ರಂಗಕರ್ಮಿ ಡಿ.ಕೆ.ಚೌಟ ಅವರಿಗೆ ಶ್ರದ್ಧಾಂಜಲಿ


Team Udayavani, Jun 24, 2019, 3:05 AM IST

rangakarm

ಬೆಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ರಂಗಕರ್ಮಿ ಹಾಗೂ ಸಾಹಿತಿ ಡಿ.ಕೆ.ಚೌಟ ಅವರಿಗೆ ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತುಳುವರೆ ಚಾವಡಿ ಬೆಂಗಳೂರು ಸಂಘಟನೆ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಬೆಂಗಳೂರಿನ ಹಲವು ಕಡೆಗಳಲ್ಲಿರುವ ವಿವಿಧ ತುಳು ಸಂಘಟನೆಯ ಮುಖಂಡರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ತುಳುವರೆ ಚಾವಡಿ ಬೆಂಗಳೂರು ಸಂಘಟನೆಯ ಗೌವರ ಕಾರ್ಯಾಧ್ಯಕ್ಷ ಪುರುಷೋತ್ತಮ ಚೇಂಡ್ಲಾ, ಎಲ್ಲಾ ರಂಗಗಳಲ್ಲೂ ಸೈ ಎನಿಸಿಕೊಂಡಿರುವ ವ್ಯಕ್ತಿ ಅಂದರೆ ಅದು ಡಿ.ಕೆ.ಚೌಟ ಎಂದು ಬಣ್ಣಿಸಿದರು.

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆನ ಸೇರಿಸಬೇಕು ಎಂಬ ಹೋರಾಟದಲ್ಲಿ ಚೌಟರು ಕಾಣಿಸಿಕೊಂಡಿದ್ದರು. ತುಳುಭಾಷೆಗೆ ವಿಶೇಷವಾದ ಸ್ಥಾನ ಮಾನ ದೊರಕಬೇಕು ಎಂಬ ತುಡಿತ ಅವರದ್ದಾಗಿತ್ತು. ಆದರೆ ಈಗ ಅವರನ್ನು ಕಳೆದು ಕೊಂಡಿರುವುದು ತುಳು ಭಾಷೆಗೆ ತುಂಬಲಾರದ ನಷ್ಟ ಎಂದು ಹೇಳಿದರು.

ಶ್ರೀಮಂತ ಮನೆತನದಿಂದ ಹುಟ್ಟಿದ್ದ ಚೌಟರವರು ಕೃಷಿಕನಾಗಿ, ಉದ್ಯಮಿಯಾಗಿ, ಸಾಹಿತಿಯಾಗಿ ಹಾಗೂ ರಂಗಕರ್ಮಿಯಾಗಿ ಹೆಸರು ಮಾಡಿದ್ದಾರೆ. ಎಲ್ಲಾ ಕ್ಷೇತ್ರಗಳಿಗೂ ಒಗ್ಗಿಕೊಳ್ಳುವ ವ್ಯಕ್ತಿ ಅವರಾಗಿದ್ದರು ಎಂದರು.

ಡಿ.ಕೆ.ಚೌಟ ಅವರ ಒಡನಾಡಿ ಕೃಷ್ಣಮೂರ್ತಿ ಕವತ್ತಾರು ಮಾತನಾಡಿ, ಎಲ್ಲರಿಗೂ ಸದಾ ಒಳಿತನ್ನು ಬಯಸುತ್ತಿದ್ದ ಚೌಟರು ರಾಜಮನೆತನದಲ್ಲಿ ಹುಟ್ಟಿದರೂ, ಆಡಂಬರವನ್ನು ನೀರಿಕ್ಷೆ ಮಾಡುತ್ತಿರಲಿಲ್ಲ. ಹೊಸತನ್ನು ಸಾಧಿಸಬೇಕು ಎಂಬ ಹಂಬಲ ಅವರಲ್ಲಿತ್ತು ಎಂದು ನುಡಿದರು.

ಕೃಷಿಯನ್ನು ಬಹಳ ಇಷ್ಟಪಡುತ್ತಿದ್ದ ಅವರು ಸಾಂಸ್ಕೃತಿಕ ಕೃಷಿಯನ್ನು ಕೂಡ ಮಾಡಿದರು. ಹೀಗಾಗಿ ಅವರು ನಮಗೆ ಹಲವು ರೀತಿಯಲ್ಲಿ ಮಾದರಿ ವ್ಯಕ್ತಿಯಾಗಿ ನಿಲ್ಲುತ್ತಾರೆ. ಅವರು ನಡೆದ ದಾರಿಯಲ್ಲಿ ಸಾಗೋಣ ಎಂದರು.

ಶಿಕ್ಷಣ ತಜ್ಞ ಕೆ.ಈ.ರಾಧಾಕೃಷ್ಣ ಮಾತನಾಡಿ, ತುಳು ಸಾಹಿತ್ಯಕ್ಕೆ ಚೌಟರವರ ಸೇವೆ ಅನನ್ಯ. ತುಳು ಭಾಷೆ ಅಲ್ಲದೆ ಕನ್ನಡದಲ್ಲೂ ಕೆಲವು ಕೃತಿಗಳನ್ನು ರಚಿಸಿದ್ದಾರೆ. ಹೀಗಾಗಿ ಚೌಟರವರ ನಿಧನ ಕನ್ನಡ ಸಾಂಸ್ಕೃತಿ ಲೋಕಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.

ಬೆಂಗಳೂರು ತುಳು ಕೂಟದ ಕಾರ್ಯದರ್ಶಿ ದೇವೇಂದ್ರ ಹೆಗಡೆ, ವಿಜಯ್‌ಕುಮಾರ್‌ ಕುಲಶೇಖರ್‌, ಸುಂದರಾಜ್‌ ರೈ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಮಾಜಿ ಅಧ್ಯಕ್ಷ ಚಂದ್ರಹಾಸ ರೈ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.