ಯುವ ಪೀಳಿಗೆಗೆ ಸಾಧಕರ ಪರಿಚಯವಿಲ್ಲ


Team Udayavani, Jun 12, 2019, 3:04 AM IST

yuva

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮುಳುಗಿ ಹೋಗಿರುವ ಇಂದಿನ ಯುವ ಪೀಳಿಗೆಗೆ ತಮ್ಮ ಕುಟುಂಬದ ಹಿರಿಯ ಸಾಧಕರ ಸಾಧನೆ ಬಗ್ಗೆ ಅರಿವಿಲ್ಲದಿರುವುದು ಬೇಸರದ ಸಂಗತಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ನಾಡೋಜ ಎಂ.ಎಚ್‌.ಕೃಷ್ಣಯ್ಯ ಅಭಿಪ್ರಾಯಪಟ್ಟರು.

ಎಚ್‌ಎಎಲ್‌ ಕೇಂದ್ರೀಯ ಕನ್ನಡ ಸಂಘ, ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕ ರಾ.ನಂ.ಚಂದ್ರಶೇಖರ ಅವರ “ವಿಮಾನ ಮಾನ’, ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಂಪ್ಯೂಟರ್‌ ಮತ್ತು ಮೊಬೈಲ್‌ನಲ್ಲಿ ಮುಳುಗಿ ಹೋಗಿರುವ ಹಲವು ಮಕ್ಕಳಿಗೆ ತಮ್ಮ ಪೋಷಕರು ಎಷ್ಟೇ ಸಾಧನೆ ಮಾಡಿದರು.ಅವರ ಸಾಧನೆಯ ಬಗ್ಗೆ ಅರಿವಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಎಚ್‌.ಎ.ಎಲ್‌ನಲ್ಲಿ ಕೆಲಸ ಮಾಡಿರುವ ಹಲವು ದಿಗ್ಗಜರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೂಡುಗೆ ನೀಡಿದ್ದಾರೆ.ಆದರೆ ಅವರ ಕುಟುಂಬದವರಿಗೆ ಈಗ ಅವರ ಸಾಧನೆ ಬಗ್ಗೆ ಮಾಹಿತಿಯೇ ಇಲ್ಲ.ಇದು ಸಾಧಕರ ಬಗ್ಗೆ ಮಾಹಿತಿ ಪಡೆಯಲು ಹೋದ ಲೇಖಕ ರಾ.ನಂ.ಚಂದ್ರಶೇಖರ ಅವರಿಗೆ ಅನುಭವವಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯದ ಜೊತೆಗೆ ನೆಲೆ, ಜಲದ ವಿಚಾರದಲ್ಲೂ ಎಚ್‌.ಎ.ಎಲ್‌ ನೌಕರರು ಹೋರಾಟ ಮಾಡಿದ್ದಾರೆ.ಅಂತವರ ಹೆಸರಿನಲ್ಲಿ “ವಿಮಾನ ಮಾನ’, ಪುಸ್ತಕ ಹೊರ ತಂದಿರುವುದು ಖುಷಿ ಪಡುವ ವಿಚಾರವಾಗಿದೆ. ವಿಜ್ಞಾನ-ತಂತ್ರಜ್ಞಾನದ ಸಂವೇದನೆ ಕೃತಿಯಲ್ಲಿ ಅಡಕವಾಗಿದೆ ಎಂದು ತಿಳಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡಿ, “ವಿಮಾನ ಮಾನ’, ಶ್ರೇಷ್ಠ ಕೃತಿಯಾಗಿ ಹೊರಹೊಮ್ಮಿದೆ. ಕನ್ನಡ ಸಾಹಿತ್ಯ ಲೋಕದ ಹಲವು ಸಾಧಕರು ಅಲ್ಲಿ ಕೆಲಸ ಮಾಡಿರುವುದು ಈ ಪುಸ್ತಕ ಓದಿನಿಂದ ತಿಳಿಯುತ್ತದೆ. ಇಂತಹ ಪುಸ್ತಕಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಲಿ ಎಂದು ಆಶಿಸಿದರು.

ಇದೇ ವೇಳೆ ಎಚ್‌.ಎ.ಎಲ್‌ ನಲ್ಲಿ ಸೇವೆ ಸಲ್ಲಿಸಿದ ಸಾಹಿತಿ ಈಶ್ವರ ಚಂದ್ರ, ಕೆ.ಎ.ಭಗವಾನ್‌, ಪತ್ರಕರ್ತ ಚಿರಂಜೀವಿ, ವಿಜ್ಞಾನ ಬರಹಗಾರ ಸುಧೀಂದ್ರ ಹಾಲೊಡ್ಡೇರಿ, ಲೇಖಕಿ ನೇಮಿಚಂದ್ರಮ್ಮ, ರಾಮನ್‌ತಳಿ ಸುಧಾಕರನ್‌ ಅವರನ್ನು ಗೌರವಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ, ಲೇಖಕ ರಾ.ನಂ.ಚಂದ್ರಶೇಖರ, ಎಚ್‌.ಎ.ಎಲ್‌.ಸಿಇಒ ಡಿ.ದೀಪಕ್‌ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.