ದರೋಡೆ ಮಾಡಿ ಮಾದಪ್ಪನ ದರ್ಶನ: ಇಬ್ಬರ ಬಂಧನ
Team Udayavani, Jul 25, 2022, 2:52 PM IST
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ನಲ್ಲಿ ನಷ್ಟ ಹೊಂದಿ ಸಾಲ ತೀರಿಸಲು ದರೋಡೆ ಮಾಡಿ, ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿದ್ದಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರು ಸೇರಿ ನಾಲ್ವರು ಗಿರಿನಗರ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಗಿರಿನಗರ ನಿವಾಸಿ ಶ್ರೀಧರ್ (29), ನಿತಿನ್ ರಾಜ್ (18) ಮತ್ತು ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ.
ಅಪ್ರಾಪ್ತರನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಆರೋಪಿಗಳ ಪೈಕಿ ಶ್ರೀಧರ್, ಪದವೀಧರನಾಗಿದ್ದು, ಕ್ರಿಕೆಟ್ ಬೆಟ್ಟಿಂಗ್ ಗೀಳು ಅಂಟಿಸಿಕೊಂಡಿದ್ದ. ಅದರಿಂದ ಸಾವಿರಾರು ರೂ. ಸಾಲ ಮಾಡಿಕೊಂಡಿದ್ದ. ಅದರಿಂದ ಸಾಲಗಾರರು ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದರು. ಹೀಗಾಗಿ, ಮನೆ ತೋರೆದಿದ್ದ ಆರೋಪಿ, ಕೆಲಪುಂಡರ ಜತೆ ಸೇರಿಕೊಂಡು ಗಾಂಜಾ ಹಾಗೂ ಮೋಜಿನ ಜೀವನಕ್ಕೆ ಬಲಿಯಾಗಿದ್ದ. ಇದೇ ವೇಳೆ ಪರಿಚಯವಾದ ನಿತಿನ್ರಾಜ್ ಮತ್ತು ಇತರೆ ಇಬ್ಬರು ಬಾಲಕರಿಗೆ ಹಣದ ಆಮಿಷವೊಡ್ಡಿ ಕೃತ್ಯವೆಸಗಲು ಪ್ರೇರಕನಾಗಿದ್ದ.
ಜೂ. 2ರಂದು ಲೋಕೇಶ್ ಎಂಬವರು ಗಿರಿ ನಗರದ ಬ್ಯಾಂಕ್ ಕಾಲೋನಿಯ ಬಾರ್ವೊಂದರಲ್ಲಿ ಮದ್ಯ ಸೇವಿಸಿ ಮನೆಗೆ ಹೋಗುತ್ತಿದ್ದರು. ಅದೇ ಬಾರ್ನಲ್ಲಿ ಮದ್ಯ ಸೇವಿಸಿದ್ದ ನಾಲ್ವರು ಆರೋಪಿಗಳು, ಮಾರ್ಗಮಧ್ಯೆ ಲೋಕೇಶ್ರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, 50 ಸಾವಿರ ರೂ. ಮೌಲ್ಯದ ಚಿನ್ನದ 2 ಉಂಗುರ,1.40 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನದ ಸರಹಾಗೂ 20 ಸಾವಿರ ನಗದು, ಮೊಬೈಲ್,ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.
ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ, ಪೂಜೆ :
ಕೃತ್ಯ ಎಸಗಿದ ಬಳಿಕ ಆರೋಪಿಗಳು ಚಿನ್ನಾಭರಣ ಪೈಕಿ ಸರ, ಒಂದು ಉಂಗುರ ಅಡಮಾನ ಇಟ್ಟು, ನೇರವಾಗಿ ಗೋವಾಕ್ಕೆ ತೆರಳಿ ಮೋಜು-ಮಸ್ತಿ ಮಾಡಿದ್ದಾರೆ. ಬಳಿಕ ಚಾಮರಾಜಪೇಟೆಯ ಮಲೆಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ. ನಂತರ ಬಂದು ಮತ್ತೂಂದು ಉಂಗುರವನ್ನು ಅಡಮಾನ ಇಟ್ಟು ಬಂದ ಹಣದಲ್ಲಿ ನಾಲ್ವರು ಹಂಚಿಕೊಂಡು ಬೈಕ್ನಲ್ಲಿ ಓಡಾಡುತ್ತಿದ್ದರು. ಸಿಸಿ ಕ್ಯಾಮೆರಾ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಗಿರಿ ನಗರ ಠಾಣೆಯಲ್ಲಿ ಕ್ರ ಎಂದು ಪೊಲೀಸರು ಹೇಳಿದರು. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Campaign: ಧನ್ಯವಾದ ಮೋದಿ… ಬಿಜೆಪಿಯಿಂದ ಹೊಸ ಅಭಿಯಾನ
BJP: ಕರ್ನಾಟಕದಲ್ಲಿ ಬಿಜೆಪಿ ಅರ್ಧಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಹುದು: ಎಸ್.ಎಲ್. ಭೈರಪ್ಪ
CET: ಅರ್ಜಿ ಸಲ್ಲಿಕೆಗೆ ಎ.1ರ ವರೆಗೆ ಅವಕಾಶ
ಚಿಕ್ಕಬಳ್ಳಾಪುರ ಸೇರಿ ಕರ್ನಾಟಕದ ಮೂರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
MUST WATCH
ಹೊಸ ಸೇರ್ಪಡೆ
Bhagavad Gita ಸಮ್ಮೇಳನದಿಂದ ಶ್ರೀಕೃಷ್ಣನಿಗೆ ಅತೀವ ಸಂತೋಷ: ಪುತ್ತಿಗೆ ಶ್ರೀ
Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್!
Afghan ವ್ಯಭಿಚಾರಿ ಸ್ತ್ರೀಯರಿಗೆ ರಸ್ತೆ ಮಧ್ಯೆಯೇ ಕಲ್ಲೇಟು: ತಾಲಿಬಾನ್ ಘೋಷಣೆ!
BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ
RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್ ಪರಾಗ್