ಗಾಂಧೀಜಿಯ ಅಧ್ಯಯನಕ್ಕೆ ವಿದ್ಯಾರ್ಥಿಗಳೇ ಇಲ್ಲ


Team Udayavani, Oct 2, 2018, 6:00 AM IST

mahatma-gandhiaaa.jpg

ಬೆಂಗಳೂರು: ಅಹಿಂಸಾ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಮಹಾತ್ಮ ಗಾಂಧೀಜಿಯವರ ಬಗ್ಗೆ ಅಧ್ಯಯನ ಮಾಡಲು ಡಿಪ್ಲೊಮಾ ಕೋರ್ಸ್‌ಗೆ ವಿದ್ಯಾರ್ಥಿಗಳೇ ಇಲ್ಲ!

ಬೆಂಗಳೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ದುಸ್ಥಿತಿ ಇದು. ವಿಶ್ವವೇ ಗಾಂಧೀಜಿಯವರ 150ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ಕೇಂದ್ರವು ಗಾಂಧೀಜಿಯವರ ಜೀವನ ಚರಿತ್ರೆ ತಿಳಿಸಲು ಗಾಂಧಿ ಅಧ್ಯಯನ ಎಂಬ ವಿಷಯದಲ್ಲಿ ಒಂದು ವರ್ಷದ ಡಿಪ್ಲೊಮಾ ಕೋರ್ಸ್‌ ನೀಡುತ್ತಾ ಬಂದಿದೆ. ಪ್ರಸಕ್ತ ಸಾಲಿನಲ್ಲಿ ಈ ಕೋರ್ಸ್‌ಗೆ ಒಂದೇ ಒಂದು ಅರ್ಜಿ ಬಂದಿಲ್ಲ. ವಿದ್ಯಾರ್ಥಿಗಳು ಇಲ್ಲದೇ ಇರುವುದರಿಂದ ಕೋರ್ಸ್‌ ಮುಚ್ಚುವ ಸ್ಥಿತಿಗೆ ತಲುಪಿಸಿದೆ.

ಮಾಜಿ ರಾಷ್ಟ್ರಪತಿ ಡಾ.ಸರ್ವಪಳ್ಳಿ ರಾಧಾಕೃಷ್ಣನ್‌ ಅವರು 1965 ಡಿಸೆಂಬರ್‌ 8ರಂದು ಬೆಂಗಳೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಗಾಂಧಿ ಭವನದ ಹೆಸರಿನಲ್ಲಿ ಈ ಕಟ್ಟಡವು 1969ರ ಅಕ್ಟೋಬರ್‌ 2ರಂದು ವಿದ್ಯಾರ್ಥಿಗಳ ಉನ್ನತ ಸಂಶೋಧನೆಗೆ ಸಿದ್ಧವಾಗಿತ್ತು. ಅಧ್ಯಯನ ಕೇಂದ್ರದ ಗ್ರಂಥಾಲಯದಲ್ಲಿ ಎರಡು ಸಾವಿರಕ್ಕೂ ಅಧಿಕ ಪುಸ್ತಕವಿದೆ. ಈ ಕೇಂದ್ರದ ಮೂಲಕವೇ ವಿವಿ ವ್ಯಾಪ್ತಿಯ ಸ್ನಾತಕೋತ್ತರ ಕಾಲೇಜುಗಳಿಗೆ ಗಾಂಧೀಜಿಯವರ ಜೀವನ, ಸಾಧನೆ, ಹೋರಾಟ, ತತ್ವ, ಆದರ್ಶದ ಕುರಿತು ಪಠ್ಯಕ್ರಮ ಆಧಾರಿತವಾಗಿ ಕೋರ್ಸ್‌ಗಳನ್ನು ನೀಡುತ್ತದೆ.

ಗಾಂಧೀಜಿಯವರ ಜೀವನ ಹಾಗೂ ಸಮಕಾಲೀನ ಅನ್ವಯತೆ ಕುರಿತು ಉಪನ್ಯಾಸ ಕಾರ್ಯಕ್ರಮ, ಸೆಮಿನಾರ್‌, ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳುತ್ತಾ ಬರುತ್ತಿದೆ. ಸಂಶೋಧನಾ ಪ್ರಬಂಧಗಳ ಮಂಡನೆಗೂ ಕೇಂದ್ರದಿಂದ ಉತ್ತೇಜನ ನೀಡಲಾಗುತ್ತಿದೆ. ಗಾಂಧಿ ತತ್ವ ಪ್ರಸಾರಕ್ಕೆ ಬೇಕಾದ ಪುಸ್ತಕಗಳನ್ನು ಹೊತರುತ್ತಿದೆ.

ಇದರ ಜತೆಗೆ ಕಳೆದ 15 ವರ್ಷದಿಂದ ಗಾಂಧಿ ಅಧ್ಯಯನ ಕೇಂದ್ರದಿಂದಲೇ ನೇರವಾಗಿ ಒಂದು ವರ್ಷದ ಡಿಪ್ಲೊಮಾ ಕೋರ್ಸ್‌ ನೀಡಲಾಗುತ್ತಿದೆ. ಸರಾಸರಿ 20 ಇನ್‌ಟೇಕ್‌(ಪ್ರವೇಶಾತಿ) ಹೊಂದಿರುವ ಗಾಂಧಿ ಅಧ್ಯಯನ ಕೋರ್ಸ್‌ಗೆ ಈ ವರ್ಷ ಒಂದೇ ಒಂದು ಅರ್ಜಿ ಕೂಡ ಬಂದಿಲ್ಲ. ಹೀಗಾಗಿ ಕೇಂದ್ರದಲ್ಲಿ ಈ ಕೋರ್ಸ್‌ ಮುಚ್ಚಲು ಚಿಂತನೆ ನಡೆಸಿದ್ದಾರೆ.

ಇದೊಂದು ಡಿಪ್ಲೊಮಾ ಕೋರ್ಸ್‌, ಉದ್ಯೋಗಾವಕಾಶ ಕಡಿಮೆ ಇರುವುದರಿಂದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸದೇ ಇರಬಹುದು. ಹೀಗಾಗಿ ಬೆಂವಿವಿ ದೂರ ಶಿಕ್ಷಣದ ಮೂಲಕ ಗಾಂಧಿ ಅಧ್ಯಯನ ಡಿಪ್ಲೊಮಾ ಕೋರ್ಸ್‌ ಮುಂದುವರಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಬೆಂವಿವಿ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಕಳೆದ 15 ವರ್ಷಗಳಲ್ಲಿ ಅನೇಕ ವಿದ್ಯಾರ್ಥಿಗಳು ಗಾಂಧೀಜಿಯರ ಜೀವನ, ಸಾಧನೆ ಹಾಗೂ ಹೋರಾಟದ ಅನೇಕ ವಿಚಾರಗಳು ಡಿಪ್ಲೊಮಾ ಕೋರ್ಸ್‌ ಮೂಲಕ ತಿಳಿದುಕೊಂಡಿದ್ದಾರೆ. ಅಧ್ಯಯನ ಕೇಂದ್ರದಿಂದಲೇ ಪಠ್ಯಕ್ರಮ ಸಿದ್ಧಪಡಿಸಲಾಗುತಿತ್ತು. ದಾಖಲಾಗಿರುವ ವಿದ್ಯಾರ್ಥಿಗಳಿಗೆ ವಿಷಯಾಧಾರಿತವಾಗಿ ಯಾವುದೇ ಕೊರತೆ ಇಲ್ಲದಂತೆ ನೋಡಿಕೊಳ್ಳುತ್ತಿದ್ದೇವೆ. ಇದೇ ಮೊದಲ ಬಾರಿಗೆ ಒಂದೇ ಒಂದು ಅರ್ಜಿ ಬಂದಿಲ್ಲ. ಹೀಗಾಗಿ ಡಿಪ್ಲೊಮಾ ಕೋರ್ಸ್‌ ನಡೆಸುವುದು ಕಷ್ಟ ಎಂದು ವಿವರಿಸಿದರು.

ಅಧ್ಯಯನ ಕೇಂದ್ರದಿಂದಲೇ ನೇರವಾಗಿ ನೀಡುವ ಒಂದು ವರ್ಷದ ಡಿಪ್ಲೊಮಾ ಕೋರ್ಸ್‌ಗೆ ಯಾವುದೇ ಅರ್ಜಿ ಬಂದಿಲ್ಲ. ಆದರೆ, ಬೆಂಗಳೂರು ವಿವಿ ವ್ಯಾಪ್ತಿಯ ಸ್ನಾತಕೋತ್ತರ ಕಾಲೇಜುಗಳಲ್ಲಿ ಗಾಂಧೀಜಿಯವರ ಜೀವನಾಧಾರಿತ ಕೋರ್ಸ್‌ಗಳು ನಡೆಯುತ್ತಿದೆ. ಅಲ್ಲಿ ವಿದ್ಯಾರ್ಥಿಗಳ ದಾಖಲಾತಿಯೂ ಚೆನ್ನಾಗಿದೆ. 
– ಡಾ.ನಟರಾಜ್‌ ಹುಳಿಯಾರ, ನಿರ್ದೇಶಕ, ಗಾಂಧಿ ಅಧ್ಯಯನ ಕೇಂದ್ರ ಬೆಂವಿವಿ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.