ಸಂವಿಧಾನ ಅನುಷ್ಠಾನದಲ್ಲೇ ದೋಷವಿದೆ


Team Udayavani, Jul 22, 2019, 3:07 AM IST

savidhaana

ಬೆಂಗಳೂರು: ಸಂವಿಧಾನದಲ್ಲಿ ಯಾವುದೇ ದೋಷವಿಲ್ಲ ಬದಲಾಗಿ ಅದನ್ನು ಅನುಷ್ಠಾನ ಮಾಡುವವರಲ್ಲೇ ದೋಷವಿದ್ದು, ಅವರಿಂದಲೇ ಸಮಸ್ಯೆ ಉಂಟಾಗುತ್ತಿದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ತಿಳಿಸಿದರು. ಕರ್ನಾಟಕ ವರ್ಕರ್ ಯೂನಿಯನ್‌ ವತಿಯಿಂದ ಕಬ್ಬನ್‌ ಉದ್ಯಾನದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆದ “ಭಾರತ ಸಂವಿಧಾನ ಕಿರು ಪರಿಚಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಂತಿ, ಸಮಾನತೆ, ಜಾತ್ಯತೀತತೆಯಂತಹ ಮೂಲ ಅಂಶಗಳಿಂದ ರಚನೆಯಾಗಿರುವ ಭಾರತ ಸಂವಿಧಾನದಲ್ಲಿ ಯಾವುದೇ ದೋಷವಿಲ್ಲ. ವಿದೇಶಿಗರ ಆಳ್ವಿಕೆಯಿಂದ ಹೊರಬಂದ ಭಾರತವನ್ನು ಇಂದು ವಿಶ್ವವೇ ಗುರಿತಿಸುವಂತೆ ಬೆಳೆಸಿರುವುದು 1950ರಲ್ಲಿ ಜಾರಿಗೆ ತಂದ ಇದೇ ಸಂವಿಧಾನ. ಆದರೆ, ಇತ್ತೀಚಿನ ದಿನಗಳಲ್ಲಿ ಸಂವಿಧಾನ ವಿರೋಧಿ ಧ್ವನಿ ಕೇಳಿಬರುತ್ತಿದೆ.

ಇದಕ್ಕೆ ಪ್ರಮುಖ ಕಾರಣ ಸಂವಿಧಾನ ಅನುಷ್ಠಾನಕ್ಕೆ ತರುವಲ್ಲಿ ಆಗುತ್ತಿರುವ ಸಮಸ್ಯೆ. ಸಂವಿಧಾನ ಅನುಷ್ಠಾನದ ಅಧಿಕಾರ ಹೊಂದಿರುವ ಜನಪ್ರತಿನಿಧಿಗಳಲ್ಲಿ ದೋಷವಿದೆ. ಯೋಗ್ಯರಲ್ಲದವರನ್ನು ಆಯ್ಕೆ ಮಾಡಿ ಕಳಿಸಿದಾಗ ಇಂತಹ ಸಮಸ್ಯೆ ಬರುತ್ತವೆ. ಮೊದಲು ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದರು.

ಬೇರೊಂದಕ್ಕೆ ಅವಕಾಶವಿಲ್ಲ: ಭಾರತ ಸಂವಿಧಾನ ತಿದ್ದುಪಡಿಗೆ ಅವಕಾಶವಿದೆಯೇ ಹೊರತು ಅದಕ್ಕೆ ಪರ್ಯಾವಾಗಿ ಬೇರೊಂದು ಸಂವಿಧಾನ ತರುವುದಕ್ಕೆ ಅವಕಾಶವಿಲ್ಲ. ಇನ್ನು ತಿದ್ದುಪಡಿ ಕೂಡ ಸಂವಿಧಾನದ ಮೂಲ ತತ್ವ, ಆಶಯಗಳಿಗೆ ಧಕ್ಕೆ ತರುವಂತಿರಬಾರದು. ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಮಿಕ ಹಾಗೂ ಮಾಲೀಕ ಎಲ್ಲರೂ ಒಂದೇ. ಕಾನೂನು, ಭದ್ರತೆ, ನಿಯಮಗಳು ಕೂಡ ಒಂದೇ ಆಗಿವೆ. ಇಂತಹ ಸಮಾನತೆಯನ್ನು ಸಹಿಸಿಕೊಳ್ಳದ ಮನಸ್ಥತಿಯವರು ಸಂವಿಧಾನ ಬದಲಿಸುವ ಮಾತನಾಡುತ್ತಿದ್ದಾರೆ ಎಂದರು.

ಕಾಯ್ದೆಯನ್ನೇ ತಲೆಕೆಳಗಾಗಿಸುತ್ತಿದ್ದಾರೆ: 80ರ ದಶಕದಲ್ಲಿ ಬಟ್ಟೆ ಬದಲಿಸಿದಂತೆ ರಾಜಕಾರಣಿಗಳು ದಿನಕ್ಕೊಂದು ಪಕ್ಷ ಬದಲಿಸುತ್ತಿದ್ದರು. ಅದನ್ನು ಅತೋಟಿಗೆ ತರಲು ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ, ಇಂದು ಆ ಕಾಯ್ದೆಯನ್ನೇ ತಲೆಕೆಳಗಾಗಿಸುವಂತೆ “ಆಪರೇಷನ್‌’ಗಳು ನಡೆಯುತ್ತಿವೆ. ಆಡಳಿತಶಾಹಿ ಮನಸ್ಥಿತಿಯ ಜನಪ್ರತಿನಿಧಿಗಳು ಈ ಮೂಲಕ ಕಾನೂನನ್ನು ಮೀರಿ ಚಟುವಟಿಕೆ ನಡೆಸುತ್ತಿದ್ದಾರೆ. ಹೀಗಾಗಿ, ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ಎಚ್ಚರ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ವರ್ಕರ್ ಯೂನಿಯನ್‌ ಪ್ರಧಾನ ಕಾರ್ಯದರ್ಶಿ ಇ.ಕೆ.ಎನ್‌.ರಾಜಾ, ಸಲಹೆಗಾರ ರಾಮಮೂರ್ತಿ ಉಪಸ್ಥಿತರಿದ್ದರು.

ಸಮಾಜದಲ್ಲಿ ಗುಲಾಮಗಿರಿ ಮುಂದುವರಿಸಲು ಇಚ್ಛಿಸುತ್ತಿರುವ ಆಡಳಿತಶಾಹಿ ಮನಸ್ಥಿತಿಗೆ ಸಂವಿಧಾನ ಬೇಡವಾಗಿದೆ. ಹೀಗಾಗಿ, ಸಂವಿಧಾನ ಸುಡುವುದು, ಧಿಕ್ಕರಿಸುವುದು, ಬದಲಾಯಿಸುವ ಮಾತನಾಡುತ್ತಿದ್ದಾರೆ. ಅಂತಹ ದೇಶ ವಿರೋಧಿ ದನಿಗಳ ವಿರುದ್ಧ ಸಂವಿಧಾನ ಅರಿತ ಪ್ರಬುದ್ಧರು ಹೋರಾಡಬೇಕಿದೆ.
-ನಾಗಮೋಹನ್‌ ದಾಸ್‌, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.