ನಿವೇಶನ ಖಾತಾ ರದ್ದುಪಡಿಸಿದ ಆದೇಶ ಹಿಂಪಡೆದ ಅಧಿಕಾರಿ


Team Udayavani, Aug 3, 2017, 11:45 AM IST

highcourt.jpg

ಬೆಂಗಳೂರು: ವ್ಯಕ್ತಿಯೊಬ್ಬರ ಮನೆಯ ಖಾತಾ ಪತ್ರವನ್ನು ಸಕಾರಣವಿಲ್ಲದೆ ರದ್ದುಪಡಿಸಿರುವುದು ತಪ್ಪಿನ ಕ್ರಮವಾಗಿದ್ದು, ಈ ಸಂಬಂಧ ಹೊರಡಿಸಿದ್ದ ಖಾತಾ ರದ್ದತಿ ಆದೇಶ ಹಿಂಪಡೆದಿರುವುದಾಗಿ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ಎಸ್‌.ಕೆ ಹುಚ್ಚಯ್ಯ ಹೈಕೋರ್ಟ್‌ಗೆ ಬುಧವಾರ ಅಫಿಡವಿಟ್‌ ಸಲ್ಲಿದ್ದಾರೆ. 

ನಿವೇಶನ ಖಾತಾ ಪತ್ರವನ್ನು ಸಹಾಯಕ ಕಂದಾಯ ಅಧಿಕಾರಿ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಅತ್ತಿಗುಪ್ಪೆಯ ಮೊದಲನೇ ರಸ್ತೆಯ ನಿವಾಸಿಗಳಾದ ಪಿ. ಮಹೇಶ್‌ ಹಾಗೂ ಜಿ. ಶ್ರೀಧರ್‌ ಎಂಬುವವರು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ಬುಧವಾರ ನ್ಯಾಯಮೂರ್ತಿ ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ಈ ವೇಳೆ ಹಾಜರಿದ್ದ ಕಂದಾಯ ಅಧಿಕಾರಿ ಎಸ್‌.ಕೆ.  ಹುಚ್ಚಯ್ಯ ಪರ ವಕೀಲರು, ಅರ್ಜಿದಾರರ ನಿವೇಶನದ ಖಾತಾ ಪತ ರದ್ದುಪಡಿಸಿರುವ ಆದೇಶ ಹಿಂಪಡೆದಿರುವುದಾಗಿ ಅಫಿಡವಿಟ್‌ ಸಲ್ಲಿಸಿದರು. ಜೊತೆಗೆ ಈ ಹಿಂದೆ ನ್ಯಾಯಾಲಯದ ಆದೇಶದಂತೆ 50 ಸಾವಿರ ರೂ. ಠೇವಣಿ ಇಟ್ಟಿರುವ ಹಣದ ಮೊತ್ತದಲ್ಲಿ ವಿನಾಯಿತಿ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಅದೇ ರೀತಿ ಅರ್ಜಿದಾರರ ನಿವೇಶನಕ್ಕೆ  ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದ  ಬೆಸ್ಕಾಂ  ಅಸಿಸ್ಟೆಂಟ್‌ ಎಕ್ಸಿಕ್ಯುಟಿವ್‌ ಇಂಜಿಯರ್‌ ಪರ ವಕೀಲರೂ ಕೋರಿದರು. 

ವಾದ -ಪ್ರತಿವಾದ ಆಲಿಸಿದ್ದ ನ್ಯಾಯಪೀಠ, ಬಿಬಿಎಂಪಿ ಅಧಿಕಾರಿಗಳಿಗೆ ಕರ್ತವ್ಯ ಲೋಪದ ಬಗ್ಗೆ ಅರಿವಾಗಬೇಕು ಎಂದು ಎಚ್ಚರಿಸಿತು. ಜೊತೆಗೆ ಕೂಡಲೇ ಅರ್ಜಿದಾರರ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಆದೇಶಿಸಿದ ನ್ಯಾಯಪೀಠ,  ಸಹಾಯಕ ಕಂದಾಯ ಅಧಿಕಾರಿ ಹಾಗೂ ಬೆಸ್ಕಾಂ ಅಸಿಸ್ಟೆಂಟ್‌ ಎಕ್ಸಿಕ್ಯುಟಿವ್‌ ಇಂಜಿಯರ್‌ ಹೈಕೋರ್ಟ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಠೇವಣಿಯಿಟ್ಟಿರುವ 50 ಸಾವಿರ ರೂ.ಗಳ ಪೈಕಿ 35 ಸಾವಿರ ರೂ.ಗಳನ್ನು ವಾಪಾಸ್‌ ಪಡೆದುಕೊಳ್ಳಿ ಎಂದು ಸೂಚನೆ ನೀಡಿ ರಿಟ್‌ ಅರ್ಜಿಯನ್ನು ಇತ್ಯರ್ಥಗೊಳಿಸಿತು.

ಅತ್ತಿಗುಪ್ಪೆಯ ಮೊದಲನೇ ಮುಖ್ಯರಸ್ತೆ ನಿವಾಸಿಗಳಾದ ಪಿ. ಮಹೇಶ್‌ ಹಾಗೂ ಜಿ. ಶ್ರೀಧರ್‌ ಎಂಬುವವರು, ಕಮಲಮ್ಮ ಎಂಬುವವರ ಬಳಿ ನಿವೇಶನ ಖರೀದಿಸಿ ಖಾತಾ ಮಾಡಿಸಿಕೊಂಡಿದ್ದರು. ಆದರೆ ನಿವೇಶನ ಖಾತಾ ನಿಯಮಬಾಹಿರವಾಗಿದೆ ಎಂದು ಸಹಾಯಕ ಕಂದಾಯ ಅಧಿಕಾರಿ ಮಾರ್ಚ್‌ 14ರಂದು ಖಾತಾ ರದ್ದುಗೊಳಿಸಿದ್ದರು.  ಬಳಿಕ ಬೆಸ್ಕಾಂ ಅಧಿಕಾರಿಗಳು ಅರ್ಜಿದಾರರ ನಿವೇಶನಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.