Theft: ಕೆಲಸಕ್ಕಿದ್ದ ಚಿನ್ನದಂಗಡಿಯಲ್ಲೇ ಚಿನ್ನ, ಬೆಳ್ಳಿ, ನಗದು ಕದ್ದ ಇಬ್ಬರ ಸೆರೆ
Team Udayavani, Nov 18, 2023, 10:36 AM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಹಲಸೂರುಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಕೇತುರಾಮ್ ಮತ್ತು ಈತನ ಸ್ನೇಹಿತ ರಾಕೇಶ್ ಬಂಧಿತರು.
ಆರೋಪಿ ಶ್ಯಾಮ್ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿ ರಾಕೇಶ್ ವಿರುದ್ಧ ವಿವಿಧ ಠಾಣೆಗಳಲ್ಲಿ ಮನೆಗಳವು, ಎನ್ಡಿಪಿಎಸ್ ಕಾಯ್ದೆ ಅಡಿ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ. ಆತ ಈ ಹಿಂದೆ ಬಂಧನಕ್ಕೊಳಗಾಗಿ ಜೈಲಿಗೆ ಹೋಗಿ ಬಂದಿದ್ದಾನೆ ಎಂದು ತಿಳಿದು ಬಂದಿದೆ.
ಬಂಧಿತರಿಂದ 1.2 ಕೋಟಿ ರೂ. ಬೆಲೆ ಬಾಳುವ 1.624 ಕೆ.ಜಿ ಚಿನ್ನ, 6.4 ಕೆ.ಜಿ. ಬೆಳ್ಳಿ ಹಾಗೂ 5.50 ಲಕ್ಷ ನಗದು ಜಪ್ತಿ ಮಾಡಲಾಗಿದೆ.
ಮಾಲಿಕರ ಕಣ್ತಪ್ಪಿಸಿ ಕೀ ಪಡೆದಿದ್ದ ಆರೋಪಿ: ರಾಜಸ್ಥಾನ ಮೂಲದ ಅರವಿಂದ್ ಕುಮಾರ್ ತಾಡೆ ನಗರತ್ಪೇಟೆಯಲ್ಲಿ ಕಾಂಚನಾ ಜ್ಯುವೆಲ್ಲರ್ಸ್ ಹೆಸರಿನ ಚಿನ್ನದ ಅಂಗಡಿ ಹೊಂದಿದ್ದಾರೆ. ಈ ನಡುವೆ ಕೆಲಸಕ್ಕಾಗಿ ಅಲೆಯುತ್ತಿದ್ದ ಆರೋಪಿ ಕೇತರಾಮ್ ನನ್ನು ಒಂದು ತಿಂಗಳು ಹಿಂದೆ ಅರವಿಂದ್ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ತಮ್ಮದೇ ಊರಿನವನಾದ ಕಾರಣ ಆರೋಪಿಯ ಹಿನ್ನೆಲೆ ಪರಿಶೀಲಿಸಿರಲಿಲ್ಲ. ಈ ನಡುವೆ ಮನೆ ಶುಚಿಗೊಳಿವ ವೇಳೆ ಮಾಲೀಕರು ಕೀ ಇಡುವ ಜಾಗವನ್ನು ಆರೋಪಿಯು ಗಮನಿಸಿದ್ದ. ಮಾಲೀಕರು ಊರಿಗೆ ಹೋಗುವ ಹಿಂದಿನ ದಿನ ಅವರ ಕಣ್ತಪ್ಪಿಸಿ ಅಂಗಡಿಯ ಕೀ ಹಾಗೂ ಅಲ್ಲಿರುವ ಲಾಕರ್ಗಳ ಕೀ ತೆಗೆದುಕೊಂಡಿದ್ದ.
ಅ.29 ರಂದು ತಮ್ಮ ಕುಟುಂಬದೊಂದಿಗೆ ಹಬ್ಬಕ್ಕಾಗಿ ಅರವಿಂದ್ ಮುಂಬೈಗೆ ಹೋಗಿದ್ದರು. ಆ ವೇಳೆ ಆರೋಪಿ ಕೇತರಾಮ್ ತನ್ನ ಸ್ನೇಹಿತರಾದ ರಾಜಸ್ತಾನದ ರಾಕೇಶ್ ಹಾಗೂ ಶ್ಯಾಮ್ ಎಂಬಾತನನ್ನು ಇಲ್ಲಿಗೆ ಕರೆಸಿಕೊಂಡಿದ್ದ. ನಂತರ ಮೂವರೂ ಜೊತೆಯಾಗಿ ಅರವಿಂದ್ ಚಿನ್ನದ ಅಂಗಡಿಯ ಲಾಕರ್ನಲ್ಲಿಟ್ಟಿದ್ದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದರು. ಅಂಗಡಿ ತೆರೆದಿರುವುದನ್ನು ಗಮನಿಸಿದ ಅಕ್ಕಪಕ್ಕದ ಅಂಡಿಯವರು ಅರವಿಂದ್ಗೆ ಕರೆ ಮಾಡಿ ತಿಳಿಸಿದ್ದರು. ಆತಂಕಗೊಂಡ ಅರವಿಂದ್ ಊರಿನಿಂದ ವಾಪಸ್ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ