ಸುಲಿಗೆ ವೇಳೆ ತಿರುಗಿಬಿದ್ದವರನ್ನೇ ಕೊಲ್ಲುತ್ತಿದ್ದ ದುಷ್ಟರು

ಮಲಯಾಳಂ ನಿರ್ದೇಶಕರ ಪುತ್ರನ ಕೊಂದಿದ್ದ ದುರುಳರು

Team Udayavani, May 27, 2023, 12:27 PM IST

ಸುಲಿಗೆ ವೇಳೆ ತಿರುಗಿಬಿದ್ದವರನ್ನೇ ಕೊಲ್ಲುತ್ತಿದ್ದ ದುಷ್ಟರು

ಬೆಂಗಳೂರು: ನಗರದಲ್ಲಿ ನಿರ್ಜನ ಪ್ರದೇಶಗಳಲ್ಲಿ ಒಂಟಿಯಾಗಿ ಐಷಾರಾಮಿ ಬೈಕ್‌ಗಳಲ್ಲಿ ಓಡಾಡುವವರನ್ನೇ ಟಾರ್ಗೆಟ್‌ ಮಾಡಿ ಮಾರಕಾಸ್ತ್ರ ತೋರಿಸಿ ಬೈಕ್‌ ದರೋಡೆ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿ ಗಳು ಭಾರತೀ ನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಭಾರತೀನಗರದ ತಿಮ್ಮಯ್ಯ ರಸ್ತೆಯ ನಿವಾಸಿ ಮಹಮದ್‌ ಜಬಿ (23), ಯಾಸೀನ್‌ ಖಾನ್‌ (28) ಬಂಧಿತರು.

ಆರೋಪಿಗಳಿಂದ 17 ದ್ವಿಚಕ್ರವಾಹನ, 2 ಆಟೋ ರಿಕ್ಷಾ ಸೇರಿದಂತೆ 15 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಲಯಾಳಂ ಸಿನಿಮಾ ನಿರ್ದೇಶಕರೊಬ್ಬರ ಪುತ್ರನಿಗೆ 2018ರಲ್ಲಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಸಿಕ್ಕಿತ್ತು. ಆತ ತನ್ನ ಮೊದಲ ವೇತನದಲ್ಲಿ ಬಂದ ಹಣವನ್ನು ಉಪ್ಪಾರಪೇಟೆ ಠಾಣೆಯ ವ್ಯಾಪ್ತಿಯ ರಸ್ತೆಯೊಂದರಲ್ಲಿ ಕೈಯಲ್ಲಿ ಹಿಡಿದುಕೊಂಡು ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ. ಇದನ್ನು ಗಮನಿಸಿದ ಮಹಮದ್‌ ಜಬಿ ಕೂಡಲೇ ಆತನ ಕೈಯಲ್ಲಿದ್ದ ಮೊಬೈಲ್‌ ಹಾಗೂ ಹಣ ಕಸಿದುಕೊಂಡು ಹೋಗಿದ್ದ. ಮಹಮದ್‌ ಜಬಿಯನ್ನು ಹಿಂಬಾಲಿಸಿಕೊಂಡು ಹೋಗಿ ಹಿಡಿಯಲು ಯತ್ನಿಸಿದ ನಿರ್ದೇಶಕನ ಪುತ್ರನ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರ ಬಂದು ಜೀವನ ನಿರ್ವಹಣೆಗಾಗಿ ದ್ವಿಚಕ್ರವಾಹನ ಕಳ್ಳತನಕ್ಕೆ ಇಳಿದಿದ್ದ. ಹಲವು ಬಾರಿ ಜೈಲಿಗೆ ಹೋದರೂ ಜಾಮೀನಿನ ಮೇಲೆ ಹೊರ ಬಂದು ಮತ್ತೆ ದ್ವಿಚಕ್ರವಾಹ ಕಳ್ಳತನ ನಡೆಸುತ್ತಿದ್ದ. ಮತ್ತೂಬ್ಬ ಆರೋಪಿ ಯಾಸೀನ್‌ ಖಾನ್‌ ಆತನಿಗೆ ಸಹಕಾರ ನೀಡುತ್ತಿದ್ದ.

ಸಿಕ್ಕಿ ಬಿದ್ದದ್ದು ಹೇಗೆ?: ಮೇ 21ರಂದು ಮುಂಜಾನೆ 5 ಗಂಟೆಗೆ ಸಂಷಾದ್‌ ಎಂಬುವವರು ಭಾರತೀನಗರದ ನೇತಾಜಿ ರಸ್ತೆಯಲ್ಲಿ ಬೈಕ್‌ನಲ್ಲಿ ಒಂಟಿಯಾಗಿ ಹೋಗುತ್ತಿದ್ದರು. ಅದೇ ರಸ್ತೆಯಲ್ಲಿ ಹೊಂಚು ಹಾಕಿ ಕುಳಿತಿದ್ದ ಆರೋಪಿಗಳು ಇವರ ಬೈಕ್‌ ಅಡ್ಡಗಟ್ಟಿದ್ದರು. ಬೈಕ್‌ ನಿಲುಗಡೆ ಮಾಡುತ್ತಿದ್ದಂತೆ ಚೂರಿ ತೋರಿಸಿ ಬೆದರಿಸಿ ಬೈಕ್‌ ಕಸಿದುಕೊಂಡು ಪರಾರಿಯಾಗಿದ್ದರು. ಸಂಷಾದ್‌ ಭಾರತೀನಗರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕೃತ್ಯ ನಡೆದ ಆಸು-ಪಾಸಿನಲ್ಲಿರುವ ಸಿಸಿ ಕ್ಯಾಮೆರಾ ಪರಿಶೀಲಿಸಿ ಆರೋಪಿ ಮಹಮದ್‌ ಜಬಿ ಮುಖ ಚಹರೆ ಪತ್ತೆ ಹಚ್ಚಿ ಆತನಿಗೆ ಎಲ್ಲೆಡೆ ಶೋಧ ನಡೆಸಿದ್ದರು.

ಅದೇ ಹೊತ್ತಿನಲ್ಲಿ ಭಾರತೀನಗರದ ತಿಮ್ಮಯ್ಯ ರಸ್ತೆ ಬಳಿ ಗಾಂಜಾ ಸೇವಿಸಿ ಸಾರ್ವಜನಿಕ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜಗಳ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಕೂಡಲೇ ಪೊಲೀಸರು ಗಲಾಟೆ ಮಾಡುತ್ತಿದ್ದ ವ್ಯಕ್ತಿಯನ್ನು ಠಾಣೆಗೆ ಕರೆತಂದಿದ್ದರು. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಮಹಮದ್‌ ಜಬಿಗೂ ಈತನಿಗೂ ಹೋಲಿಕೆ ಕಂಡು ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ಬೈಕ್‌ ದರೋಡೆ ಮಾಡಿರುವುದನ್ನು ಮಹಮದ್‌ ಜಬಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಐಶಾರಾಮಿ ಬೈಕ್‌ಗಳು 30-40 ಸಾವಿರಕ್ಕೆ ಬಿಕರಿ : ಆರೋಪಿ ಮಹಮದ್‌ ಜಬಿ ಸಹಚರನ ಜತೆಗೆ ಸೇರಿ ಕಳ್ಳತನ ಮಾಡುವ ಅಥವಾ ದರೋಡೆ ಮಾಡಿದ ಡ್ನೂಕ್‌, ಬುಲೆಟ್‌, ಪಲ್ಸರ್‌ನಂತಹ ಐಷಾರಾಮಿ ಬೈಕ್‌ಗಳನ್ನು ಗ್ಯಾರೇಜ್‌ಗಳಲ್ಲಿ ಕೇವಲ 30 ರಿಂದ 40 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ. ಬಂದ ಹಣವನ್ನು ಮಾದಕ ವಸ್ತು ಖರೀದಿ ಸೇರಿದಂತೆ ಇನ್ನಿತರ ದುಂದು ವೆಚ್ಚಕ್ಕೆ ವ್ಯಯಿಸುತ್ತಿದ್ದ. ಕದ್ದ ಬೈಕ್‌ಗಳಲ್ಲಿ ಓಡಾಡುವ ವೇಳೆ ಸಂಚಾರ ಪೊಲೀಸರು ಸಿಕ್ಕಿದರೆ ಆ ಬೈಕ್‌ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗುತ್ತಿದ್ದರು. ಪೊಲೀಸರು ಕದ್ದ ಬೈಕ್‌ಗಳನ್ನು ಆರೋಪಿಗಳಿಂದ ಜಪ್ತಿ ಮಾಡಲು ಮುಂದಾದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

ಇನ್ನು ಮಹಮದ್‌ ಜಬಿ ವಿರುದ್ಧ ಪುಲಕೇಶಿನಗರ, ಭಾರತೀನಗರ, ಎಚ್‌ಎಸ್‌ಆರ್‌ ಲೇಔಟ್‌, ಕಮರ್ಷಿಯಲ್‌ ಸ್ಟ್ರೀಟ್‌, ಕೆ.ಆರ್‌.ಪುರ, ಸದಾಶಿವನಗರ ಸೇರಿದಂತೆ 10ಕ್ಕೂ ಅಧಿಕ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.