ಕನ್ನಡ ಕೃತಿ ಅನು ವಾದವಾದರೆ ವಿಶ್ವ ಮನ್ನಣೆ


Team Udayavani, Jul 21, 2018, 11:54 AM IST

blore-8.jpg

ಬೆಂಗಳೂರು: ಪ್ರಾದೇಶಿಕ ಭಾಷೆಗಳ ಕೃತಿಗಳು ವಿದೇಶಿ ಭಾಷೆಗೆ ಅನುವಾದವಾಗದೇ ಭಾರತ ಎಂದರೆ ಕೇವಲ ಹಿಂದೆ ಭಾಷೆ ಎನ್ನುವ ವಾತಾವರಣ ವಿದೇಶದಲ್ಲಿ ನಿರ್ಮಾಣವಾಗಿದೆ ಎಂದು ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ. ಬಿ.ಎ.ವಿವೇಕ್‌ ರೈ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ನಯನ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ಣಚಂದ್ರ ತೇಜಸ್ವಿ ಅವರ “ಕರ್ವಾಲೋ’ ಕಾದಂಬರಿಯ ಜರ್ಮನ್‌ ಅನುವಾದ (Die fliegende Eidechse) ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಜರ್ಮನಿ ಸೇರಿದಂತೆ ಅನೇಕ ದೇಶಗಳಿಗೆ ಕನ್ನಡ ಎಂಬ ಭಾಷೆಯಿದೆ ಎನ್ನುವುದೇ ತಿಳಿದಿಲ್ಲ.

ವಿದೇಶದಲ್ಲಿ ಕನ್ನಡ ಎಂದರೆ ಕೆನಡಾ ಎಂದು ಕೇಳುತ್ತಾರೆ. ಇದಕ್ಕೆ ಮುಖ್ಯ ಕಾರಣ ಕನ್ನಡದ ಶ್ರೇಷ್ಠ ಕೃತಿಗಳು ವಿದೇಶಿ
ಭಾಷೆಗೆ ಅನುವಾದವಾಗದಿರುವುದೇ ಎಂದರು.

ತಮಿಳಿನ ಪ್ರಸಿದ್ಧ ಕೃತಿ “ತಿರುಕ್ಕುರಳ್‌’ 82 ಭಾಷೆಗೆ ಅನುವಾದವಾಗಿದೆ. ಆದರೆ, ಸಾಹಿತ್ಯಿಕವಾಗಿ ಅಷ್ಟೇ ಮಹತ್ವ ಹೊಂದಿರುವ “ಪಂಪ ಭಾರತ’ ಕೃತಿ ಅನುವಾದಲ್ಲಿ ಹಿಂದುಳಿದಿರುವುದು ವಿಪರ್ಯಾಸ. ಸಾಹಿತ್ಯ ಹಾಗೂ ಪರಿಸರ ಚಟುವಟಿಕೆಯಲ್ಲಿ ನಿರಂತರವಾಗಿ ತೇಜಸ್ವಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇವರ ಸಾಹಿತ್ಯ ಕೃಷಿಗೆ ನಾಡೋಜ ಪದವಿಯನ್ನು ಹಲವು ಕುಲಪತಿಗಳು ಶಿಫಾರಸು ಮಾಡಿದರೂ ತೇಜಸ್ವಿ ಒಪ್ಪಿರಲಿಲ್ಲ. ತಾನು ಹಂಪಿ ಕನ್ನಡ ವಿವಿ ಕುಲಪತಿಯಾಗಿದ್ದಾಗ ತೇಜಸ್ವಿ ಅವರನ್ನು ನಾಡೋಜ ಪದವಿಗೆ ಒಪ್ಪಿಸುವುದಾಗಿ ಪಣ ತೊಟ್ಟಿದ್ದೆ.

ಎಷ್ಟೇ ಒತ್ತಡ ಹೇರಿದರೂ ತಾನು ವಿಫಲನಾದೆ. ಖುದ್ದು ತೇಜಸ್ವಿ ಮನೆಗೆ ಭೇಟಿ ನೀಡಿ, ಎಷ್ಟೇ ವಿನಂತಿಸಿಕೊಂಡರೂ ಯಾವುದೇ ಪದವಿ ಬೇಡ ಎಂದು ತಿರಸ್ಕರಿಸಿದರು. ಈ ಕಾರಣದಿಂದಲೇ ಸಾಹಿತ್ಯ ಲೋಕದಲ್ಲಿ ತೇಜಸ್ವಿ ಭಿನ್ನವಾಗಿ ನಿಲ್ಲುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಬಿ.ಎಲ್‌.ಶಂಕರ್‌ ಮಾತನಾಡಿ, ಪಾಶ್ಚಿಮಾತ್ಯ ದೇಶದಲ್ಲಿ ಗುಣಮಟ್ಟದ ಪುಸ್ತಕಕ್ಕೆ ಮಾರುಕಟ್ಟೆಯಿದೆ. ಆ ನಿಟ್ಟಿನಲ್ಲಿ ಕನ್ನಡದ ಅನೇಕ ಪುಸ್ತಕಗಳನ್ನು ವಿದೇಶಿ ಭಾಷೆಗಳಿಗೆ ಅನುವಾದ ಮಾಡಬೇಕಿದೆ. ಇನ್ನು ಈ ಕೆಲಸಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಧನಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಲೇಖಕಿ ರಾಜೇಶ್ವರಿ ತೇಜಸ್ವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌, ಕೃತಿಯ ಅನುವಾದಕಿ ಡಾ. ಕತ್ರೀನ್‌ ಬೈಂದರ್‌, ಮ್ಯಾಕ್ಸ್‌ ಮುಲ್ಲರ್‌ ಭವನದ ನಿರ್ದೇಶಕ ಡಾ. ಕ್ಲಾಸ್‌ ಹೇಮಿಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.