ಜೋಡಿ ಬಿಳಿ ಸಿಂಹಗಳನ್ನು ತರಸಿಕೊಳ್ಳುವ ಸಿದ್ಧತೆ ನಡೆದಿದೆ.

ಹೆಣ್ಣು, ಗಂಡು ಸೇರಿದಂತೆ ಐದು ಈಲಂಡ್ಸ್‌ ಪ್ರಾಣಿಗಳನ್ನು ವಿಮಾನಯಾನದ ಮೂಲಕ ತರಿಸಿಕೊಳ್ಳಬೇಕಿದೆ. ಇದಕ್ಕೆ ಸುಮಾರು 25 ಲಕ್ಷರೂ., ಹಾಗೂ ಎರಡು ಬಿಳಿ ಸಿಂಹಗಳನ್ನು ತರಿಸಿಕೊಳ್ಳಲು ಸುಮಾರು 35 ಲಕ್ಷ ರೂ., ವಿಮಾನಯಾನದ ವೆಚ್ಚವಾಗಬಹುದು ಎಂದು ಅಂದಾಜು ಮಾಡಲಾಗಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹಲವು ವರ್ಷಗಳ ಹಿಂದೆ ವಿಮಾನಯಾನದಲ್ಲಿ ಲಂಡನ್‌ ಟೈಗರ್‌ಗಳನ್ನು ತರಿಸಿಕೊಳ್ಳಲಾಗಿತ್ತು. ಅದಾದ ಬಳಿಕ ಕಳೆದ ಒಂದು ವರ್ಷದ ಹಿಂದೆ 4 ಜಿಬ್ರಾಗಳನ್ನು ವಿಮಾನ ಯಾನದ ಮೂಲಕ ತರಿಸಿಕೊಳ್ಳಲಾಗಿತ್ತು. ಸದ್ಯ ಬಿಳಿ ಸಿಂಹ ಮತ್ತು ಈಲಂಡ್ಸ್‌ ಪ್ರಾಣಿಗಳನ್ನು ಬರಮಾಡಿಕೊಳ್ಳಲಾಗುತ್ತಿದೆ.

ದಕ್ಷಿಣ ಆಫ್ರಿಕಾದಿಂದ ಬಿಳಿ ಸಿಂಹಗಳನ್ನು ತರುವ ಪ್ರಯತ್ನ ಕಳೆದ ವರ್ಷವೇ ಮಾಡಲಾಗಿತ್ತು. ಆ ಸಮಯದಲ್ಲಿ ಬನ್ನೇರುಘಟ್ಟಕ್ಕೆ ಕಳುಹಿಸಬೇಕಿದ್ದ ಸಿಂಹ ಮೃತ ಪಟ್ಟಿದ್ದರಿಂದ ಅಂದಿನ ಪ್ರಯತ್ನ ವಿಫ‌ಲವಾಗಿತ್ತು. ಅದಾದ ಬಳಿಕ ಮತ್ತೆ ಅಧಿಕಾರಿಗಳು ದಕ್ಷಿಣ ಆಫ್ರಿಕಾದ ಇನ್‌xವಾನ ಮೃಗಾಲಯ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಿಳಿ ಸಿಂಹ, ಈಲಂಡ್ಸ್‌ ಪ್ರಾಣಿಗಳನ್ನು ಕಳುಹಿಸಲು ಒಪ್ಪಿಗೆ ನೀಡಲಾಗಿದೆ. ಇತ್ತ ಕೇಂದ್ರಮೃಗಾಲಯ ಪ್ರಾಧಿಕಾರ, ಹಾಗೂ ಅರಣ್ಯ, ಪರಿಸರ ಸಚಿವಾಲಯವೂ ಆಫ್ರಿಕಾದಿಂದ ಪ್ರಾಣಿಗಳನ್ನು ತರಿಸಿಕೊಳ್ಳಲು ಅನುಮತಿ ನೀಡಲಾಗಿದೆ. 

ಆದರೆ, ಒಂದು ದೇಶದಿಂದ ಮತ್ತೂಂದು ದೇಶಕ್ಕೆ ವನ್ಯಜೀವಿಗಳನ್ನು ಸಾಗಿಸಬೇಕಾದರೆ ಮುಖ್ಯವಾಗಿ ಡಿಜಿಎಫ್ಟಿ ( ಡೈರೆಕ್ಟರ್‌ ಜನರಲ್‌ ಆಫ್ ಫಾರಿನ್‌ ಟ್ರೇಡ್‌) ಅನುಮತಿ ಅವಶ್ಯ. ಇದಕ್ಕಾಗಿ ಕಳೆದ 4 ತಿಂಗಳ ಹಿಂದೆಯೇ ಮನವಿ ಮಾಡಲಾಗಿದೆ. ಸದ್ಯದಲ್ಲೇ ಅನುಮತಿ ಸಿಗುವ ಸಾಧ್ಯತೆ ಇದೆ. 
ಡಿಜಿಎಫ್ಟಿ ಅನುಮತಿ ಸಿಕ್ಕ ಬಳಿಕ ಪ್ರಾಣಿಗಳನ್ನು ಸಾಗಿಸುವ ಸಿದ್ಧತೆ ಹವಾಮಾನ ಎಲ್ಲವನ್ನು ಗಮನಿಸಿ ನಂತರ ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಳ್ಳಬೇಕು ಇದೆಲ್ಲದಕ್ಕೂ ಎರಡು ತಿಂಗಳು ಹಿಡಿಯಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ. 

ಮೃಗಾಲಯಕ್ಕೆ ಬರುವ ಪ್ರವಾಸಿಗರ ದೃಷ್ಟಿಯಿಂದ ಹಾಗು ಮತ್ತಷ್ಟು ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ದೇಶಿ ಪ್ರಾಣಿಗಳನ್ನು ತರಿಸಿಕೊಳ್ಳುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಆರ್‌.ಗೋಕುಲ್‌ ತಿಳಿಸಿದರು.
ಮೊದಲ ಹಂತವಾಗಿ ಈಲಂಡ್ಸ್‌ ಎಂಬ ನಿಲ್‌ಗಾಯ್‌ ಹೊಲುವ ದಕ್ಷಿಣ ಆಫ್ರಿಕಾದ ಪ್ರಾಣಿಗಳನ್ನು ವಿಮಾನದ ಮೂಲಕ ತರಿಸಿಕೊಳ್ಳಲಾಗುತ್ತಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ಅನುಮತಿ ಸಿಕ್ಕಿದ್ದು ಇನ್ನೊಂದೆರಡು ಅನುಮತಿಗಾಗಿ ಕಾಯುತ್ತಿದ್ದೇವೆ. ಅದೂ ಸಿಕ್ಕ ಕೂಡಲೆ ಪ್ರಾಣಿಗಳನ್ನು ತರಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಬಿಳಿ ಸಿಂಹಗಳನ್ನು ತರಿಸಿಕೊಳ್ಳುವ ಪ್ರಸ್ತಾಪ ಕೂಡ ಇದೆ. ಸದ್ಯ ಮೊದಲ ಹಂತವಾಗಿ ಈಲಂಡ್ಸ್‌ ತರಿಸಿಕೊಂಡು ನಂತರ ಬಿಳಿ ಸಿಂಹಗಳ ಪ್ರಯತ್ನ ಮಾಡಲಾಗುವುದು. ಸದ್ಯ ಮೃಗಾಲಯದ ಆವರಣದೊಳಗಿನ ಜಿರಾಫೆ, ಜಿಬ್ರಾ ಇರುವ ಭಾಗದಲ್ಲೇ ಬಯಲು ಆಲಯ ನಿರ್ಮಾಣವಾಗಿದ್ದು ಇಲ್ಲೇ ಈಲಂಡ್ಸ್‌ ಪ್ರಾಣಿಗಳಿಗೆ ಆಶ್ರಯ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿರಾಫೆ, ಜಿಬ್ರಾ, ಸಹ ದಕ್ಷಿಣ ಆಫ್ರಿಕಾದ ಪ್ರಾಣಿಗಳು. ಹೀಗಾಗಿ ಎಲ್ಲವನ್ನೂಒಟ್ಟಿಗೆ ನೋಡುವ ಅವಕಾಶವನ್ನು ಪ್ರವಾಸಿಗರಿಗೆ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

* ಮಂಜುನಾಥ್‌ ಬನ್ನೇರುಘಟ್ಟ

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.