ಅನ್ಯಭಾಷಾ ನಾಮಫಲಕಗಳ ವಿರುದ್ಧ ಕ್ರಮವಿಲ್ಲ
Team Udayavani, Aug 13, 2018, 12:40 PM IST
ಬೆಂಗಳೂರು: ಅನ್ಯಭಾಷಾ ನಾಮಫಲಕಗಳ ವಿರುದ್ಧ ಕ್ರಮಕೈಗೊಂಡು ಮಳಿಗೆಗಳ ಪರವಾನಗಿ ರದ್ದುಪಡಿಸುವಂತೆ ಕೌನ್ಸಿಲ್ ಸಭೆಯಲ್ಲಿ ನಿರ್ಣಯಕೈಗೊಂಡರೂ ಕ್ರಮಕ್ಕೆ ಮುಂದಾಗದ ಅಧಿಕಾರಿಗಳನ್ನು ಮೇಯರ್ ಸಂಪತ್ರಾಜ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಭಿತ್ತಪತ್ರ ಹಾಗೂ ಗೋಡೆ ಬರಹ ಅಳಿಸಿ ಹಾಕುವ ಅಭಿಯಾನಕ್ಕೆ ಶನಿವಾರದಿಂದ ಚಾಲನೆ ನೀಡಿದ್ದ ಮೇಯರ್ ಸಂಪತ್ರಾಜ್ ಭಾನುವಾರವೂ ನಗರದ ಹಲವು ಭಾಗಗಳಲ್ಲಿ ಭಿತ್ತಿಪತ್ರ ತೆರವುಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಭಾನುವಾರ ಹಲಸೂರು ಮೆಟ್ರೋ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಭಿತ್ತಿಪತ್ರ ತೆರವುಗೊಳಿಸಿದ ಕಾರ್ಯಾಚರಣೆ ನಡೆಸುವ ವೇಳೆ ಅಂಗಡಿಗಳ ಮುಂಭಾಗದ ನಾಮಫಲಕದಲ್ಲಿ ನಿಯಮಾನುಸಾರ ಕನ್ನಡ ಭಾಷೆ ಬಳಸದಿರುವುದು ಕಂಡು ಕೋಪಗೊಂಡ ಮೇಯರ್, ಅಧಿಕಾರಿಗಳ ವಿರುದ್ಧ ಗರಂ ಆದರು.
ಜೀವನ್ಭೀಮಾನಗರ ವಾರ್ಡ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಸನ್ನ ಅವರನ್ನು ತರಾಟೆಗೆ ತೆಗೆದುಕೊಂಡ ಮೇಯರ್, ಎಲ್ಲ ರೀತಿಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಶೇ.40 ಇತರೆ ಭಾಷೆ ಬಳಸಬೇಕು ಎಂದು ಸೂಚಿಸಿದರೂ, ನಿಯಮ ಪಾಲಿಸದವರ ವಿರುದ್ಧ ಏಕೆ ಕ್ರಮಕೈಗೊಂಡಿಲ್ಲ. ಇನ್ನೆಷ್ಟು ಬಾರಿ ನಿಮಗೆ ಸೂಚನೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಕನ್ನಡ ಬಳಸದಂತಹ ಮಳಿಗೆಗಳಿಗೆ ನೋಟಿಸ್ ಸರಿಪಡಿಸದಿದ್ದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ವೈದ್ಯಾಧಿಕಾರಿಗಳ ಜತೆ ಸಭೆ: ಅಂಗಡಿ-ಮುಂಗಟ್ಟುಗಳ ಮುಂದಿನ ನಾಮಫಲಕಗಳಲ್ಲಿ ಶೇ.60ರಷ್ಟು ಜಾಗವನ್ನು ಕನ್ನಡ ಭಾಷೆಗೆ ನೀಡುವ ಕುರಿತಂತೆ ವೈದ್ಯಾಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಲಾಗುವುದು ಎಂದು ಮೇಯರ್ ಆರ್.ಸಂಪತ್ ರಾಜ್ ತಿಳಿಸಿದರು.
ನಾಮಫಲಕದಲ್ಲಿ ಕನ್ನಡಭಾಷೆ ಬಳಕೆ ವಿಚಾರವಾಗಿ ಅಂಗಡಿ ಮಾಲಿಕರ ಬಳಿ ಕೇಳಿದರೆ, ನಾವು ನಾಮಫಲಕ ಮತ್ತೆ ಅಳವಡಿಸಬೇಕಾದರೆ 4 ರಿಂದ 5 ಸಾವಿರ ರು. ಬೇಕಾಗುತ್ತದೆ. ತಿಂಗಳೆಲ್ಲಾ ದುಡಿದರೂ 8 ಸಾವಿರ ಬರುವುದಿಲ್ಲ. ನಾವೇಗೆ ಅಳವಡಿಸಬೇಕು ಎಂದು ಪ್ರಶ್ನೆ ಮಾಡುತ್ತಾರೆ. ಕೆಲ ಖಾಸಗಿ ಸಂಸ್ಥೆಗಳು ಅಂಗಡಿಗಳಿಗೆ ನಾಮಫಲಕಗಳನ್ನು ಅಳವಡಿಸಿದ್ದು, ಈ ಕುರಿತು ಆರೋಗ್ಯಾಧಿಕಾರಿಗಳ ಜತೆ ಸಭೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ