ಐಷಾರಾಮಿ ಜೀವನಕ್ಕಾಗಿ ದುಷ್ಕೃತ್ಯ: ಯುಟ್ಯೂಬ್‌ನಲ್ಲಿ ಕಳ್ಳತನ ಕಲಿತು ಲಕ್ಷ ಲಕ್ಷ ಲೂಟಿ


Team Udayavani, Apr 23, 2022, 1:13 PM IST

Untitled-1

ಬೆಂಗಳೂರು: ಐಷಾರಾಮಿ ಜೀವನ ನಡೆಸುವುದಕ್ಕಾಗಿ ಹಣ ಹಾಗೂ ಚಿನ್ನಾಭರಣದ ಜತೆಗೆ ವಿದೇಶಕ್ಕೆ ಹೋಗಿ ನೆಲೆಸಬೇಕು ಎಂಬ ದುರುದ್ದೇಶದಿಂದ ಯೂಟ್ಯೂಬ್‌ ನೋಡಿ ಮನೆಗಳ ಕಿಟಕಿ ಸರಳುಗಳ ಕತ್ತರಿಸಿ ಒಳನುಸುಳಿ ಕಳವು ಮಾಡುತ್ತಿದ್ದ ಇಬ್ಬರನ್ನು ಸಂಜಯ್‌ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್‌ ಮೂಲದ ವಿನೋದ್‌ಕುಮಾರ್‌ (34) ಹಾಗೂ ಪಶ್ಚಿಮ ಬಂಗಾಳದ ರೋಹಿತ್‌ ಮಂಡಲ್‌ (28) ಬಂಧಿತರು. ಆರೋಪಿಗಳಿಂದ 79.64 ಲಕ್ಷ ರೂ. ಮೌಲ್ಯದ 792 ಗ್ರಾಂ ಚಿನ್ನಾಭರಣ, 3 ಲ್ಯಾಪ್‌ಟಾಪ್‌, 10 ಮೊಬೈಲ್‌, 6 ಐ-ಪ್ಯಾಡ್‌ಗಳು, 30 ದುಬಾರಿ ಬೆಲೆಯ ವಾಚ್‌ಗಳು, 2 ಕೆನಾನ್‌ ಕ್ಯಾಮರಾ, ಏಳು ಗಾಗಲ್ಸ್‌ಗಳು, ಒಂದು ಪ್ಲೇ ಸ್ಟೇಷನ್‌, 2 ದ್ವಿಚಕ್ರ ವಾಹನಗಳು ಹಾಗೂ 2 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಬಂಧನದಿಂದ ಒಟ್ಟಾರೆ 22 ಪ್ರಕರಣಗಳು ಪತ್ತೆಯಾಗಿವೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ತಿಳಿಸಿದರು.

ಜಾಮೀನಿನ ಮೇಲೆ ಹೊರಬಂದು ಕೃತ್ಯ: ಹೈದರಾಬಾದ್‌ ಮೂಲದ ವಿನೋದ್‌ಕುಮಾರ್‌ 2015ರಲ್ಲಿ 6 ಮನೆಗಳವು ಹಾಗೂ ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಜೈಲು ಸೇರಿದ್ದ. ಜೈಲಿನಿಂದ ಹೊರಬಂದ ಬಳಿಕ ಪೋಷಕರು ಈತನನ್ನು ಮನೆಗೆ ಸೇರಿಸಲಿಲ್ಲ. ಹಾಗಾಗಿ, 2016ರಲ್ಲಿ ಕೋಲ್ಕತ್ತಾಗೆ ಹೋಗಿ ಚಾಲಕನ ವೃತ್ತಿ ಮಾಡುತ್ತಿದ್ದ. ಆ ವೇಳೆ ಬಾಂಗ್ಲಾಮೂಲದ ಯುವತಿಯೊಬ್ಬಳು ಈತನಿಗೆ ಪರಿಚಯವಾಗಿ ಅವಳ ಮೂಲಕ ರೋಹಿತ್‌ ಮಂಡಲ್‌ ಪರಿಚಯವಾಗಿದ್ದ. 2019ರಲ್ಲಿ ಮೂವರು ಬಾಂಗ್ಲಾದೇಶಕ್ಕೆ ಹೋಗಿ ತಮ್ಮ ಹೆಸರುಗಳನ್ನು ಬದಲಾಯಿಸಿಕೊಂಡು ಒಂದು ವರ್ಷ ನೆಲೆಸಿದ್ದರು. ಅಲ್ಲಿಯೇ ಢಾಕಾದಲ್ಲಿ ಪರಿಚಿತಳಾಗಿದ್ದ ಯುವತಿಯನ್ನು ವಿನೋದ್‌ ವಿವಾಹವಾಗಿದ್ದ. ಆದರೆ, ಅಲ್ಲಿ ಯಾವುದೇ ಕೆಲಸವಿಲ್ಲದೇ ಜೀವನ ಮಾಡುವುದು ಕಷ್ಟವಾಗಿದ್ದರಿಂದ ವಾಪಸ್‌ ಭಾರತಕ್ಕೆ ಬಂದು ಪಶ್ಚಿಮ ಬಂಗಾಳದಲ್ಲಿ ನೆಲೆಸಿದ್ದರು. ಕೆಲವು ದಿನಗಳ ಬಳಿಕ ವಿನೋದ್‌ ತನ್ನ ಪತ್ನಿಯೊಂದಿಗೆ ಬೆಂಗಳೂರಿಗೆ ಬಂದಿದ್ದನು.

ಯೂಟ್ಯೂಬ್‌ ನೋಡಿ ಕಳ್ಳತನ ಕಲಿತ: ಯೂಟ್ಯೂಬ್‌ ನೋಡಿ ಮನೆಗಳ ಕಿಟಕಿಯ ಸರಳುಗಳನ್ನು ಕತ್ತರಿಸಿ ಮನೆ ಗಳವು ಮಾಡುವ ವಿಧಾನವನ್ನು ವಿನೋದ್‌ ಕಲಿತಿದ್ದ. ಅದಕ್ಕಾಗಿ ಬೇಕಾಗುವ ಎಲ್ಲ ಪರಿಕರಗಳು ಹಾಗೂ ಒಂದು ಬೈಕ್‌ ಖರೀದಿಸಿ ಅದರ ಜತೆಗೆ ಮತ್ತೂಂದು ಬೈಕ್‌ ಕಳವು ಮಾಡಿದ್ದಾನೆ. ಹಗಲಿನಲ್ಲಿ ಖರೀದಿಸಿದ್ದ ಬೈಕ್‌ನಲ್ಲಿ ಸುತ್ತಾಡಿ ಬೀಗ ಹಾಕಿರುವ ಮನೆಗಳನ್ನು ಗುರು ತಿಸಿ ರಾತ್ರಿ ವೇಳೆ ಕದ್ದ ಬೈಕ್‌ನಲ್ಲಿ ಬಂದು ಮನೆಗಳ್ಳತನ ಮಾಡುವ ವೃತ್ತಿಯನ್ನು ಅಳವಡಿಸಿಕೊಂಡಿದ್ದ. ಪತ್ನಿ ಗರ್ಭಿಣಿಯಾದ ಬಳಿಕ ಆಕೆಯನ್ನು ಪಶ್ಚಿಮ ಬಾಂಗ್ಲಾದಲ್ಲಿ ಬಿಟ್ಟುಬಂದು ರೋಹಿತ್‌ ಮಂಡಲ್‌ ನನ್ನು ಬೆಂಗಳೂರಿಗೆ ಕರೆತಂದಿದ್ದ. ಹಗಲಿನಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರುತಿಸುತ್ತಿದ್ದ ವಿನೋದ್‌, ಆ ಮನೆಯ ಲೋಕೇಷನ್‌ ಅನ್ನು ಮಂಡಲ್‌ಗೆ ಕಳುಹಿಸುತ್ತಿದ್ದ.

ರಾತ್ರಿ ವೇಳೆ ಆ ಸ್ಥಳಕ್ಕೆ ಹೋಗಿ ಮನೆಗಳವು ಮಾಡುತ್ತಿದ್ದ ಎಂದು ವಿವರಿಸಿದರು. ಕಳ್ಳತನ ಮಾಡಿದ್ದರಲ್ಲಿ ಕೆಲವು ಆಭರಣಗಳನ್ನು ತನ್ನ ಪತ್ನಿಗೆ ತೆಗೆದಿಟ್ಟು ಉಳಿದಿದ್ದನ್ನು ಮಾರಾಟ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ. ಅಂತಾರಾಷ್ಟ್ರೀಯ ಕಂಪನಿ ವಸ್ತುಗಳನ್ನು ಖರೀದಿಸಿ ಭೋಗದ ಜೀವನ ನಡೆಸುತ್ತಿದ್ದ. ಮಾರ್ಚ್‌ನಲ್ಲಿ ಸಂಜಯ್‌ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.