ಕಳವು ಯತ್ನ: ಆರೋಪಿಗಳು ಪರಾರಿ
Team Udayavani, Nov 6, 2021, 9:57 AM IST
Representative Image used
ಬೆಂಗಳೂರು: ಚಾಮರಾಜಪೇಟೆಯ ಮಕ್ಕಳಕೂಟ ಉದ್ಯಾನದ ಪಕ್ಕದಲ್ಲಿರುವ ಡಾ. ರಾಜ್ಕುಮಾರ್ ಹಾಗೂ ಡಾ. ಅಂಬರೀಶ್ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಭವನದೊಳಗೆ ನುಗ್ಗಿದ ಇಬ್ಬರು ಕಳ್ಳರು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಲು ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.
ಆರೋಪಿಗಳ ಹಿಡಿಯಲು ಬಂದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದು ತಳ್ಳಿ ಪರಾರಿಯಾಗಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಂಪೌಂಡ್ಗೆ ಹೊಂದಿಕೊಂಡಿರುವ ಕಲಾಭವನದ ಹಿಂಭಾಗದ ಕಾಂಪೌಂಡ್ ಮೂಲಕ ಕಲಾಭವನದ ಆವರಣಕ್ಕೆ ಬಂದಿ ರುವ ಕಳ್ಳರು, ಶೌಚಾಲಯದ ಕಿಟಕಿ ಗಾಜುಗಳನ್ನು ತೆಗೆದು ಒಳನುಸುಳಿದ್ದಾರೆ.
ಇದನ್ನೂ ಓದಿ;- ಮಳೆ: ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ
ನಂತರ ಸಿಸಿ ಕ್ಯಾಮರಾದ ವೈಯರ್ ಕಟ್ ಮಾಡಿದ್ದು, ಎಲೆಕ್ಟ್ರಾನಿಕ್ ವೈಯರ್ ಹಾಗೂ ಪೈಪ್ಗ್ಳನ್ನು ಕಳುವಿಗೆ ಯತ್ನಿಸಿದ್ದಾರೆ. ಶಬ್ದ ಕೇಳಿ ಒಳಗೆ ಸೆಕ್ಯೂರಿಟಿ ಗಾರ್ಡ್ಬಂದಾಗ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕಳವಿಗೆ ತಂದಿದ್ದ ಸುತ್ತಿಗೆ, ವೈಯರ್ ಕಟ್ಟರ್ ಮತ್ತು ಇತರೆ ವಸ್ತುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ವ್ಯವಸ್ಥಾಪಕರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್