ಯುವಕನ ಮೇಲೆ ಹಲ್ಲೆ, ಠಾಣೆಯಲ್ಲಿ ಟಾರ್ಚರ್‌


Team Udayavani, Apr 23, 2019, 4:10 AM IST

yuvakana

ಬೆಂಗಳೂರು: ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದ ಆರೋಪ ಪ್ರಕರಣದಲ್ಲಿ ಡಿ.ಜೆ ಹಳ್ಳಿ ಪೊಲೀಸ್‌ ಠಾಣೆಯ ಪಿಎಸ್‌ಐ ಸಂತೋಷ್‌, ಪೊಲೀಸ್‌ ಪೇದೆ ಅಯ್ಯಪ್ಪರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಕಾವಲ್‌ಭೈರಸಂದ್ರ ನಿವಾಸಿ ಮೊಹಮ್ಮದ್‌ ತನ್ವೀರ್‌ (23) ಎಂಬ ಯುವಕನ ಮೇಲೆ ಏ.9ರಂದು ರಾತ್ರಿ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪ ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಸದ್ಯ, ಮೊಹಮದ್‌ ತನ್ವೀರ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮೊಹಮದ್‌ ತನ್ವೀರ್‌ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪರನ್ನು ಅಮಾನತುಗೊಳಿಸಲಾಗಿದೆ. ಇಬ್ಬರ ವಿರುದ್ಧವೂ ಡಿ.ಜೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೂರ್ವವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ “ಉದಯವಾಣಿ’ಗೆ ಖಚಿತಪಡಿಸಿದರು.

ಪೊಲೀಸರ ವಿರುದ್ಧ ಎಫ್ಐಆರ್‌!: ತನ್ವೀರ್‌ ಮೇಲೆ ಗಂಭೀರ ಹಲ್ಲೆ ನಡೆಸಿದ ಆರೋಪ ಸಂಬಂಧ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪ ಹಾಗೂ ಇತರೆ ಪೊಲೀಸರ ವಿರುದ್ಧ, ಐಪಿಸಿ 324 ( ಮಾರಕಾಸ್ತ್ರ ಬಳಸಿ ಹಲ್ಲೆ) 323 (ಹಲ್ಲೆ) 504, 149 ಕಲಂಗಳ ಅಡಿಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಆರೋಪಿಗಳಾದ ಪಿಎಸ್‌ಐ ಸಂತೋಷ್‌ ಹಾಗೂ ಪೇದೆ ಅಯ್ಯಪ್ಪ ಯುವಕನ ಮೇಲೆ ಹಲ್ಲೆ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಹೀಗಾಗಿ ಅಮಾನತು ಮಾಡಲಾಗಿದೆ. ತನಿಖೆ ಮುಂದುವ ರಿದಿದ್ದು ಈ ಕೃತ್ಯದಲ್ಲಿ ಇತರೆ ಅಧಿಕಾರಿ ಅಥವಾ ಸಿಬ್ಬಂದಿ ಪಾತ್ರವೂ ಕಂಡು ಬಂದರೆ ಅವರು ಅಮಾನತಿಗೆ ಒಳಗಾಗುವ ಸಾಧ್ಯತೆಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಔಷಧಿ ತರಲು ಹೋದವನಿಗೆ ಹಿಡಿದು ಹೊಡೆದ ಪೊಲೀಸ್‌!: ಕಾವಲ್‌ ಭೈರಸಂದ್ರದ ರತನ್‌ ಸಿಂಗ್‌ ಲೇಔಟ್‌ ನಿವಾಸಿಯಾದ ಮೊಹಮದ್‌ ತನ್ವೀರ್‌ ಏ.9 ರಂದು ರಾತ್ರಿ ನೆರೆಮನೆಯ ನಿವಾಸಿಗೆ ಅಗತ್ಯವಿದ್ದ ಔಷಧಿ ತರುವ ಸಲುವಾಗಿ ಸ್ನೇಹಿತನ ಜತೆ ಬೈಕ್‌ನಲ್ಲಿ 1.45ರ ಸುಮಾರಿಗೆ ಸುಮಾರಿಗೆ ಹೊರಗಡೆ ಬಂದಿದ್ದರು.

ಈ ವೇಳೆ, ಗಸ್ತಿನಲ್ಲಿದ್ದ ಪೇದೆ ಅಯ್ಯಪ್ಪ ಅವರನ್ನು ತಡೆದಿದ್ದರು. ಬಳಿಕ ಕ್ಷುಲ್ಲಕ ಕಾರಣಕ್ಕೆ ಅಯ್ಯಪ್ಪ, ತನ್ವೀರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಹೊಯ್ಸಳ ವಾಹನದಲ್ಲಿ ಆಗಮಿಸಿದ ಪಿಎಸ್‌ಐ ಸಂತೋಷ್‌ ಹಾಗೂ ಇತರೆ ಸಿಬ್ಬಂದಿ ಕೂಡ ತನ್ವೀರ್‌ನನ್ನು ಠಾಣೆಗೆ ಕರೆದೊಯ್ದು ಲಾಠಿ ಹಾಗೂ ಪೈಪ್‌ನಿಂದ ಹಲ್ಲೆ ನಡೆಸಿದ್ದರು ಎಂಬ ಆರೋಪವಿದೆ.

ಕ್ರಮ ಜರುಗಿಸಲು ಆಯುಕ್ತರಿಗೆ ದೂರು: ಮಾರನೇ ದಿನ ತನ್ವೀರ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಹಲವು ದಿನಗಳ ಬಳಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿತ್ತು. ಪೊಲೀಸರು ನಡೆಸಿದ ಹಲ್ಲೆಯ ಕುರಿತು ಕ್ರಮ ಜರುಗಿಸುವಂತೆ ತನ್ವೀರ್‌ ಸಹೋದರ ಮೊಹಮದ್‌ ಮುಸಾವೀರ್‌ ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಅವರಿಗೆ ದೂರು ನೀಡಿದ್ದರು.

ಈ ಬೆನ್ನಲ್ಲೇ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಮೂರ್ತಿಗೆ ಆಯುಕ್ತರು ಸೂಚನೆ ನೀಡಿದ್ದರು. ಡಿಸಿಪಿ ನೀಡಿದ ವರದಿ ಆಧರಿಸಿ ಇಬ್ಬರನ್ನೂ ಅಮಾನತುಗೊಳಿಸಿದ್ದು ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.