ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಮನೆಯಲ್ಲಿ ಕೆಲಸಗಾರನಿಂದಲೇ ಕಳ್ಳತನ
Team Udayavani, Aug 2, 2022, 3:54 PM IST
ಬೆಂಗಳೂರು: ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರ ಬೆಂಗಳೂರಿನ ನಿವಾಸದಲ್ಲಿ ಸಾವಿರಾರು ರೂ.ಮೌಲ್ಯದ ವಿದೇಶಿ ಕರೆನ್ಸಿಗಳು ಹಾಗೂ ಬ್ರ್ಯಾಂಡೆಡ್ ಕಂಪನಿಯ ವಾಚ್ಗಳನ್ನು ಕಳವು ಮಾಡಿದ ಕೆಲಸಗಾರ ಸದಾಶಿವನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಒಡಿಶಾ ಮೂಲದ ಜಯಂತ್ಕುಮಾರ್ ದಾಸ್(32) ಬಂಧಿತ. ಆರೋಪಿಯಿಂದ ವಿದೇಶಿ ಕರೆನ್ಸಿಗಳು, ವಾಚ್ಗಳು ಹಾಗೂ ನಗದು ವಶಕ್ಕೆ ಪಡೆಯಲಾಗಿದೆ. ಕೆಲ ವರ್ಷಗಳಿಂದ ಎಂ.ಬಿ.ಪಾಟೀಲ್ ಅವರ ಮನೆಯಲ್ಲಿ ಐರನ್ ಲಾಂಡ್ರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆರೋಪಿ, ಒಂದು ತಿಂಗಳ ಹಿಂದೆ ಮನೆಯಲ್ಲಿದ್ದ 50 ಸಾವಿರ ರೂ. ಮೌಲ್ಯದ ಆರು ವಿವಿಧ ಕಂಪನಿಯ ವಾಚ್ಗಳು, ಒಂದು ಮೊಬೈಲ್ ಮತ್ತು ವಿದೇಶಿ ಕರೆನ್ಸಿಗಳು ಒಟ್ಟು 1.30 ಲಕ್ಷ ರೂ. ಮೌಲ್ಯದ ವಸ್ತುಗಳು ಕಳವು ಮಾಡಿದ್ದ. ಈ ಬಗ್ಗೆ ಕೆಲಸಗಾರರ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಸಿದ್ದು ಎಂಬುವರು ಪ್ರಶ್ನಿಸಿದಾಗ ಆರೋಪಿ ಸೇರಿದಂತೆ ಯಾವ ಕೆಲಸಗಾರರೂ ಒಪ್ಪಿಕೊಂಡಿರಲಿಲ್ಲ. ಆದರೆ, ಪೊಲೀಸರಿಗೆ ದೂರು ನೀಡವುದಾಗಿ ಬೆದರಿಕೆ ಹಾಕಿದ್ದ ಜಯಂತ್ ಕುಮಾರ್
ದಾಸ್ ಮನೆ ಖಾಲಿ ಮಾಡಿಕೊಂಡು ಒಡಿಶಾಗೆ ಪರಾರಿಯಾಗಿದ್ದ. ಈ ಸಂಬಂಧ ಸಿದ್ದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಒಡಿಶಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?