15 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದ್ದ ಮನೆಗೆಲಸದಾಕೆ
Team Udayavani, May 11, 2022, 2:41 PM IST
ಬೆಂಗಳೂರು: ಹೆಣ್ಣೂರಿನಲ್ಲಿ ಉದ್ಯಮಿ ಮನೆಯಲ್ಲಿದ್ದ ಚಿನ್ನ, ಪ್ಲಾಟಿನಂ ಆಭರಣ, ವಿದೇಶಿ ಕರೆನ್ಸಿ ಸೇರಿ 15 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ವಸ್ತುಗಳನ್ನು ಮನೆ ಕೆಲಸದಾಕೆಯೇ ಕಳ್ಳತನ ಮಾಡಿ ಪರಾರಿ ಯಾಗಿರುವ ಘಟನೆ ನಡೆದಿದೆ.
ಹೊರಮಾವು ನಿವಾಸಿ ಉದ್ಯಮಿ ಅರವಿಂದ್ ಮನೆಯಲ್ಲಿ ಕಳ್ಳತನವಾಗಿದೆ. ಉದ್ಯಮಿ ಅರವಿಂದ್ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕೆಲ ವರ್ಷಗಳಿಂದ ಹೊರಮಾವಿನಲ್ಲಿ ನೆಲೆಸಿದ್ದಾರೆ. ಮೇ 3ರಂದು ಸುಬ್ಬಲಕ್ಷ್ಮೀ ಎಂಬಾಕೆ ಮನೆಗೆಲಸಕ್ಕೆ ಸೇರಿದ್ದಳು.
ಮೇ 6ರಂದು ಸಂಜೆ 4.30ಕ್ಕೆ ಅರವಿಂದ್ ದಂಪತಿ ಸಭೆಯೊಂದರಲ್ಲಿ ಪಾಲ್ಗೊಳ್ಳಲು ಮನೆಯಿಂದ ಹೊರಗೆ ಹೋಗಿದ್ದರು. ಸಂಜೆ 5.20ಕ್ಕೆ ಮನೆಯಲ್ಲಿ ಅಳವಡಿಸಿದ್ದ ಸಿಸಿ ಟಿವಿ ಕ್ಯಾಮೆರಾವನ್ನು ಮೊಬೈಲ್ನಲ್ಲಿ ಗಮನಿಸಿದಾಗ, ಸುಬ್ಬಲಕ್ಷ್ಮೀ ಎಲ್ಲೂ ಕಾಣಿಸಲಿಲ್ಲ. ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುವ ಯಶೋಧಾಗೆ ಕರೆ ಮಾಡಿ ವಿಚಾರಿಸಿದಾಗ, ಮೆಡಿಕಲ್ ಶಾಪ್ಗೆ ಹೋಗಿ ಬರುವುದಾಗಿ ಸುಬ್ಬಲಕ್ಷ್ಮೀ ಹೊರಗೆ ಹೋಗಿದ್ದಾಳೆ ಎಂದು ಹೇಳಿದ್ದಳು. ಅರವಿಂದ್ ಹಲವು ಬಾರಿ ಸುಬ್ಬಲಕ್ಷ್ಮೀ ಮೊಬೈಲ್ಗೆ ಕರೆ ಮಾಡಿದ್ದರೂ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಆತಂಕಗೊಂಡ ಅರವಿಂದ್ ದಂಪತಿ ಸಂಜೆ 5.45ಕ್ಕೆ ಮನೆಗೆ ವಾಪಸ್ಸಾಗಿ ಬೆಡ್ ರೂಮ್ನಲ್ಲಿದ್ದ ಕಬೋರ್ಡ್, ಡ್ರಾಯರ್ ಪರಿಶೀಲಿಸಿದಾಗ 250 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ, 200 ಯುಎಸ್ ಡಾಲರ್, 200 ಕೆನಡಾ ಡಾಲರ್, ನಗದು ಸೇರಿ 15 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿರುವುದು ಗೊತ್ತಾಗಿತ್ತು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್