ಜನಸಂದಣಿ ಸ್ಥಳ, ಬಿಎಂಟಿಸಿ ಬಸ್‌ಗಳಲ್ಲಿ ಕಳ್ಳತನ


Team Udayavani, Jan 15, 2023, 1:00 PM IST

tdy-6

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ಹಾಗೂ ಹಣ ಕಳವು ಮಾಡು ತ್ತಿದ್ದ ಕಳ್ಳರು ಹಾಗೂ ಕಳವು ಮಾಲುಗಳನ್ನು ಸ್ವೀಕರಿ ಸುತ್ತಿದ್ದ ಆರು ಮಂದಿಯನ್ನು ಸುದ್ದುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಭಾಷ್‌ನಗರದ ಜಾಫ‌ರ್‌ ಸಿದ್ದಿಕ್‌(26), ಬೇಗೂರಿನ ಸೈಯದ್‌ ಅಖೀಲ್‌(40), ಹಳೇ ಗುಡ್ಡದ ಹಳ್ಳಿ ನಿವಾಸಿ ರೆಹಮಾನ್‌ ಶರೀಫ್(42), ಶಫೀಕ್‌ ಅಹಮ್ಮದ್‌(38) ಜೆ.ಜೆ.ನಗರ ನಿವಾಸಿ ಮುಸ್ತಾಕ್‌ ಅಹಮ್ಮದ್‌(45), ಇಮ್ರಾನ್‌ ಪಾಷಾ(34) ಬಂಧಿತರು.

ಆರೋಪಿಗಳಿಂದ 25 ಲಕ್ಷ ರೂ. ಮೌಲ್ಯದ 150 ಮೊಬೈಲ್‌ಗ‌ಳು, 25 ಸಾವಿರ ನಗದು, ಆಟೋ ರಿಕ್ಷಾ, ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ತಲೆ ಮರೆಸಿಕೊಂಡಿರುವ ಇತರೆ ಆರು ಮಂದಿ ಆರೋಪಿ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯಕ್ತ ಚಂದ್ರಶೇಖರ್‌ ಮಾಹಿತಿ ನೀಡಿದರು.

ಆರೋಪಿಗಳು ಇತ್ತೀಚೆಗೆ ಹೊಸೂರು ರಸ್ತೆ ಮೂಲಕ ಸೆಂಟ್‌ಜಾನ್ಸ್‌ ಕಡೆ ಹೋಗುವ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಜೇಬಿನಲ್ಲಿದ್ದ 50 ಸಾವಿರ ರೂ. ನಗದು ಕಳವು ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಸುದ್ದುಗುಂಟೆಪಾಳ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ಮೈಕೋಲೇಔಟ್‌ ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಮತ್ತು ಸುದ್ದು ಗುಂಟೆ ಠಾಣೆ ಇನ್‌ಸ್ಪೆಕ್ಟರ್‌ ಮಾರುತಿ ಜಿ.ನಾಯಕ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ವಿಚಾರಣೆ ವೇಳೆ ಆರೋಪಿಗಳು ಆರು ತಿಂಗಳಿ ನಿಂದ ನಗರದ ವಿವಿಧೆಡೆ ಸಂಚರಿಸುವ ಹೆಚ್ಚು ಜನ ಸಂದಣಿ ಇರುವ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾ ಣಿಕರ ಸೋಗಿನಲ್ಲಿ ಸಂಚರಿಸುತ್ತಿದ್ದರು. ಗಮನ ಬೇರೆಡೆ ಸೆಳೆದು ಸಾರ್ವಜನಿಕರ ಮೊಬೈಲ್‌ಗ‌ಳು ಮತ್ತು ಹಣ ಕಳವು ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಇದೇ ವೇಳೆ ಕಳವು ಮಾಡುತ್ತಿದ್ದ ಮೊಬೈಲ್‌ಗ‌ಳನ್ನು ವಿಲೇವಾರಿ ಮಾಡುತ್ತಿದ್ದ ಜಾಲ ವನ್ನು ಪತ್ತೆ ಹಚ್ಚಿರುವ ಪೊಲೀಸರು ಕಳವು ಮೊಬೈಲ್‌ ಗಳನ್ನು ಮಾರಾಟ ಮಾಡಲು ಸ್ವೀಕರಿಸುತ್ತಿದ್ದ ತಂಡ ವನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಆರೋಪಿಗಳ ಪೈಕಿ ಜಾಫ‌ರ್‌ ಸಿದ್ದಿಕ್‌ ಮತ್ತು ಸೈಯದ್‌ ಅಖಿಲ್‌ ಹಾಗೂ ತಲೆಮರೆಸಿಕೊಂಡಿರುವ ಮೊಹಮ್ಮದ್‌ ಜವಾದ್‌ ಮೊಬೈಲ್‌ ಮತ್ತು ನಗದು ಕಳವು ಮಾಡುತ್ತಿದ್ದರೆ, ನಾಪತ್ತೆಯಾಗಿರುವ ಆಟೋ ಚಾಲಕರಾದ ಶಂಶೀರ್‌ ಪಾಷಾ ಮತ್ತು ಮುಜಾಹಿದ್‌ ಪಾಷಾ ಕಳವಿಗೆ ಸಹಾಯ ಮಾಡುತ್ತಿದ್ದರು. ಇನ್ನು ಇತರೆ ಆರೋಪಿಗಳು ಕಳವು ಮೊಬೈಲ್‌ಗ‌ಳನ್ನು ಸ್ವೀಕರಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

ಟೀಸಿ ನೀಡಲು ಲಂಚ ಸ್ವೀಕರಿಸಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗ

ಟೀಸಿ ನೀಡಲು ಲಂಚ ಸ್ವೀಕರಿಸಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗ

ಫೇಸ್‌ಬುಕ್‌ನಲ್ಲಿ ಪೀಠೊಪಕರಣ ಮಾರಲು ಹೋದ ವ್ಯಕ್ತಿಗೆ 98 ಸಾವಿರ ರೂ. ವಂಚನೆ

ಫೇಸ್‌ಬುಕ್‌ನಲ್ಲಿ ಪೀಠೊಪಕರಣ ಮಾರಲು ಹೋದ ವ್ಯಕ್ತಿಗೆ 98 ಸಾವಿರ ರೂ. ವಂಚನೆ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ